ಬೆಂಗಳೂರು : ಸಭಾಪತಿಗಳ ಆದೇಶಕ್ಕೆ ಗೌರವ ನೀಡದೆ, ಗೈರು ಹಾಜರಾಗಿದ್ದ ಹಿನ್ನೆಲೆಯಲ್ಲಿ ಬಿಜೆಪಿ ಸದಸ್ಯ ಸಿ.ಟಿ.ರವಿ ಅವರನ್ನು ವಿಧಾನ ಪರಿಷತ್ತಿನಿಂದ ದಿನದ ಮಟ್ಟಿಗೆ ಅಮಾನತ್ತು ಪಡಿಸಲಾಯಿತು.
ಕಾಂಗ್ರೆಸ್ ಸದಸ್ಯ ನಸೀರ್ ಅಹಮದ್ ವಿರುದ್ಧ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದ ಸಿ.ಟಿ.ರವಿ ಅವರು ವಿಷಾದ ವ್ಯಕ್ತಪಡಿಸಬೇಕೆಂದು ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರು ರೂಲಿಂಗ್ ನೀಡಿದ್ದರು.
ರಾತ್ರಿ 8 ಗಂಟೆಯೊಳಗೆ ಅವರನ್ನು ಸದನಕ್ಕೆ ಕರೆತರಬೇಕೆಂದು ಸಭಾಪತಿಯವರು ಪ್ರತಿಪಕ್ಷದ ನಾಯಕ ಚಲವಾದಿ ನಾರಾಯಣಸ್ವಾಮಿ, ಹಾಗೂ ಮುಖ್ಯ ಸಚೇತಕ ಎನ್.ರವಿ ಕುಮಾರ್ ಅವರಿಗೆ ಸೂಚನೆ ನೀಡಿದ್ದರು.
ಗುರುವಾರ ರಾತ್ರಿ 8 ಗಂಟೆ ಸಮಯವಾದರೂ ರವಿ ಸದನಕ್ಕೆ ಬಾರದೆ ಗೈರು ಹಾಜರಾಗಿದ್ದರು. ನಿಗದಿತ ಸಮಯಕ್ಕೆ ಸಿ.ಟಿ.ರವಿ ಬಾರದ ಹಿನ್ನೆಲೆಯಲ್ಲಿ ಸದನಕ್ಕೆ ಅಗೌರವ ತೋರಿಸುವುದು ಹಾಗೂ ಸಭಾಪತಿಗಳ ಆದೇಶವನ್ನು ಪಾಲನೆ ಮಾಡದ ಹಿನ್ನೆಲೆಯಲ್ಲಿ ರೂಲಿಂಗ್ ನೀಡಿದ ಸಭಾಪತಿ ಹೊರಟ್ಟಿಯವರು ನಾನು ದಿನದ ಮಟ್ಟಿಗೆ ಸಿ.ಟಿ.ರವಿಯವರನ್ನು ಸದನದಿಂದ ಅಮಾನತ್ತು ಮಾಡಿದ್ದೇನೆ. ಒಂದು ವೇಳೆ ಅವರು ಸದನಕ್ಕೆ ಬಂದರೆ ಬಾಗಿಲಲ್ಲಿ ತಡೆಯಿರಿ. ಯಾವುದೇ ಕಾರಣಕ್ಕೂ ಸದನದ ಒಳಗೆ ಬಿಡಬೇಡಿ ಎಂದು ಮುಖ್ಯ ಮಾರ್ಷಲ್ ಗಳಿಗೆ ಪೀಠದಿಂದ ಸೂಚನೆ ನೀಡಿದರು.
ಕಲಾಪ ನಡೆಯುತ್ತಿದ್ದ ವೇಳೆ ಆಡಳಿತ ಪಕ್ಷದ ಸದಸ್ಯರು ಈ ವಿಷಯವನ್ನು ಪ್ರಸ್ತಾಪಿಸಿ, ನಿಮ್ಮ ಆದೇಶಕ್ಕೆ ಗೌರವತೊರದೆ ಉದ್ದಟತನ ಮೆರೆದಿರುವ ಸಿಟಿ ರವಿ ಅವರನ್ನು ಸದನದಿಂದ ಅಮಾನತ್ತು ಪಡಿಸಬೇಕು ಎಂದು ಏರಿದ ಧ್ವನಿಯಲ್ಲಿ ಆಗ್ರಹಿಸಿದರು.
ಈ ವೇಳೆ ರೂಲಿಂಗ್ ನೀಡಿದ ಸಭಾಪತಿ ಹೊರಟ್ಟಿಯವರು ನಾನು ದಿನದ ಮಟ್ಟಿಗೆ ಸಿಟಿ ರವಿಯವರನ್ನು ಸದನದಿಂದ ಅಮಾನತು ಮಾಡಿದ್ದೇನೆ. ಒಂದು ವೇಳೆ ಅವರು ಸದನಕ್ಕೆ ಬಂದರೆ ಬಾಗಿಲಲ್ಲಿ ತಡೆಯಿರಿ. ಯಾವುದೇ ಕಾರಣಕ್ಕೂ ಸಭಾಪತಿಗಳ ಆದೇಶಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಬಿಜೆಪಿ ಸದಸ್ಯರು ಸಭಾತ್ಯಾಗ ಮಾಡಿ ಸದನದಿಂದ ಹೊರ ನಡೆದರು.
ಅಮರಾವತಿ: ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್ ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ವೈಎಸ್ಆರ್ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್…
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು. ಜಾನಕಿ ಅವರ ಪುತ್ರ…
ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…
ಟೆಹರಾನ್: ಹಾರ್ಮುಜ್ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…
ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…
ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…