ಬೆಂಗಳೂರು: ಸುಮಾರು 1ಕೋಟಿ ರೂ. ವರೆಗಿನ ಸರ್ಕಾರಿ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಂರಿಗೆ ಮೀಸಲಾತಿ ನೀಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.
ಬಜೆಟ್ ಘೋಷಣೆಯಂತೆ ಈ ವಿಧೇಯಕವನ್ನು ಇದೇ ಅಧಿವೇಶನದಲ್ಲಿ ಮಂಡಿಸಲು ಸಚಿವ ಸಂಪುಟ ಅನುಮೋದನೆ ನೀಡಿದೆ.
ಇದರ ಜೊತೆಗೆ ಹಿಂದುಳಿದ ವರ್ಗಗಳ ಕಾಮಗಾರಿಗಳ ಮೀಸಲಾತಿಯನ್ನು ಹೆಚ್ಚಿಸಿದ್ದು, ಈ ಹಿಂದೆ ಎಸ್ಸಿ-ಎಸ್ಟಿ ಸಮುದಾಯಕ್ಕೆ ಇದ್ದ 1 ಕೋಟಿವರೆಗಿನ ಕಾಮಗಾರಿ ಮೊತ್ತವನ್ನು 2 ಕೋಟಿ ರೂ.ವರೆಗೆ ವಿಸ್ತರಿಸಿ ಮೀಸಲಾತಿಗೆ ಅವಕಾಶ ನೀಡಿಲಾಗಿದೆ.
ಅಲ್ಲದೇ ಗ್ರಾಮೀಣ ಭಾಗದಲ್ಲಿ ಇ-ಖಾತಾ ನೀಡಲು ಸಂಪುಟ ಒಪ್ಪಿಗೆ ಸೂಚಿಸಿದೆ. ಜೊತೆಗೆ ಕರ್ನಾಟಕ ಲೋಕಸೇವಾ ಆಯೋಗದ ಪರೀಕ್ಷೆ ಆಡಳಿತ ಸುಧಾರಣೆಗೆ ಪ್ರತ್ಯೇಕ ಸಮಿತಿ ರಚನೆಗೂ ಒಪ್ಪಿಗೆ ನೀಡಿದೆ.





