ರಾಜ್ಯ

ಸಿ.ಟಿ.ರವಿ ಯಾವ ಕಡೆಯಿಂದಲೂ ಒಳಗೆ ಬರತಕ್ಕದ್ದಲ್ಲ : ಚೀಫ್ ಮಾರ್ಷಲ್​​ಗೆ ಸಭಾಪತಿ ಸೂಚನೆ

ಬೆಂಗಳೂರು : ಸಭಾಪತಿಗಳ ಆದೇಶಕ್ಕೆ ಗೌರವ ನೀಡದೆ, ಗೈರು ಹಾಜರಾಗಿದ್ದ ಹಿನ್ನೆಲೆಯಲ್ಲಿ ಬಿಜೆಪಿ ಸದಸ್ಯ ಸಿ.ಟಿ.ರವಿ ಅವರನ್ನು ವಿಧಾನ ಪರಿಷತ್ತಿನಿಂದ ದಿನದ ಮಟ್ಟಿಗೆ ಅಮಾನತ್ತು ಪಡಿಸಲಾಯಿತು.

ಕಾಂಗ್ರೆಸ್ ಸದಸ್ಯ ನಸೀರ್ ಅಹಮದ್ ವಿರುದ್ಧ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದ ಸಿ.ಟಿ.ರವಿ ಅವರು ವಿಷಾದ ವ್ಯಕ್ತಪಡಿಸಬೇಕೆಂದು ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರು ರೂಲಿಂಗ್ ನೀಡಿದ್ದರು.

ರಾತ್ರಿ 8 ಗಂಟೆಯೊಳಗೆ ಅವರನ್ನು ಸದನಕ್ಕೆ ಕರೆತರಬೇಕೆಂದು ಸಭಾಪತಿಯವರು ಪ್ರತಿಪಕ್ಷದ ನಾಯಕ ಚಲವಾದಿ ನಾರಾಯಣಸ್ವಾಮಿ, ಹಾಗೂ ಮುಖ್ಯ ಸಚೇತಕ ಎನ್.ರವಿ ಕುಮಾರ್ ಅವರಿಗೆ ಸೂಚನೆ ನೀಡಿದ್ದರು.

ಗುರುವಾರ ರಾತ್ರಿ 8 ಗಂಟೆ ಸಮಯವಾದರೂ ರವಿ ಸದನಕ್ಕೆ ಬಾರದೆ ಗೈರು ಹಾಜರಾಗಿದ್ದರು. ನಿಗದಿತ ಸಮಯಕ್ಕೆ ಸಿ.ಟಿ.ರವಿ ಬಾರದ ಹಿನ್ನೆಲೆಯಲ್ಲಿ ಸದನಕ್ಕೆ ಅಗೌರವ ತೋರಿಸುವುದು ಹಾಗೂ ಸಭಾಪತಿಗಳ ಆದೇಶವನ್ನು ಪಾಲನೆ ಮಾಡದ ಹಿನ್ನೆಲೆಯಲ್ಲಿ ರೂಲಿಂಗ್ ನೀಡಿದ ಸಭಾಪತಿ ಹೊರಟ್ಟಿಯವರು ನಾನು ದಿನದ ಮಟ್ಟಿಗೆ ಸಿ.ಟಿ.ರವಿಯವರನ್ನು ಸದನದಿಂದ ಅಮಾನತ್ತು ಮಾಡಿದ್ದೇನೆ. ಒಂದು ವೇಳೆ ಅವರು ಸದನಕ್ಕೆ ಬಂದರೆ ಬಾಗಿಲಲ್ಲಿ ತಡೆಯಿರಿ. ಯಾವುದೇ ಕಾರಣಕ್ಕೂ ಸದನದ ಒಳಗೆ ಬಿಡಬೇಡಿ ಎಂದು ಮುಖ್ಯ ಮಾರ್ಷಲ್ ಗಳಿಗೆ ಪೀಠದಿಂದ ಸೂಚನೆ ನೀಡಿದರು.

ಕಲಾಪ ನಡೆಯುತ್ತಿದ್ದ ವೇಳೆ ಆಡಳಿತ ಪಕ್ಷದ ಸದಸ್ಯರು ಈ ವಿಷಯವನ್ನು ಪ್ರಸ್ತಾಪಿಸಿ, ನಿಮ್ಮ ಆದೇಶಕ್ಕೆ ಗೌರವತೊರದೆ ಉದ್ದಟತನ ಮೆರೆದಿರುವ ಸಿಟಿ ರವಿ ಅವರನ್ನು ಸದನದಿಂದ ಅಮಾನತ್ತು ಪಡಿಸಬೇಕು ಎಂದು ಏರಿದ ಧ್ವನಿಯಲ್ಲಿ ಆಗ್ರಹಿಸಿದರು.

ಈ ವೇಳೆ ರೂಲಿಂಗ್ ನೀಡಿದ ಸಭಾಪತಿ ಹೊರಟ್ಟಿಯವರು ನಾನು ದಿನದ ಮಟ್ಟಿಗೆ ಸಿಟಿ ರವಿಯವರನ್ನು ಸದನದಿಂದ ಅಮಾನತು ಮಾಡಿದ್ದೇನೆ. ಒಂದು ವೇಳೆ ಅವರು ಸದನಕ್ಕೆ ಬಂದರೆ ಬಾಗಿಲಲ್ಲಿ ತಡೆಯಿರಿ. ಯಾವುದೇ ಕಾರಣಕ್ಕೂ ಸಭಾಪತಿಗಳ ಆದೇಶಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಬಿಜೆಪಿ ಸದಸ್ಯರು ಸಭಾತ್ಯಾಗ ಮಾಡಿ ಸದನದಿಂದ ಹೊರ ನಡೆದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಸಾಂಪ್ರದಾಯಿಕ ಸೊಗಡು ಸಾಕ್ಷೀಕರಿಸಿದ ಕೂತಿನಾಡು ಸುಗ್ಗಿ ಉತ್ಸವ

ಲಕ್ಷ್ಮೀಕಾಂತ್ ಕೋಮಾರಪ್ಪ ಗ್ರಾಮದೇವತೆ ಸಬ್ಬಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಮಳೆ, ಬೆಳೆಗಾಗಿ ಪ್ರಾರ್ಥನೆ ಸೋಮವಾರಪೇಟೆ: ಗ್ರಾಮೀಣ ಭಾಗದ ಆಚರಣೆಗಳಲ್ಲಿ…

2 hours ago

ಇಂದು ಚಿಕ್ಕರಸಿನಕೆರೆ ಕಾಲಭೈರವೇಶ್ವರ ಬಸವ ರಥೋತ್ಸವ

ಅಣ್ಣೂರುಸತೀಶ್ ಶ್ರೀಆದಿಚುಂಚನಗಿರಿ ಮಠದ ನೇತೃತದಲ್ಲಿ ಅದ್ಧೂರಿ ಜಾತ್ರೆ ಭಾರತೀನಗರ: ಚಿಕ್ಕರಸಿನಕೆರೆ ಶ್ರೀ ಕಾಲಭೈರವೇಶ್ವರಸ್ವಾಮಿ ಪುಣ್ಯಕ್ಷೇತ್ರವು ದಕ್ಷಿಣ ಕಾಶಿಯೆಂದೇ ಪರಿಚಿತವಾಗಿ ಹಲವಾರು…

2 hours ago

ಕರಿಯಮ್ಮ ದೊಡ್ಡಮ್ಮ ದೇವಿ ಜಾತ್ರೋತ್ಸವಕ್ಕೆ ಭೇರ್ಯ ಸಜ್ಜು

ಭೇರ್ಯ ಮಹೇಶ್ ಇಂದು ಭೇರ್ಯದಲ್ಲಿ ಕರಿಯಮ್ಮ ದೊಡ್ಡಮ್ಮ ದೇವಿ ಸಿಡಿ ಉತ್ಸವ, ನಾಳೆ ಜಾತ್ರಾ ಮಹೋತ್ಸವ  ಭೇರ್ಯ: ಭೇರ್ಯ ಗ್ರಾಮದ…

2 hours ago

ಜಾತಿವಾದಿ ಮನಸ್ಸುಗಳಿಗೆ ಸಮಾನತೆಯ ದರ್ಶನ

ಸಮಾಜ ಕಲ್ಯಾಣ ಇಲಾಖೆ ನೌಕರರಿಂದ ‘ಮುಟ್ಟಿಸಿಕೊಂಡವನು’ ನಾಟಕ; ಪಿ.ಲಂಕೇಶ್ ರಚನೆಯ ಕಥೆ ಮೈಸೂರು: ಮುಟ್ಟಬಾರದ ಜಾತಿಯವರು ಎನಿಸಿಕೊಂಡವರೊಬ್ಬರಿಂದ ಮುಟ್ಟಿಸಿಕೊಂಡ ಜಾತಿ…

2 hours ago

ಹುಣಸೂರಿನಲ್ಲಿ ಡ್ರಗ್ಸ್ ಪತ್ತೆಯಾಗಿದ್ದ ಪ್ರಕರಣ: ಮೂವರ ಬಂಧನ

ಮೈಸೂರು: ಹುಣಸೂರು ಬಳಿಯ ತೋಟದ ಮನೆಯೊಂದ ರಲ್ಲಿ ಕೋಟ್ಯಂತರ ರೂ. ಮೌಲ್ಯದ ಮಾದಕ ವಸ್ತಗಳನ್ನು ವಶಕ್ಕೆ ಪಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ…

2 hours ago