Mysore
19
broken clouds

Social Media

ಭಾನುವಾರ, 01 ಫೆಬ್ರವರಿ 2026
Light
Dark

ಸಚಿವ ಸಂಪುಟ ವಿಸ್ತರಣೆ ವರಿಷ್ಠರಿಗೆ ಬಿಟ್ಟ ವಿಚಾರ: ಟಿ.ಬಿ.ಜಯಚಂದ್ರ

ತುಮಕೂರು: ಸಚಿವ ಸಂಪುಟ ವಿಸ್ತರಣೆ ವರಿಷ್ಠರಿಗೆ ಬಿಟ್ಟಿರುವ ವಿಚಾರ ವರಿಷ್ಠರೇ ತೀರ್ಮಾನ ಮಾಡುತ್ತಾರೆ ಎಂದು ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಹೇಳಿದ್ದಾರೆ.

ತುಮಕೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು ಒಂದು ಚುನಾವಣೆಯಲ್ಲಿ ಸೋತವರು ಗೆದಿದ್ದಾರೆ. ಗೆದ್ದವರು ಸೋತಿದ್ದಾರೆ. ಜುಲೈ 15ಕ್ಕೆ ಅಸೆಂಬ್ಲಿ ಇದೆ, ಅದಾದ ಬಳಿಕ ವರಿಷ್ಠರು ಸಚಿವ ಸಂಪುಟದ ಬಗ್ಗೆ ನಿರ್ಧಾರ ಮಾಡುತ್ತಾರೆ ಎಂದರು.

ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ವಿಚಾರ ಸಮರ್ಥಿಸಿಕೊಂಡ ಟಿಬಿಜೆ, ಗ್ಯಾರಂಟಿ ಯೋಜನೆಗಳನ್ನು ಬಿಜೆಪಿ-ಜೆಡಿಎಸ್‌ನಿಂದ ಅಪಹಾಸ್ಯ ಮಾಡಲಾಗುತ್ತಿದೆ. ಬಡವರ ಯೋಜನೆಗಳನ್ನು ಬಿಟ್ಟಿ ಭಾಗ್ಯ. ಉಚಿತ ಎಂದು ಅಪಹಾಸ್ಯ ಮಾಡಲಾಗುತ್ತಿದೆ. ಸಂಪನ್ಮೂಲವನ್ನು ಜಾಸ್ತಿ ಮಾಡಬೇಕಾದಾಗ ಬೆಲೆ ಏರಿಕೆ ಅನಿವಾರ್ಯ ಆಗಲಿದೆ. ಪೆಟ್ರೋಲ್ ಡೀಸೆಲ್ ಜೊತೆಗೆ ಬೇರೆ ಬೇರೆ ಮಾರ್ಗಗಳ ಚರ್ಚೆ ಮಾಡಲಾಗುತ್ತಿದೆ. ಗ್ಯಾರಂಟಿ ಜೊತೆ ಅಭಿವೃದ್ಧಿ ಯೋಜನೆಗಳು ಕುಂಠಿತ ಆಗದಂತೆ ಸರ್ಕಾರ ಚಿಂತನೆ ಮಾಡುತ್ತಿದೆ ಎಂದರು.

ಬಿಜೆಪಿ ಆಡಳಿತ ಇರುವ ರಾಜ್ಯಗಳಲ್ಲಿ ಕರ್ನಾಟಕಕ್ಕಿಂತ ಹೆಚ್ಚು ಇಂಧನ ಬೆಲೆ ಇದೆ. ಮಹಾರಾಷ್ಟ್ರದ ಬಳಿಕ ಕರ್ನಾಟಕ ರಾಜ್ಯ 2ನೇ ಸ್ಥಾನ ತೆರಿಗೆ ಕಟ್ಟುವಲ್ಲಿ ಮುಂದೆ ಇದೆ. ರಾಜ್ಯಕ್ಕೆ ಹೆಚ್ಚು ತೆರಿಗೆ ಕಟ್ಟಲಾಗುತ್ತಿದೆ ಆದರೆ ಕೇಂದ್ರ ಕಡಿಮೆ ವಾಪಸ್ ಕೊಡುತ್ತಿದೆ. ಅಭಿವೃದ್ಧಿ ಕಾರ್ಯಗಳಿಗೆ ಹಿನ್ನಡೆಯಾಗದಂತೆ ಗ್ಯಾರಂಟಿ ಯೋಜನೆ ಮುಂದುವರಿಯಲಿದೆ ಎಂದು ತಿಳಿಸಿದರು.

Tags:
error: Content is protected !!