reaction on karnataka congress government
ಬೆಂಗಳೂರು: ನಾವು ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಮಾತಿನಲ್ಲಿ ಟೀಕೆ ಮಾಡುತ್ತಿದ್ದೇವೆ. ಸರ್ಕಾರಕ್ಕೆ ಜನ ಯಾವಾಗ ಕಾಲಲ್ಲಿ ಇರುವುದನ್ನು ಬಿಚ್ಚಿ ಹೊಡೆಯುತ್ತಾರೋ ಗೊತ್ತಿಲ್ಲ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಈ ಕುರಿತು ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಮ್ಮ ಆಕ್ರೋಶ ಕೇವಲ ಬಾಯಿ ಮಾತಿನಲ್ಲಿದೆ. ಸರ್ಕಾರದ ವಿರುದ್ಧ ಜನರ ಆಕ್ರೋಶ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಜನರು ಕಾಲಲ್ಲಿರುವುದನ್ನು ಕೈಗೆ ತೆಗೆದುಕೊಂಡು ಹೊಡೆಯುವ ಕಾಲ ಸನಿಹದಲ್ಲಿದೆ. ಈ ಸರ್ಕಾರಕ್ಕೆ ಕಾಲಲ್ಲಿ ಇರುವುದನ್ನು ಬಿಚ್ಚಿ ಹೊಡೆದಾಗಲೇ ಬುದ್ಧಿ ಬರುವುದು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸರ್ಕಾರದ ವಿರುದ್ಧ ನಮ್ಮ ಶಕ್ತಿ ಮೀರಿ ಹೋರಾಟ ಮಾಡುತ್ತಿದ್ದೇವೆ. ಸರ್ಕಾರದ ಭಂಡತನಕ್ಕೆ ಯಾರ ಹತ್ತಿರವೂ ಉತ್ತರ ಇಲ್ಲ. ಸಾರ್ವಜನಿಕವಾಗಿ ಬೆತ್ತಲಾದ ಮೇಲೂ ಮರ್ಯಾದೆ ಇಲ್ಲದವರ ತರಹ ಓಡಾಡುತ್ತಿರುವವರಿಗೆ ಏನು ಹೇಳುವುದು ಎಂದು ಪ್ರಶ್ನೆ ಮಾಡಿದರು.
ಬೆಂಗಳೂರು : ಒಳಮೀಸಲಾತಿ ವಿವಾದ ಬಗೆಹರಿದಿರುವುದರಿಂದ ಒಂದು ವಾರದೊಳಗೆ 8 ಸಾವಿರ ಪೊಲೀಸ್ ಕಾನ್ಸ್ಟೆಬಲ್ಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು…
ವಾಷಿಂಗ್ಟನ್ : ಇರಾನ್ ಅಣ್ವಸ್ತ್ರ ಹೊಂದಲು ಬ್ರಿಟನ್ ರಾಜ ಮೂರನೇ ಚಾರ್ಲ್ಸ್ ಬಯಸುವುದಿಲ್ಲ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್…
ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಈಗ ಎರಡನೇ ಬಾರಿ ಜಾಮೀನಿಗಾಗಿ…
ಚಾಮರಾಜನಗರ : ಮದುವೆ ಮನೆಯಲ್ಲಿ ಸಂಭ್ರಮ ಮನೆ ಮಾಡಬೇಕಿದ್ದ ಹೊತ್ತಲ್ಲಿ ಚಿನ್ನಾಭರಣದ ವಿಚಾರಕ್ಕೆ ಶುರುವಾದ ಜಗಳ ವಿಕೋಪಕ್ಕೆ ಹೋಗಿ, ಚಾಕು…
ಬಿಸಿಲ ಝಳದಿಂದ ಕುಸಿಯುತ್ತಿರುವ ಅಂತರ್ಜಲ ಮಟ್ಟ ; ಮೇ ತಿಂಗಳಲ್ಲಿ ನೀರಿನ ಕೊರತೆ ಸಾಧ್ಯತೆ • ಕೆ.ಬಿ.ಶಂಶುದ್ದೀನ್ ಕುಶಾಲನಗರ :…
1992ರಲ್ಲಿ ಅಯೋಧ್ಯೆಯ ಬಾಬ್ರಿ ಮಸೀದಿ ಉರುಳಿಸಲ್ಪಟ್ಟ ಹಿನ್ನೆಲೆಯಲ್ಲಿ ದೇಶದಲ್ಲಿ ನಡೆದ ಕೋಮು ಗಲಭೆಗಳಲ್ಲಿ 2,000ಕ್ಕೂ ಜನ ಸಾವಿಗೀಡಾದರು. ಅಯೋಧ್ಯೆಯಿಂದ 65ಕಿ.…