ಮಂಡ್ಯ: ಪ್ರಿಯಾಂಕ ಖರ್ಗೆ ಮಾತಿಗೆ ಮುಂಚೆ ಊರಿಗೆಲ್ಲ ಬುದ್ಧಿ ಹೇಳುತ್ತಿದ್ದರು. ಈಗ ಅವರೇ ಬುದ್ಧಿ ಹೇಳಿಸಿಕೊಳ್ಳುವ ಸ್ಥಿತಿಗೆ ಬಂದು ತಲುಪಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.
ಮಂಡ್ಯ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ಪ್ರಕ್ರಿಯೆ ಮುಗಿದ ನಂತರ ಸಚಿವರು ಮಾಧ್ಯಮಗಳ ಜತೆ ಮಾತನಾಡಿದರು.
ಖರ್ಗೆ ಅವರ ಕುಟುಂಬ ಕೆಐಡಿಬಿಯಿಂದ ಸಿಎ ಸೈಟ್ ಪಡೆದಿರುವ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ಹಲವಾರು ಜನರಿಗೆ ಈ ರೀತಿಯಲ್ಲಿ ಜಾಗ ಕೊಟ್ಟಿದ್ದಾರೆ, ಬೇಕಾದಷ್ಟು ಪ್ರಕರಣಗಳು ನಡೆದಿವೆ. ಖರ್ಗೆ ಅವರು ದೇಶಕ್ಕೆ, ನಾಡಿಗೆಲ್ಲ ಬುದ್ದಿ ಹೇಳುವವರು, ಉಪದೇಶ ಮಾಡುವವರು. ಯಾವ ಆಧಾರದ ಮೇಲೆ ಈ ಜಾಗವನ್ನು ಇವರು ತೆಗೆದುಕೊಂಡಿದ್ದಾರೆ? ಎಂದು ಕೇಂದ್ರ ಸಚಿವರು ಪ್ರಶ್ನಿಸಿದರು.
ದುಡ್ಡು ಕೊಟ್ಟು ಖರೀದಿಸಲು ಆಗುತ್ತಿರಲಿಲ್ಲವಾ? ಖಾಸಗಿ ಜಮೀನು ಖರೀದಿ ಮಾಡಬಹುದಿತ್ತು. ಕೆಐಎಡಿಬಿ ಜಾಗವೇ ಬೇಕಿತ್ತಾ? ಇದು ಅಧಿಕಾರ ದುರಪಯೋಗ. ದೇಶಕ್ಕೆ ಬುದ್ದಿ ಹೇಳುವವರು ಇದಕ್ಕೆ ಉತ್ತರ ಹೇಳಬೇಕು ಎಂದು ಅವರು ಟೀಕಿಸಿದರು.
ಬೆಂಗಳೂರು : ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಸವಾಲು ಎದುರಾಗಿದೆ. ತಮಿಳುನಾಡಿಗೆ ಬಿಳಿಗುಂಡ್ಲುವಿನಲ್ಲಿ ಮುಂದಿನ 15 ದಿನಗಳ…
ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…
ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್ ಸರ್ಕಾರದಿಂದ ಭರ್ಜರಿ ಗುಡ್ನ್ಯೂಸ್ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್ಗಳ ವಿಚಾರದಲ್ಲಿ ಮಹತ್ವದ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…
ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…
ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…