ರಾಜ್ಯ

ಈ ಬಾರಿ ಬಜೆಟ್‌ ಹಿಂದೂ, ಮುಸಲ್ಮಾನರ ನಡುವೆ ಒಡಕು ತರಲಿದೆ: ಸಿ.ಟಿ.ರವಿ

ಬೆಳಗಾವಿ: ಸಿಎಂ ಸಿದ್ದರಾಮಯ್ಯ ಈ ಬಾರಿ ಮಂಡನೆ ಮಾಡಿರುವ ಬಜೆಟ್‌ ಹಿಂದೂ ಮತ್ತು ಮುಸಲ್ಮಾನರ ಮಧ್ಯೆ ಒಡಕು ತರಲಿದ್ದು, ಕಮ್ಯುನಲ್‌ ಹಾಗೂ ಕ್ರಿಮಿನಲ್‌ ರಾಜಕಾರಣಕ್ಕೆ ಪೋತ್ಸಾಹ ನೀಡುವಂತಹ ಬಜೆಟ್‌ ಆಗಿದೆ ಎಂದು ವಿಧಾನ ಪರಿಷತ್‌ ಬಿಜೆಪಿ ಸದಸ್ಯ ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ಇಂದು(ಮಾರ್ಚ್.8) ರಾಜ್ಯ ಬಜೆಟ್‌ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಸಿದ್ದರಾಮಯ್ಯ ಅವರು ಶುಕ್ರವಾರ ಮಂಡಿಸಿರುವ ರಾಜ್ಯ ಬಜೆಟ್‌ ಹಿಂದೂ ಮತ್ತು ಮುಸಲ್ಮಾನರ ನಡುವೆ ಒಡಕು ಮೂಡಿಸುತ್ತದೆ. ಕಾಂಗ್ರೆಸ್‌ ಪಕ್ಷ ಮುಸಲ್ಮಾನ್‌ ಲೀಗ್‌ನ ಅಜೆಂಡಾ ಅನುಸರಿಸುವ ಮೂಲಕ ಕೇವಲ ಒಂದೇ ಸಮುದಾಯವನ್ನು ಓಲೈಸುವ ರಾಜಕಾರಣ ಮಾಡುತ್ತಿದ್ದಾರೆ. ಇದರಿಂದ ಭವಿಷ್ಯದಲ್ಲಿ ಅಪಾಯಕಾರಿ ಬೆಳವಣಿಗೆ ಆಗಲಿದೆ ಎಂದು ಹೇಳಿದರು.

ಸ್ವಾತಂತ್ರ್ಯ ಬಂದ ಸಂದರ್ಭದಲ್ಲಿ ಮಹಮ್ಮದ್‌ ಅಲಿ ಜಿನ್ನಾ ಧಾರ್ಮಿಕತೆ ಆಧಾರದಲ್ಲಿ ದೇಶಗಳನ್ನು ವಿಭಜನೆ ಮಾಡಿದ್ದರು. ಆದರೆ ಇದೀಗ ಸಿದ್ದರಾಮಯ್ಯ ಮಂಡಿಸಿದ ಬಜೆಟ್‌ನಿಂದ ಈಗ ಆತ್ಮವೂ ಖುಷಿಯಾಗಿರಬೇಕು. ಹೀಗಾಗಿ ಇದು ಮುಸಲ್ಮಾನ ಲೀಗ್‌ ಬಜೆಟ್‌ ಅಥವಾ ಕಾಂಗ್ರೆಸ್‌ ಬಜೆಟ್‌ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರೇ ಉತ್ತರಿಸಬೇಕು ಎಂದು ವ್ಯಂಗ್ಯ ಮಾಡಿದರು.

ಸಂವಿಧಾನದಲ್ಲಿ ಧಾರ್ಮಿಕ ಆಧಾರದ ಮೇಲೆ ಮೀಸಲಾತಿಗೆ ಅವಕಾಶವಿರಲಿಲ್ಲ. ಸಂವಿಧಾನ ರಚನಾ ಸಮಿತಿಯೂ ಧಾರ್ಮಿಕ ಆಧಾರದ ಮೇಲೆ ಮೀಸಲಾತಿ ಬೇಡಿಕೆಯನ್ನು ತಿರಸ್ಕರಿಸಿತ್ತು. ಆದರೆ ಸಿದ್ದರಾಮಯ್ಯ ಮಂಡನೆ ಮಾಡಿರುವ ಬಜೆಟ್‌ನ ಮುಖ್ಯಾಂಶಗಳಲ್ಲಿ ಶೈಕ್ಷಣಿಕ ಶುಲ್ಕಗಳ ರಿಯಾಯಿತಿ ಮತ್ತು ಸಂಸ್ಥೆ ಹಾಗೂ ಸರ್ಕಾರಿ ಒಪ್ಪಂದಗಳಲ್ಲಿಯೂ ಮೀಸಲಾತಿಯನ್ನು ಘೋಷಿಸಲಾಗಿದೆ. ಹಾಗಾಗಿ ಈ ಬಾರಿಯ ಬಜೆಟ್‌ ಹಿಂದೂ ಸಮುದಾಯದವರಿಗೆ ಅಂತಹ ಸವಲತ್ತುಗಳನ್ನು ಘೋಷಣೆ ಮಾಡಿಲ್ಲ ಎಂದು ಹೇಳಿದರು.

ಅರ್ಚನ ಎಸ್‌ ಎಸ್

Recent Posts

ಮಂಡ್ಯ | ಶೂಟೌಟ್‌ ಪ್ರಕರಣ ; 7 ಆರೋಪಿಗಳ ಬಂಧನ

ಆರೋಪಿಗಳಿಂದ ಕೃತ್ಯಕ್ಕೆ ಬಳಿಸಿದ ಟಯೋಟ ಕಾರು, ಪಿಸ್ತೂಲ್ ವಶ: ಎಸ್‌ಪಿ ಮಂಡ್ಯ : ನಗರದ ಹೊರವಲಯದ ಹೆದ್ದಾರಿಯಲ್ಲಿ ಜು.2ರ ಗುರುವಾರ…

11 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಇಚ್ಛಾಶಕ್ತಿ ಇದ್ದರೆ , ಕನ್ನಡ ಚಿತ್ರೋದ್ಯಮದ ಕಾಯಕಲ್ಪಕ್ಕಿದು ಸಕಾಲ

ಚಿತ್ರೋದ್ಯಮಿಗಳೂ ಆಗಿರುವ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರನ್ನು ಮೊನ್ನೆ ಚಲನಚಿತ್ರ ವಾಣಿಜ್ಯ ಮಂಡಳಿಯ ಪದಾಧಿಕಾರಿಗಳು ಮತ್ತು ಮಾಜಿ ಅಧ್ಯಕ್ಷರ…

16 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 3 , ಶುಕ್ರವಾರ

19 hours ago

ನಂಜನಗೂಡು | ಲೋಕಾ ಬಲೆಗೆ ಬಿದ್ದ ಸರ್ವೆಯರ್‌

ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ…

1 day ago

ಅನೈತಿಕ ಸಂಬಂಧದ ಶಂಕೆ : ರಾಡ್‌ನಿಂದ ಹೊಡೆದು ಪತ್ನಿ ಕೊಂದ ಪತಿ

ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ…

1 day ago

ರಾಮನಗರ: ಕಲ್ಲು ಕ್ವಾರಿಯಲ್ಲಿ ದುರಂತ: ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವು

ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…

2 days ago