ಬೆಂಗಳೂರು: ರಾಜ್ಯಸರ್ಕಾರದ ವತಿಯಿಂದ ಕೇರಳದಲ್ಲಿ ನೆರೆ ಸಂತ್ರಸ್ಥರಿಗೆ ಗೃಹ ನಿರ್ಮಾಣ ಮಾಡುವ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಅವರ ವಯನಾಡು ಕಳಕಳಿ ಗುಲಾಮಗಿರಿಯ ಸಂಕೇತದಂತೆ ಕಾಣುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಕಿಡಿಕಾರಿದ್ದಾರೆ.
ಈ ಕುರಿತು ಇಂದು(ಡಿ.11) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ರಾಜ್ಯಸರ್ಕಾರ ಕೇರಳದಲ್ಲಿ ನೆರೆ ಸಂತ್ರಸ್ಥರಿಗೆ ಮನೆ ಕಟ್ಟಿಕೊಡುವ ಭರವಸೆಯನ್ನು ನೀಡಿದೆ. ಈ ವಿಚಾರ ಮಾನವೀಯವಾಗಿ ಮನೆ ನಿರ್ಮಾಣ ಮಾಡುವುದು ಸರಿ ಎಂಬಂತೆ ಕಾಣುತ್ತಿದೆ. ಆದರೆ ಸಿಎಂ ಸಿದ್ದರಾಮಯ್ಯ ಅವರ ಈ ನಡೆ ನಮಗೆ ಮಾನವೀಯ ನೆಲೆ ಎಂದು ಕಾಣುತ್ತಿಲ್ಲ. ಬದಲಾಗಿ ಇದು ಗುಲಾಮಗಿರಿಯ ಸಂಕೇತ ಎಂದು ಕಾಣುತ್ತಿದೆ. ವಯನಾಡು ಕ್ಷೇತ್ರದಲ್ಲಿ ಪ್ರಿಯಾಂಕಾ ಗಾಂಧಿ ಅವರು ಸಂಸದರಾಗಿದ್ದು, ಅವರೇ ಆ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಕಾಳಜಿವಹಿಸಬೇಕು ಎಂದು ಟೀಕಿಸಿದ್ದಾರೆ.
ಈಗಾಗಲೇ ನಮ್ಮ ರಾಜ್ಯದಲ್ಲಿ ಬಾಣಂತಿಯರ ಸಾವು ಸಂಭವಿಸಿದ್ದು, ಎತ್ತಿನಹೊಳೆ ಯೋಜನೆ ಸಂಬಂಧವಾಗಿ ರೈತರು ಅಧಿಕಾರಿಗಳ ಜೊತೆ ವಾದ-ವಿವಾದ ಮಾಡಿ ಹೊಳಗೆ ಹಅರಿ ಸಾವನ್ನಪ್ಪಿದ್ದಾರೆ. ಆದರೆ ಸಿದ್ದರಾಮಯ್ಯ ಅವರು ಮಾತ್ರ ವಯನಾಡು ಬಗ್ಗೆ ಕಳಕಳಿವಹಿಸುತ್ತಿದ್ದಾರೆ. ಹೀಗಾಗಿ ಸಿದ್ದರಾಮಯ್ಯ ನಡೆ ಗುಲಾಮಗಿರಿಯಂತೆ ಕಾಣುತ್ತಿದೆ ಎಂದು ಹೇಳಿದ್ದಾರೆ.
ಇನ್ನು ಕಾಂಗ್ರೆಸ್ ನಾಯಕರು ಸರ್ಕಾರ ಹಾಗೂ ಸಿದ್ದರಾಮಯ್ಯ ವಿರುದ್ಧ ಕೇಳಿ ಬರುತ್ತಿರುವ ಭ್ರಷ್ಟಾಚಾರದ ಆರೋಪಗಳ ಬಗ್ಗೆ ಉತ್ತರ ನೀಡುವಲ್ಲೇ ಕಾರ್ಯನಿರತವಾಗಿದ್ದಾರೆ. ಅಲ್ಲದೇ ಈ ತಮ್ಮನ್ನು ರಕ್ಷಣೆ ಮಾಡಿಕೊಳ್ಳುವ ಸಲುವಾಗಿ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳ ಬಗ್ಗೆ ಗಮನಹರಿಸುತ್ತಿಲ್ಲ. ಹಾಗಾಗಿ ವಿಧಾನಸಭೆಯಲ್ಲಿ ಈ ಸಂಬಂಧದ ಪ್ರಶ್ನೆಯನ್ನು ಹಾಗೂ ಬಾಣಂತಿಯರ ಸಾವು ಬಗ್ಗೆ ಎಸ್ಐಟಿ ತನಿಖೆಯಾಗಬೇಕು ಎಂದು ಒತ್ತಾಯಿಸಿದ್ದಾರೆ.
ಬೆಂಗಳೂರು: ತಮ್ಮ ವಿರುದ್ಧ ದಾಖಲಾಗಿರುವ ಅಸಹಜ ಲೈಂಗಿಕ ಪ್ರಕರಣವನ್ನು ಕೈಬಿಡುವಂತೆ ಕೋರಿ, ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ…
ಟಿ.ನರಸೀಪುರ: ಕಾಡಾನೆ ದಾಳಿಗೆ ಸಿಲುಕಿ ರೈತರೊಬ್ಬರು ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ತಲಕಾಡು ಪೊಲೀಸ್ ಠಾಣೆ ವ್ಯಾಪ್ತಿಯ…
ಮೈಸೂರು: ಮೈಸೂರು ನಗರದ ಸಿಸಿಬಿ ಪೊಲೀಸರು ಇಂದು ಮಾದಕ ವಸ್ತುಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.…
ಮಂಡ್ಯ: ಮಕ್ಕಳು ಪಠ್ಯೇತರ ಚಟುವಟಿಕೆಗಳಾದ ಚಿತ್ರಕಲೆ, ಸಂಗೀತ, ಕ್ರೀಡಾ ಆಸಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ವಿಧಾನಪರಿಷತ್ ಸದಸ್ಯ ಹಾಗೂ ಕರ್ನಾಟಕ ರಾಜ್ಯ…
ಮೈಸೂರು: ಶಾಸಕರ ವಿದೇಶಿ ಪ್ರವಾಸಕ್ಕೂ ರಾಜಕೀಯ ಬೆಳವಣಿಗೆಗಳಿಗೂ ಸಂಬಂಧವಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.…
ಬೆಂಗಳೂರು: ಉದ್ಯಮಿ ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆ ಅಂತಿಮ ಹಂತ ತಲುಪಿದ್ದು, ವಿಶೇಷ ತನಿಖಾ ತಂಡ ತನಿಖೆಯನ್ನು ಪೂರ್ಣಗೊಳಿಸಿ ವರದಿ…