ರಾಜ್ಯ

ಸಿ.ಟಿ.ರವಿ ಯಾವ ಕಡೆಯಿಂದಲೂ ಒಳಗೆ ಬರತಕ್ಕದ್ದಲ್ಲ : ಚೀಫ್ ಮಾರ್ಷಲ್​​ಗೆ ಸಭಾಪತಿ ಸೂಚನೆ

ಬೆಂಗಳೂರು : ಸಭಾಪತಿಗಳ ಆದೇಶಕ್ಕೆ ಗೌರವ ನೀಡದೆ, ಗೈರು ಹಾಜರಾಗಿದ್ದ ಹಿನ್ನೆಲೆಯಲ್ಲಿ ಬಿಜೆಪಿ ಸದಸ್ಯ ಸಿ.ಟಿ.ರವಿ ಅವರನ್ನು ವಿಧಾನ ಪರಿಷತ್ತಿನಿಂದ ದಿನದ ಮಟ್ಟಿಗೆ ಅಮಾನತ್ತು ಪಡಿಸಲಾಯಿತು.

ಕಾಂಗ್ರೆಸ್ ಸದಸ್ಯ ನಸೀರ್ ಅಹಮದ್ ವಿರುದ್ಧ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದ ಸಿ.ಟಿ.ರವಿ ಅವರು ವಿಷಾದ ವ್ಯಕ್ತಪಡಿಸಬೇಕೆಂದು ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರು ರೂಲಿಂಗ್ ನೀಡಿದ್ದರು.

ರಾತ್ರಿ 8 ಗಂಟೆಯೊಳಗೆ ಅವರನ್ನು ಸದನಕ್ಕೆ ಕರೆತರಬೇಕೆಂದು ಸಭಾಪತಿಯವರು ಪ್ರತಿಪಕ್ಷದ ನಾಯಕ ಚಲವಾದಿ ನಾರಾಯಣಸ್ವಾಮಿ, ಹಾಗೂ ಮುಖ್ಯ ಸಚೇತಕ ಎನ್.ರವಿ ಕುಮಾರ್ ಅವರಿಗೆ ಸೂಚನೆ ನೀಡಿದ್ದರು.

ಗುರುವಾರ ರಾತ್ರಿ 8 ಗಂಟೆ ಸಮಯವಾದರೂ ರವಿ ಸದನಕ್ಕೆ ಬಾರದೆ ಗೈರು ಹಾಜರಾಗಿದ್ದರು. ನಿಗದಿತ ಸಮಯಕ್ಕೆ ಸಿ.ಟಿ.ರವಿ ಬಾರದ ಹಿನ್ನೆಲೆಯಲ್ಲಿ ಸದನಕ್ಕೆ ಅಗೌರವ ತೋರಿಸುವುದು ಹಾಗೂ ಸಭಾಪತಿಗಳ ಆದೇಶವನ್ನು ಪಾಲನೆ ಮಾಡದ ಹಿನ್ನೆಲೆಯಲ್ಲಿ ರೂಲಿಂಗ್ ನೀಡಿದ ಸಭಾಪತಿ ಹೊರಟ್ಟಿಯವರು ನಾನು ದಿನದ ಮಟ್ಟಿಗೆ ಸಿ.ಟಿ.ರವಿಯವರನ್ನು ಸದನದಿಂದ ಅಮಾನತ್ತು ಮಾಡಿದ್ದೇನೆ. ಒಂದು ವೇಳೆ ಅವರು ಸದನಕ್ಕೆ ಬಂದರೆ ಬಾಗಿಲಲ್ಲಿ ತಡೆಯಿರಿ. ಯಾವುದೇ ಕಾರಣಕ್ಕೂ ಸದನದ ಒಳಗೆ ಬಿಡಬೇಡಿ ಎಂದು ಮುಖ್ಯ ಮಾರ್ಷಲ್ ಗಳಿಗೆ ಪೀಠದಿಂದ ಸೂಚನೆ ನೀಡಿದರು.

ಕಲಾಪ ನಡೆಯುತ್ತಿದ್ದ ವೇಳೆ ಆಡಳಿತ ಪಕ್ಷದ ಸದಸ್ಯರು ಈ ವಿಷಯವನ್ನು ಪ್ರಸ್ತಾಪಿಸಿ, ನಿಮ್ಮ ಆದೇಶಕ್ಕೆ ಗೌರವತೊರದೆ ಉದ್ದಟತನ ಮೆರೆದಿರುವ ಸಿಟಿ ರವಿ ಅವರನ್ನು ಸದನದಿಂದ ಅಮಾನತ್ತು ಪಡಿಸಬೇಕು ಎಂದು ಏರಿದ ಧ್ವನಿಯಲ್ಲಿ ಆಗ್ರಹಿಸಿದರು.

ಈ ವೇಳೆ ರೂಲಿಂಗ್ ನೀಡಿದ ಸಭಾಪತಿ ಹೊರಟ್ಟಿಯವರು ನಾನು ದಿನದ ಮಟ್ಟಿಗೆ ಸಿಟಿ ರವಿಯವರನ್ನು ಸದನದಿಂದ ಅಮಾನತು ಮಾಡಿದ್ದೇನೆ. ಒಂದು ವೇಳೆ ಅವರು ಸದನಕ್ಕೆ ಬಂದರೆ ಬಾಗಿಲಲ್ಲಿ ತಡೆಯಿರಿ. ಯಾವುದೇ ಕಾರಣಕ್ಕೂ ಸಭಾಪತಿಗಳ ಆದೇಶಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಬಿಜೆಪಿ ಸದಸ್ಯರು ಸಭಾತ್ಯಾಗ ಮಾಡಿ ಸದನದಿಂದ ಹೊರ ನಡೆದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹನೂರು ಶೂಟ್‌ಔಟ್ ಪ್ರಕರಣ | ಸ್ಥಳ ಮಹಜರ್, ಸಾಕ್ಷಿ ವಿಚಾರಣೆ

ಹನೂರು : ಕಾವೇರಿ ವನ್ಯಜೀವಿಧಾಮದ ಹೊಲೆಮುರಿದಟ್ಟಿ ಕರಿಕಲ್ಲು ಗುಡ್ಡ ಅರಣ್ಯ ಪ್ರದೇಶದಲ್ಲಿ ಶೂಟ್‌ಔಟ್ ನಡೆದ ಸ್ಥಳಕ್ಕೆ ಪ್ರಕರಣದ ಪ್ರಮುಖ ಸಾಕ್ಷಿ…

21 mins ago

ಬಾಲ್ಯದ ಗೆಳೆಯನಿಗೆ ಡಿಕೆಶಿ ‘ಉಡುಗೊರೆ’ : ರಾಜಕೀಯಕ್ಕೆ ರವಿಚಂದ್ರನ್?

ಸಿಎಂ ಭೇಟಿಯಾಗಿ ಚರ್ಚೆ ; ಖಚಿತಪಡಿಸದ ಕಾಂಗ್ರೆಸ್ ನಾಯಕರು ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕ್ರೇಜಿಸ್ಟಾರ್…

36 mins ago

ನಾಗೇಂದ್ರ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲ ಗೆಹಲೋತ್‌

ಸಚಿವರಾದ ಕೆಲವೇ ದಿನಗಳಲ್ಲಿ ಸಂಪುಟದಿಂದ ನಾಗೇಂದ್ರ ಹೊರಕ್ಕೆ ಬೆಂಗಳೂರು: ಮಾಜಿ ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆಯನ್ನು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್…

2 hours ago

ವಿನಾಶಕಾರಿ ಪ್ರವಾಹ: ನೇಪಾಳದಲ್ಲಿ ಏರುತ್ತಲೇ ಇದೆ ಸಾವಿನ ಸಂಖ್ಯೆ

ಕಠ್ಮಂಡು: ನೇಪಾಳದಲ್ಲಿ ಸಂಭವಿಸಿದ ವಿನಾಶಕಾರಿ ಪ್ರವಾಹಕ್ಕೆ ಸಾವಿನ ಸಂಖ್ಯೆ 682ಕ್ಕೆ ಏರಿಕೆಯಾಗಿದೆ. 2400ಕ್ಕೂ ಹೆಚ್ಚು ಜನ ನಾಪತ್ತೆಯಾಗಿದ್ದು, ಇದುವರೆಗೂ 4400ಕ್ಕೂ…

5 hours ago

ಯುವ ಜನತೆ ಮಾದಕ ವಸ್ತುಗಳ ಪಿಡುಗಿನಿಂದ ಸಂಪೂರ್ಣವಾಗಿ ಮುಕ್ತರಾಗಬೇಕು: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ದೇಶವು ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಪ್ರಗತಿ ಸಾಧಿಸಿ 'ವಿಕಸಿತ ಭಾರತ'ವಾಗಿ ರೂಪುಗೊಳ್ಳಬೇಕಾದರೆ, ಯುವ ಜನತೆ ಮಾದಕ ವಸ್ತುಗಳ ಪಿಡುಗಿನಿಂದ…

5 hours ago

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ: ಇಂದು ಸಂಜೆಯಿಂದಲೇ ಆನೆಗಳಿಗೆ ತಾಲೀಮು ಆರಂಭ: ಡಿಸಿಎಫ್‌ ಡಾ.ಪ್ರಭುಗೌಡ

ಮೈಸೂರು: ಮೊದಲ ಹಂತದಲ್ಲಿ ಆಗಮಿಸಿರುವ ದಸರಾ ಆನೆಗಳಿಗೆ ತೂಕ ಪರೀಕ್ಷೆ ಮಾಡಲಾಗಿದೆ. ಶ್ರೀಕಂಠ ಆನೆ ಹೆಚ್ಚು ತೂಕ ಹೊಂದಿದೆ. ಆದರೆ…

6 hours ago