ರಾಜ್ಯ

ಸಿಎ ಸೈಟ್‌ ಕಟ್ಟಡ ನಿರ್ಮಾಣ ಕಾಲಮಿತಿ ; 3 ವರ್ಷದಿಂದ 5 ವರ್ಷ ಹೆಚ್ಚಳದ ಭರವಸೆ

ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ ಹೆಚ್ಚಿಸುವ ಬಗ್ಗೆ ಗಂಭೀರ ಪ್ರಯತ್ನ ಮಾಡಲಾಗುವುದು ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ಭರವಸೆ ನೀಡಿದ್ದಾರೆ.

ವಿಧಾನಪರಿಷತ್ತಿನಲ್ಲಿ ಸೋಮವಾರ ಬಿಜೆಪಿಯ ಡಿ.ಎಸ್.ಅರುಣ್ ಮತ್ತು ಇತರರ ಗಮನ ಸೆಳೆಯುವ ಸೂಚನೆಗೆ ಸಚಿವರು ಉತ್ತರಿಸಿದರು. ನಗರಾಭಿವೃದ್ಧಿ ಪ್ರಾಧಿಕಾರಗಳು ನೀಡಿರುವ ಸಿಎ ನಿವೇಶನಗಳನ್ನು 30 ವರ್ಷಗಳ ನಂತರ ಗುತ್ತಿಗೆ ಅವಧಿಯನ್ನು ನವೀಕರಣ ಮಾಡುವಾಗ 30 ವರ್ಷಗಳ ಹಿಂದಿನ ದರವನ್ನೇ ನಿಗದಿಪಡಿಸಲು ಸಾಧ್ಯವಿಲ್ಲ ಎಂದರು. ಆದರೆ, ಎಸ್ಆರ್ ದರವನ್ನು ಕಡಿಮೆ ಮಾಡುವ ಬಗ್ಗೆ ಪರಿಶೀಲಿಸಲಾಗುವುದು ಎಂದು ತಿಳಿಸಿದರು.

ಸಿಎ ನಿವೇಶನ ಪಡೆದು ಮೂರು ವರ್ಷಗಳ ಒಳಗೆ ಉದ್ದೇಶಿತ ಕಾರ್ಯಕ್ಕಾಗಿ ಕಟ್ಟಡ ನಿರ್ಮಾಣ ಆರಂಭಿಸಬೇಕೆಂಬ ನಿಯಮವನ್ನು ಸಡಿಲಿಸಬೇಕೆಂಬ ಒತ್ತಾಯವಿದೆ. ಈ ಹಿನ್ನೆಲೆಯಲ್ಲಿ ನಿಯಮವನ್ನು ಸಡಿಲಿಸಿ ಐದು ವರ್ಷಗಳಿಗೆ ಹೆಚ್ಚಿಸುವ ಬಗ್ಗೆ ಗಂಭೀರ ಪ್ರಯತ್ನ ನಡೆಸಲಾಗುತ್ತದೆ ಎಂದು ಸಚಿವರು ಸದನಕ್ಕೆ ಭರವಸೆ ನೀಡಿದರು.

ಆದರೆ, ಯಾವುದೇ ಕಾರಣಕ್ಕೂ ನಿವೇಶನಕ್ಕೆ ಶುದ್ಧ ಕ್ರಯಪತ್ರ ನೀಡಲು ಸಾಧ್ಯವಿಲ್ಲ ಮತ್ತು ಎಸ್ ಸಿ ಮತ್ತು ಎಸ್ ಟಿ ಸಮುದಾಯಕ್ಕೆ ನೀಡಲಾಗುತ್ತಿರುವ ಮೀಸಲಾತಿಯನ್ನು ಕಡಿಮೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.

ಆಂದೋಲನ ಡೆಸ್ಕ್

Recent Posts

ನಾಗೇಂದ್ರ ರಾಜೀನಾಮೆ; ಅನಿಲ್‌ಗೆ ಸಚಿವ ಸ್ಥಾನ ಸಿಗುವುದೇ?

ಮಂಜು ಕೋಟೆ ಎಚ್.ಡಿ.ಕೋಟೆ: ನಾಯಕ ಸಮುದಾಯದ ಮುಖಂಡರಾದ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಹಿನ್ನೆಲೆಯಲ್ಲಿ ತೆರವಾಗಿರುವ ಆ…

6 hours ago

ಓದುಗರ ಪತ್ರ: ಮದ್ದು ಅರೆಯಲಿ ಆಳುವವರು!

ಮದ್ದು ಅರೆಯಲಿ ಆಳುವವರು! ಬಗೆದಷ್ಟೂ ಬಯಲಾಗುತಿದೆ ಬ್ರಹ್ಮಾಂಡ ಭ್ರಷ್ಟಾಚಾರ ನೆಲದಾಳಕೂ ಬೇರೂರಿದೆ ಕೆಪಿಎಸ್‌ಸಿಯ ಕರ್ಮಕಾಂಡ! ಹಣವಂತರ ಆಡುಂಬಲವಿದು ಹರಣವಾಗುತಿದೆ ಬಡವನ…

6 hours ago

ಓದುಗರ ಪತ್ರ: ಪಾದಚಾರಿ ಮಾರ್ಗಕ್ಕೂ ಅಡ್ಡಗಾಲು

ಮೈಸೂರಿನ ಕುವೆಂಪು ನಗರ ಕಾಂಪ್ಲೆಕ್ಸ್ ಹತ್ತಿರ ಇರುವ ಒಂದನೇ ಹಂತ (ಇಡಬ್ಲ್ಯು ಎಸ್) ೩ನೇ ಕ್ರಾಸ್ ಬಳಿ ರಸ್ತೆಯ ಒಂದು…

6 hours ago

ಓದುಗರ ಪತ್ರ: ಈ ಶೌಚಾಲಯ ಪ್ರಾರಂಭಕ್ಕೆ ಮುಹೂರ್ತ ಬಂದಿಲ್ಲವೇ?

ಹೆಚ್. ಡಿ. ಕೋಟೆ ಮಿನಿ ವಿಧಾನಸೌಧ ಆಡಳಿತ ಕಚೇರಿ ಪಕ್ಕದಲ್ಲಿ ಸಾರ್ವಜನಿಕರಿಗಾಗಿ ಸಾಕಷ್ಟು ಹಣ ಖರ್ಚು ಮಾಡಿ ಶೌಚಾಲಯವನ್ನು ನಿರ್ಮಾಣ…

6 hours ago

ಓದುಗರ ಪತ್ರ: 365 ದಿನಗಳೂ ಸಾರ್ವಜನಿಕ ಗ್ರಂಥಾಲಯಗಳ ಸೇವೆ ಲಭ್ಯವಿರಲಿ

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುವ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಿಕೊಡುವ ಉದ್ದೇಶದಿಂದ ಬೆಂಗಳೂರು, ಮೈಸೂರು ಸೇರಿದಂತೆ ಹಲವು ನಗರಗಳಲ್ಲಿ ಸಾರ್ವಜನಿಕ ಗ್ರಂಥಾಲಯಗಳು…

6 hours ago

ಯುವಜನರ ಕೈಯಲ್ಲಿ ಮೊಬೈಲ್ ಇದೆ; ದಿಕ್ಕು ಇದೆಯೇ?

ಟಿ.ಕೆ.ಹರೀಶ್ ತಕ್ಷಣದ ಯಶಸ್ಸಿನ ಸಂಸ್ಕೃತಿಯಿಂದ ಅಪಾಯಕಾರಿ ; ಯುವಜನರಿಗೆ ಮನವರಿಕೆ ಅಗತ್ಯ ಇಂದು ಒಂದು ಮಗು ಹುಟ್ಟಿದಾಗ ಅದರ ಸುತ್ತಲೂ…

6 hours ago