ರಾಜ್ಯ

ರಾಜ್ಯ ಸರ್ಕಾರ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜ್ಯಪಾಲರಿಗೆ ದೂರು ನೀಡಿದ ಸಿ.ಟಿ.ರವಿ

ಮೈಸೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹಾಗೂ ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ಮಧ್ಯೆ ಜಟಾಪಟಿ ಇದೀಗ ರಾಜ್ಯಪಾಲರ ಭವನಕ್ಕೆ ತಲುಪಿದ್ದು, ರಾಜ್ಯಪಾಲರು ಮಧ್ಯ ಪ್ರವೇಶಿಸಿ ರಾಜ್ಯ ಸರ್ಕಾರದ ಕ್ರಮ ಕೈಗೊಳ್ಳುವಂತೆ ಸಿ.ಟಿ.ರವಿ ದೂರು ನೀಡಿದ್ದಾರೆ.

ರಾಜಭವನಕ್ಕೆ ಇಂದು(ಡಿಸೆಂಬರ್‌.30) ಬಿಜೆಪಿ ಮುಖಂಡರೊಂದಿಗೆ ತೆರಳಿದ ಸಿ.ಟಿ.ರವಿ ತಮ್ಮ ಬಂಧನ ಪ್ರಕರಣದ ವಿಚಾರವಾಗಿ ಸತ್ಯಶೋಧನೆ ನಡೆಸುವಂತೆ ಮನವಿ ಮಾಡಿದ್ದಾರೆ. ಅಲ್ಲದೇ ಡಿಸಿಎಂ ಡಿ.ಕೆ.ಶಿವಕುಮಾರ್‌ ಮತ್ತು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಅವರ ನಿರ್ದೇಶನದಂತೆ ಸಂವಿಧಾನ ಮತ್ತು ಕಾನೂನು ಉಲ್ಲಂಘನೆ ಮಾಡಿ ಪೊಲೀಸ್‌ ಇಲಾಖೆ ಮೂಲಕ ಅಧಿಕಾರದ ದುರ್ಬಳಕೆ ಮಾಡಿದ ರಾಜ್ಯ ಸರ್ಕಾರದ ವಿರುದ್ಧ ಕ್ರಮಕೈಗೊಳ್ಳುವಂತೆ ವಿಧಾನ ಪರಿಷತ್‌ ವಿಪಕ್ಷ ನಾಯಕ ಎನ್‌.ಛಲವಾದಿ ನಾರಾಯಣ ಅವರ ನೇತೃತ್ವದಲ್ಲಿ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಅವರಿಗೆ ದೂರು ಸಲ್ಲಿಸಿದ್ದಾರೆ.

ಇನ್ನು ಸಿ.ಟಿ. ರವಿ ಅವರು ಈ ದೂರಿನಲ್ಲಿ ಸದನದಲ್ಲಿ ಅಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದೇನೆಂಬ ಬಗ್ಗೆ ತನ್ನ ಬಂಧನವಾಗಿದ್ದು, ಆ ನಂತರ ಆದ ಬೆಳವಣಿಗೆಗಳನ್ನು ಸೇರಿದಂತೆ ಒಟ್ಟು 8 ಪುಟಗಳ ಮೂಲಕ ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಬೆಲೆಯಲ್ಲಿ ನಾವು ತಗ್ಗೋದೇ ಇಲ್ಲ

ಬೆಲೆಯಲ್ಲಿ ನಾವು ತಗ್ಗೋದೇ ಇಲ್ಲ ಅಂತ ಚಿನ್ನ ಬೆಳ್ಳಿ! ಬೆಲೆ ಎಷ್ಟಾದರೂ ನಾವು ಬಗ್ಗೋದೇ ಇಲ್ಲ ಅಂತ ಕೆಲ ಗ್ರಾಹಕರು…

2 hours ago

ಓದುಗರ ಪತ್ರ: ಡಿಕೆಶಿಯವರ ನಿಲುವು ಸ್ವಾಗತಾರ್ಹ

ವಿದೇಶಿ ನೆಲದಲ್ಲಿ ದೇಶವನ್ನು ಟೀಕಿಸುವುದಿಲ್ಲ ಎಂಬ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರ ನಿಲುವು ಸ್ವಾಗತಾರ್ಹವಾಗಿದೆ. ಗಣರಾಜ್ಯೋತ್ಸವದ ಸಂದರ್ಭದಲ್ಲೇ ಅವರು…

2 hours ago

ಓದುಗರ ಪತ್ರ: ಬಾಂಗ್ಲಾದಲ್ಲಿ ಹಿಂದೂಗಳ ಸರಣಿ ಹತ್ಯೆ ಖಂಡನೀಯ

ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಬಾಂಗ್ಲಾ ದೇಶಕ್ಕೆ ೧೯೭೨ ರಲ್ಲಿ ಪಾಕಿಸ್ತಾನದಿಂದ ಬೇರ್ಪಡಿಸಿ…

2 hours ago

ಓದುಗರ ಪತ್ರ: ನಂಜನಗೂಡಿನಲ್ಲಿ ಆಟೋಗಳಿಗೆ ಮೀಟರ್ ದರ ಜಾರಿಯಾಗಲಿ

ದಕ್ಷಿಣ ಕಾಶಿ ಎಂದೇ ಹೆಸರುವಾಸಿಯಾಗಿರುವ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ಪ್ರತಿನಿತ್ಯ ಸಾವಿರಾರು ಭಕ್ತಾದಿಗಳು ಆಗಮಿಸುತ್ತಾರೆ. ಆದರೆ ಕೆಲವು ಆಟೋ ಚಾಲಕರು…

2 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ‘ನಿಯೋನೇಟಲ್ ಕೇರ್’ ಸೇವೆಯ ಮಾತೆ ಡಾ.ಅರ್ಮಿಡಾ ಫೆರ್ನಾಂಡೀಸ್

ಏಷ್ಯಾದ ಪ್ರಪ್ರಥಮ ಎದೆಹಾಲಿನ ಬ್ಯಾಂಕನ್ನು ಆರಂಭಿಸಿದ ಕೀರ್ತಿ ಕರ್ನಾಟಕದಲ್ಲಿ ಹುಟ್ಟಿದ, ಗೋವಾ ಮೂಲದ, ಈಗ ಮುಂಬೈಯಲ್ಲಿ ತನ್ನ ಸಾಮಾಜಿಕ ಕಾರ್ಯಗಳನ್ನು…

2 hours ago

ಮಲೆ ಮಹದೇಶ್ವರ ಬೆಟ್ಟ| ಕಾಲ್ನಡಿಗೆ ಪಾದಯಾತ್ರಿಗಳಿಗೆ ಸೌಲಭ್ಯ ಕಲ್ಪಿಸಿ: ಡಿಸಿಎಂ ಡಿಕೆಶಿ ಸೂಚನೆ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಪ್ರತಿ ವರ್ಷದಂತೆ ಈ ವರ್ಷವೂ ಸಹ…

2 hours ago