ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸಿನಿಮಾ ಕಲಾವಿದರ ನಟ್ಟು, ಬೋಲ್ಟು ಸರಿಪಡಿಸುವ ಮೊದಲು ಕಾಂಗ್ರೆಸ್ ಪಕ್ಷದ ನಟ್ಟು ಬೋಲ್ಟ್ ಸರಿ ಮಾಡಿಕೊಳ್ಳಲಿ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ತಿರುಗೇಟು ನೀಡಿದ್ದಾರೆ.
ಬೆಂಗಳೂರಿನಲ್ಲಿ ಇಂದು(ಮಾರ್ಚ್.3) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸಿನಿಮಾ ಕಲಾವಿದರು ನಟ್ಟು, ಬೋಲ್ಟ್ ಟೈಟ್ ಮಾಡಲು ಅವರೇನೂ ಜೀತಾದಾಳುಗಳಲ್ಲ. ಅವರು ಕಲಾವಿದರಿಗೆ ಅಪಮಾನ ಮಾಡುವಂತಹ ಕೆಲಸ ಮಾಡಿದ್ದಾರೆ. ಹೀಗಾಗಿ ಡಿ.ಕೆ.ಶಿವಕುಮಾರ್ ಅವರು ಸಿನಿಮಾ ಕಲಾವಿದರ ಬಳಿ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದರು.
ರಾಜ್ಯದಲ್ಲಿ ಒಂದು ಪಕ್ಷ ಕರೆ ನೀಡಿದಾಗ ಅದಕ್ಕೆ ಕಲಾವಿದರು ಬರಬೇಕೆಂಬ ನಿಯಮವಿಲ್ಲ. ಈ ರೀತಿ ಹುಚ್ಚು ಹುಚ್ಚಾಗಿ ಮಾತನಾಡುವುದನ್ನು ಬಿಟ್ಟು, ತಮ್ಮ ಪಕ್ಷದ ನಟ್ಟು, ಬೋಲ್ಟ್ ಸರಿಮಾಡಿಕೊಳ್ಳಲಿ ಎಂದು ಹರಿಹಾಯ್ದರು.
ಏನಿದು ವಾಕ್ಸಮರ?
16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನಾ ಸಮಾರಂಭಕ್ಕೆ ನಟ ಮತ್ತು ನಟಿಯು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸದಿದ್ದಕ್ಕೆ ಬೇಸರಗೊಂಡಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್ ಯಾವ ನಟನಿಗೆ, ಯಾವ ನಟಿಗೆ ಎಲ್ಲೆಲ್ಲಿ ನಟ್ಟು, ಬೋಲ್ಟ್ ಟೈಟ್ ಮಾಡಬೇಕು ಎಂದು ನನಗೆ ಗೊತ್ತಿದೆ ಎಂದು ಹೇಳಿದ್ದರು.
ಮೈಸೂರು: ಮೈಸೂರು ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್ಸಿ ನ್ಯಾಯಾಲಯದಲ್ಲಿ ವಿಚಾರಣೆ (ಜಯರಾಮು ಆರ್ ವಿರುದ್ಧ ಕರ್ನಾಟಕ ರಾಜ್ಯ) ಪ್ರಕರಣದಲ್ಲಿ…
ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ ಮೈಸೂರು ಮೃಗಾಲಯದ ಪ್ರಮುಖ ಆಕರ್ಷಣೆಯಾಗಿದ್ದ ಪ್ರವಾಸಿಗರ ಮನಗೆದ್ದಿದ್ದ ಹೆಮ್ಮೆಯ ಹುಲಿ…
ಬೆಂಗಳೂರು: 42ನೇ ಎಸಿಜೆಎಂ ನ್ಯಾಯಾಲಯ ಅರೆಸ್ಟ್ ವಾರೆಂಟ್ ಜಾರಿಯ ಹಿನ್ನೆಲೆಯಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.…
ಮಡಿಕೇರಿ: ವಿರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೈಸೂರು ಮೂಲದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಕೊಡಗು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಿರತೆ ದಾಳಿ ನಡೆಸಿದ ಪರಿಣಾಮ ಹಸು ತೀವ್ರವಾಗಿ ಗಾಯಗೊಂಡಿರುವ ಘಟನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್ಟಿ ಅರಣ್ಯ ಪ್ರದೇಶ ವ್ಯಾಪ್ತಿಯ ಲೊಕ್ಕನಹಳ್ಳಿ ಸಮೀಪದ ಹಾವಿನಮೂಲೆ…