ರಾಜ್ಯ

ಸಿಎಂ ಸಿದ್ದರಾಮಯ್ಯ ವಿರುದ್ಧ ಸಿ.ಟಿ.ರವಿ ಕಿಡಿ

ಬೆಂಗಳೂರು: ರಾಜ್ಯಸರ್ಕಾರದ ವತಿಯಿಂದ ಕೇರಳದಲ್ಲಿ ನೆರೆ ಸಂತ್ರಸ್ಥರಿಗೆ ಗೃಹ ನಿರ್ಮಾಣ ಮಾಡುವ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಅವರ ವಯನಾಡು ಕಳಕಳಿ ಗುಲಾಮಗಿರಿಯ ಸಂಕೇತದಂತೆ ಕಾಣುತ್ತಿದೆ ಎಂದು ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ಕಿಡಿಕಾರಿದ್ದಾರೆ.

ಈ ಕುರಿತು ಇಂದು(ಡಿ.11) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ರಾಜ್ಯಸರ್ಕಾರ ಕೇರಳದಲ್ಲಿ ನೆರೆ ಸಂತ್ರಸ್ಥರಿಗೆ ಮನೆ ಕಟ್ಟಿಕೊಡುವ ಭರವಸೆಯನ್ನು ನೀಡಿದೆ. ಈ ವಿಚಾರ ಮಾನವೀಯವಾಗಿ ಮನೆ ನಿರ್ಮಾಣ ಮಾಡುವುದು ಸರಿ ಎಂಬಂತೆ ಕಾಣುತ್ತಿದೆ. ಆದರೆ ಸಿಎಂ ಸಿದ್ದರಾಮಯ್ಯ ಅವರ ಈ ನಡೆ ನಮಗೆ ಮಾನವೀಯ ನೆಲೆ ಎಂದು ಕಾಣುತ್ತಿಲ್ಲ. ಬದಲಾಗಿ ಇದು ಗುಲಾಮಗಿರಿಯ ಸಂಕೇತ ಎಂದು ಕಾಣುತ್ತಿದೆ. ವಯನಾಡು ಕ್ಷೇತ್ರದಲ್ಲಿ ಪ್ರಿಯಾಂಕಾ ಗಾಂಧಿ ಅವರು ಸಂಸದರಾಗಿದ್ದು, ಅವರೇ ಆ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಕಾಳಜಿವಹಿಸಬೇಕು ಎಂದು ಟೀಕಿಸಿದ್ದಾರೆ.

ಈಗಾಗಲೇ ನಮ್ಮ ರಾಜ್ಯದಲ್ಲಿ ಬಾಣಂತಿಯರ ಸಾವು ಸಂಭವಿಸಿದ್ದು, ಎತ್ತಿನಹೊಳೆ ಯೋಜನೆ ಸಂಬಂಧವಾಗಿ ರೈತರು ಅಧಿಕಾರಿಗಳ ಜೊತೆ ವಾದ-ವಿವಾದ ಮಾಡಿ ಹೊಳಗೆ ಹಅರಿ ಸಾವನ್ನಪ್ಪಿದ್ದಾರೆ. ಆದರೆ ಸಿದ್ದರಾಮಯ್ಯ ಅವರು ಮಾತ್ರ ವಯನಾಡು ಬಗ್ಗೆ ಕಳಕಳಿವಹಿಸುತ್ತಿದ್ದಾರೆ. ಹೀಗಾಗಿ ಸಿದ್ದರಾಮಯ್ಯ ನಡೆ ಗುಲಾಮಗಿರಿಯಂತೆ ಕಾಣುತ್ತಿದೆ ಎಂದು ಹೇಳಿದ್ದಾರೆ.

ಇನ್ನು ಕಾಂಗ್ರೆಸ್‌ ನಾಯಕರು ಸರ್ಕಾರ ಹಾಗೂ ಸಿದ್ದರಾಮಯ್ಯ ವಿರುದ್ಧ ಕೇಳಿ ಬರುತ್ತಿರುವ ಭ್ರಷ್ಟಾಚಾರದ ಆರೋಪಗಳ ಬಗ್ಗೆ ಉತ್ತರ ನೀಡುವಲ್ಲೇ ಕಾರ್ಯನಿರತವಾಗಿದ್ದಾರೆ. ಅಲ್ಲದೇ ಈ ತಮ್ಮನ್ನು ರಕ್ಷಣೆ ಮಾಡಿಕೊಳ್ಳುವ ಸಲುವಾಗಿ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳ ಬಗ್ಗೆ ಗಮನಹರಿಸುತ್ತಿಲ್ಲ. ಹಾಗಾಗಿ ವಿಧಾನಸಭೆಯಲ್ಲಿ ಈ ಸಂಬಂಧದ ಪ್ರಶ್ನೆಯನ್ನು ಹಾಗೂ ಬಾಣಂತಿಯರ ಸಾವು ಬಗ್ಗೆ ಎಸ್‌ಐಟಿ ತನಿಖೆಯಾಗಬೇಕು ಎಂದು ಒತ್ತಾಯಿಸಿದ್ದಾರೆ.

 

ಅರ್ಚನ ಎಸ್‌ ಎಸ್

Recent Posts

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು: ಸೆ.5ರ ಪ್ರತಿಭಟನೆ ಹಿಂಪಡೆದ ಸಿಜೆಪಿ

ನವದೆಹಲಿ: ಸೆಪ್ಟೆಂಬರ್‌ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್‌ಗೆ…

46 mins ago

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು

ನವದೆಹಲಿ: ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ಅನ್ನು ಸುಪ್ರೀಂಕೋರ್ಟ್‌ ರದ್ದುಪಡಿಸಿದೆ. ಜುಲೈನಲ್ಲಿ…

1 hour ago

ನೇಪಾಳ ಪ್ರವಾಹ | ಮೃತರ ಸಂಖ್ಯೆ 939ಕ್ಕೆ ಏರಿಕೆ, ಇನ್ನೂ ಸುಮಾರು 4,000 ಜನ ಕಣ್ಮರೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…

3 hours ago

ಮಡಿಕೇರಿ: ಕೆರೆಗೆ ಹಾರಿ ತಾಯಿ ಮಗಳು ಆತ್ಮಹತ್ಯೆ

ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…

3 hours ago

ಮಡಿಕೇರಿ: ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ!

ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…

3 hours ago

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

11 hours ago