ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರೇ ರಾಜ್ಯ ಸರ್ಕಾರದಿಂದ ಕಾಂಗ್ರೆಸ್ ಕಾರ್ಯಕರ್ತರಿಗೆ ಯಾಕೆ ಹಣ ನೀಡುತ್ತೀರಿ, ನಿಮ್ಮ ಜೇಬಿನಿಂದ ಹಣ ನೀಡಿ ಎಂದು ಬಿಜೆಪಿ ಎಂಎಲ್ಸಿ ಸಿ.ಟಿ.ರವಿ ತಿರುಗೇಟು ನೀಡಿದ್ದಾರೆ.
ಬೆಂಗಳೂರಿನಲ್ಲಿ ಇಂದು(ಮಾರ್ಚ್.12) ಗ್ಯಾರಂಟಿ ಅನುಷ್ಟಾನ ಸಮಿತಿಯ ಕಾಂಗ್ರೆಸ್ ಕಾರ್ಯಕರ್ತರಿಗೆ ಸರ್ಕಾರಿ ವೇತನ ಪಡೆಯುವ ಹಕ್ಕಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ನೀಡಿದ ಹೇಳಿಕೆ ಬಗ್ಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಸರ್ಕಾರದಲ್ಲಿ ಸಂಘ-ಸಂಸ್ಥೆಗಳಿಗೆ ಅನುದಾನ ನೀಡಲು ಹಣವಿಲ್ಲ ಎಂದು ಹೇಳುತ್ತಾರೆ. ಅತಿಥಿ ಶಿಕ್ಷಕರಿಗೆ ಮತ್ತು ಅಂಗನವಾಡಿ ಕಾರ್ಯಕರ್ತರಿಗೆ ಗೌರವಧನ ನೀಡಲು ಹಣವಿಲ್ಲವೆನ್ನುತ್ತಾರೆ. ಅಲ್ಲದೇ ಹಾಲು ಉತ್ಪಾದಕರು ಹಾಗೂ ಗುತ್ತಿಗೆದಾರರ ಹಣವನ್ನು ಉಳಿಸಿಕೊಂಡಿದ್ದಾರೆ. ಆದರೆ ರಾಜ್ಯ ಸರ್ಕಾರಕ್ಕೆ ಕಾಂಗ್ರೆಸ್ ಕಾರ್ಯಕರ್ತರಿಗೆ ನೀಡಲು ಮಾತ್ರ ಹಣವಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಸಾರ್ವಜನಿಕರ ತೆರಿಗೆ ಹಣದಲ್ಲಿ ಕಾಂಗ್ರೆಸ್ ಸರ್ಕಾರ ಮೋಜು-ಮಸ್ತಿ ಮಾಡಿಸುತ್ತಿದ್ದಾರೆ. ನಿಮ್ಮ ಕಾರ್ಯಕರ್ತರಿಗೆ ನಿಮ್ಮ ಜೇಬಿನಿಂದ ಹಣ ನೀಡಿ ಸರ್ಕಾರದ ಹಣ ಯಾಕೆ ನೀಡುತ್ತೀರಿ? ಜನರ ಹಣವನ್ನು ರಾಜ್ಯ ಸರ್ಕಾರ ಲೂಟಿ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.
ಆರೋಪಿಗಳಿಂದ ಕೃತ್ಯಕ್ಕೆ ಬಳಿಸಿದ ಟಯೋಟ ಕಾರು, ಪಿಸ್ತೂಲ್ ವಶ: ಎಸ್ಪಿ ಮಂಡ್ಯ : ನಗರದ ಹೊರವಲಯದ ಹೆದ್ದಾರಿಯಲ್ಲಿ ಜು.2ರ ಗುರುವಾರ…
ಚಿತ್ರೋದ್ಯಮಿಗಳೂ ಆಗಿರುವ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರನ್ನು ಮೊನ್ನೆ ಚಲನಚಿತ್ರ ವಾಣಿಜ್ಯ ಮಂಡಳಿಯ ಪದಾಧಿಕಾರಿಗಳು ಮತ್ತು ಮಾಜಿ ಅಧ್ಯಕ್ಷರ…
ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ…
ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ…
ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…