reaction on karnataka congress government
ಬೆಂಗಳೂರು: ನಾವು ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಮಾತಿನಲ್ಲಿ ಟೀಕೆ ಮಾಡುತ್ತಿದ್ದೇವೆ. ಸರ್ಕಾರಕ್ಕೆ ಜನ ಯಾವಾಗ ಕಾಲಲ್ಲಿ ಇರುವುದನ್ನು ಬಿಚ್ಚಿ ಹೊಡೆಯುತ್ತಾರೋ ಗೊತ್ತಿಲ್ಲ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಈ ಕುರಿತು ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಮ್ಮ ಆಕ್ರೋಶ ಕೇವಲ ಬಾಯಿ ಮಾತಿನಲ್ಲಿದೆ. ಸರ್ಕಾರದ ವಿರುದ್ಧ ಜನರ ಆಕ್ರೋಶ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಜನರು ಕಾಲಲ್ಲಿರುವುದನ್ನು ಕೈಗೆ ತೆಗೆದುಕೊಂಡು ಹೊಡೆಯುವ ಕಾಲ ಸನಿಹದಲ್ಲಿದೆ. ಈ ಸರ್ಕಾರಕ್ಕೆ ಕಾಲಲ್ಲಿ ಇರುವುದನ್ನು ಬಿಚ್ಚಿ ಹೊಡೆದಾಗಲೇ ಬುದ್ಧಿ ಬರುವುದು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸರ್ಕಾರದ ವಿರುದ್ಧ ನಮ್ಮ ಶಕ್ತಿ ಮೀರಿ ಹೋರಾಟ ಮಾಡುತ್ತಿದ್ದೇವೆ. ಸರ್ಕಾರದ ಭಂಡತನಕ್ಕೆ ಯಾರ ಹತ್ತಿರವೂ ಉತ್ತರ ಇಲ್ಲ. ಸಾರ್ವಜನಿಕವಾಗಿ ಬೆತ್ತಲಾದ ಮೇಲೂ ಮರ್ಯಾದೆ ಇಲ್ಲದವರ ತರಹ ಓಡಾಡುತ್ತಿರುವವರಿಗೆ ಏನು ಹೇಳುವುದು ಎಂದು ಪ್ರಶ್ನೆ ಮಾಡಿದರು.
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…
ಮಂಡ್ಯ: ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ ಭಾಗದ ರೈತರನ್ನು ಆರ್ಥಿಕವಾಗಿ ಅಭಿವೃದ್ಧಿ ಮಾಡಲು ಮಂಡ್ಯದ ವಿ.ಸಿಫಾರಂನಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯವನ್ನು…
ಬೆಂಗಳೂರು: ಆರ್.ಅಶೋಕ್ ಅವರನ್ನು ವಿಪಕ್ಷ ನಾಯಕನ ಸ್ಥಾನದಿಂದ ಇಳಿಸದೇ ಹೋದರೆ ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿ ಇರುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್…
ನವದೆಹಲಿ: ಭಾರತ-ರಷ್ಯಾ ಉಭಯ ದೇಶಗಳ ನಡುವೆ ನಡೆದ ದ್ವಿಪಕ್ಷೀಯ ಮಾತುಕತೆ ವೇಳೆ ಹಲವಾರು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ನವದೆಹಲಿಯ…
ಬೆಂಗಳೂರು: ನಾನು ನನ್ನ ವಾಚ್ ವಿಚಾರವಾಗಿ ಲೋಕಾಯುಕ್ತ ಸೇರಿದಂತೆ ಎಲ್ಲೆಲ್ಲಿ ಮಾಹಿತಿ ನೀಡಬೇಕೋ, ಎಲ್ಲಾ ನೀಡಿದ್ದೇನೆ. ನಾನು ಈ ವಿಚಾರದಲ್ಲಿ…