ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸಿನಿಮಾ ಕಲಾವಿದರ ನಟ್ಟು, ಬೋಲ್ಟು ಸರಿಪಡಿಸುವ ಮೊದಲು ಕಾಂಗ್ರೆಸ್ ಪಕ್ಷದ ನಟ್ಟು ಬೋಲ್ಟ್ ಸರಿ ಮಾಡಿಕೊಳ್ಳಲಿ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ತಿರುಗೇಟು ನೀಡಿದ್ದಾರೆ.
ಬೆಂಗಳೂರಿನಲ್ಲಿ ಇಂದು(ಮಾರ್ಚ್.3) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸಿನಿಮಾ ಕಲಾವಿದರು ನಟ್ಟು, ಬೋಲ್ಟ್ ಟೈಟ್ ಮಾಡಲು ಅವರೇನೂ ಜೀತಾದಾಳುಗಳಲ್ಲ. ಅವರು ಕಲಾವಿದರಿಗೆ ಅಪಮಾನ ಮಾಡುವಂತಹ ಕೆಲಸ ಮಾಡಿದ್ದಾರೆ. ಹೀಗಾಗಿ ಡಿ.ಕೆ.ಶಿವಕುಮಾರ್ ಅವರು ಸಿನಿಮಾ ಕಲಾವಿದರ ಬಳಿ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದರು.
ರಾಜ್ಯದಲ್ಲಿ ಒಂದು ಪಕ್ಷ ಕರೆ ನೀಡಿದಾಗ ಅದಕ್ಕೆ ಕಲಾವಿದರು ಬರಬೇಕೆಂಬ ನಿಯಮವಿಲ್ಲ. ಈ ರೀತಿ ಹುಚ್ಚು ಹುಚ್ಚಾಗಿ ಮಾತನಾಡುವುದನ್ನು ಬಿಟ್ಟು, ತಮ್ಮ ಪಕ್ಷದ ನಟ್ಟು, ಬೋಲ್ಟ್ ಸರಿಮಾಡಿಕೊಳ್ಳಲಿ ಎಂದು ಹರಿಹಾಯ್ದರು.
ಏನಿದು ವಾಕ್ಸಮರ?
16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನಾ ಸಮಾರಂಭಕ್ಕೆ ನಟ ಮತ್ತು ನಟಿಯು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸದಿದ್ದಕ್ಕೆ ಬೇಸರಗೊಂಡಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್ ಯಾವ ನಟನಿಗೆ, ಯಾವ ನಟಿಗೆ ಎಲ್ಲೆಲ್ಲಿ ನಟ್ಟು, ಬೋಲ್ಟ್ ಟೈಟ್ ಮಾಡಬೇಕು ಎಂದು ನನಗೆ ಗೊತ್ತಿದೆ ಎಂದು ಹೇಳಿದ್ದರು.
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…
ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…
ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…
ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…
ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…