ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸಿನಿಮಾ ಕಲಾವಿದರ ನಟ್ಟು, ಬೋಲ್ಟು ಸರಿಪಡಿಸುವ ಮೊದಲು ಕಾಂಗ್ರೆಸ್ ಪಕ್ಷದ ನಟ್ಟು ಬೋಲ್ಟ್ ಸರಿ ಮಾಡಿಕೊಳ್ಳಲಿ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ತಿರುಗೇಟು ನೀಡಿದ್ದಾರೆ.
ಬೆಂಗಳೂರಿನಲ್ಲಿ ಇಂದು(ಮಾರ್ಚ್.3) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸಿನಿಮಾ ಕಲಾವಿದರು ನಟ್ಟು, ಬೋಲ್ಟ್ ಟೈಟ್ ಮಾಡಲು ಅವರೇನೂ ಜೀತಾದಾಳುಗಳಲ್ಲ. ಅವರು ಕಲಾವಿದರಿಗೆ ಅಪಮಾನ ಮಾಡುವಂತಹ ಕೆಲಸ ಮಾಡಿದ್ದಾರೆ. ಹೀಗಾಗಿ ಡಿ.ಕೆ.ಶಿವಕುಮಾರ್ ಅವರು ಸಿನಿಮಾ ಕಲಾವಿದರ ಬಳಿ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದರು.
ರಾಜ್ಯದಲ್ಲಿ ಒಂದು ಪಕ್ಷ ಕರೆ ನೀಡಿದಾಗ ಅದಕ್ಕೆ ಕಲಾವಿದರು ಬರಬೇಕೆಂಬ ನಿಯಮವಿಲ್ಲ. ಈ ರೀತಿ ಹುಚ್ಚು ಹುಚ್ಚಾಗಿ ಮಾತನಾಡುವುದನ್ನು ಬಿಟ್ಟು, ತಮ್ಮ ಪಕ್ಷದ ನಟ್ಟು, ಬೋಲ್ಟ್ ಸರಿಮಾಡಿಕೊಳ್ಳಲಿ ಎಂದು ಹರಿಹಾಯ್ದರು.
ಏನಿದು ವಾಕ್ಸಮರ?
16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನಾ ಸಮಾರಂಭಕ್ಕೆ ನಟ ಮತ್ತು ನಟಿಯು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸದಿದ್ದಕ್ಕೆ ಬೇಸರಗೊಂಡಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್ ಯಾವ ನಟನಿಗೆ, ಯಾವ ನಟಿಗೆ ಎಲ್ಲೆಲ್ಲಿ ನಟ್ಟು, ಬೋಲ್ಟ್ ಟೈಟ್ ಮಾಡಬೇಕು ಎಂದು ನನಗೆ ಗೊತ್ತಿದೆ ಎಂದು ಹೇಳಿದ್ದರು.
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ನಾಳೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಭೇಟಿಗೆ ಸಮಯ ಕೋರಿದ್ದಾರೆ ಎಂದು ಸಿಎಂ…
ಬೆಂಗಳೂರು: ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ಲ್ಯಾಬ್ ರಿಪೋರ್ಟ್ನಲ್ಲಿ ನೆಗೆಟಿವ್ ಎಂದು ವರದಿ ಬಂದಿದೆ ಎಂದು ಸಚಿವ ದಿನೇಶ್…
ಬೆಂಗಳೂರು: ಉಗಾಂಡಾದಿಂದ ಬಂದಿದ್ದ ಮಹಿಳೆಯಲ್ಲಿ ಎಬೋಲಾ ಸೋಂಕಿನ ಲಕ್ಷಣಗಳು ಪತ್ತೆಯಾಗಿದ್ದು, ಆಕೆಯನ್ನು ಪ್ರತ್ಯೇಕ ವಾರ್ಡ್ನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕು ದೃಢೀಕರಣಕ್ಕಾಗಿ…
ತಿರುವನಂತಪುರ: ಸಿಎಂಆರ್ಎಲ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ತೀವ್ರಗೊಳಿಸಿರುವ ಜಾರಿ ನಿರ್ದೇಶನಾಲಯ ಇಂದು ಕೇರಳದ ಮಾಜಿ ಸಿಎಂ…
ಬೆಂಗಳೂರು: ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸುವ ಸಾಧ್ಯತೆಗಳು ದಟ್ಟವಾಗಿವೆ. ಮೇ.29ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯುವ…
ಎಸ್.ಎಸ್.ಭಟ್ ನಂಜನಗೂಡು: ಅಧಿಕಾರಿಗಳ ನೋಟಿಸ್ಗೂ ಕ್ಯಾರೆ ಎನ್ನದ ಶ್ರೀಕಂಠೇಶ್ವರ ದೇವಾಲಯದ ಸಿಬ್ಬಂದಿ ನಂಜನಗೂಡು: ಇಲ್ಲಿನ ಪ್ರಸಿದ್ಧ ಶ್ರೀಕಂಠೇಶ್ವರ ದೇವಾಲಯದ ಕಪಿಲಾ…