ತುಮಕೂರು: ಸಚಿವ ಸಂಪುಟ ವಿಸ್ತರಣೆ ವರಿಷ್ಠರಿಗೆ ಬಿಟ್ಟಿರುವ ವಿಚಾರ ವರಿಷ್ಠರೇ ತೀರ್ಮಾನ ಮಾಡುತ್ತಾರೆ ಎಂದು ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಹೇಳಿದ್ದಾರೆ.
ತುಮಕೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು ಒಂದು ಚುನಾವಣೆಯಲ್ಲಿ ಸೋತವರು ಗೆದಿದ್ದಾರೆ. ಗೆದ್ದವರು ಸೋತಿದ್ದಾರೆ. ಜುಲೈ 15ಕ್ಕೆ ಅಸೆಂಬ್ಲಿ ಇದೆ, ಅದಾದ ಬಳಿಕ ವರಿಷ್ಠರು ಸಚಿವ ಸಂಪುಟದ ಬಗ್ಗೆ ನಿರ್ಧಾರ ಮಾಡುತ್ತಾರೆ ಎಂದರು.
ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ವಿಚಾರ ಸಮರ್ಥಿಸಿಕೊಂಡ ಟಿಬಿಜೆ, ಗ್ಯಾರಂಟಿ ಯೋಜನೆಗಳನ್ನು ಬಿಜೆಪಿ-ಜೆಡಿಎಸ್ನಿಂದ ಅಪಹಾಸ್ಯ ಮಾಡಲಾಗುತ್ತಿದೆ. ಬಡವರ ಯೋಜನೆಗಳನ್ನು ಬಿಟ್ಟಿ ಭಾಗ್ಯ. ಉಚಿತ ಎಂದು ಅಪಹಾಸ್ಯ ಮಾಡಲಾಗುತ್ತಿದೆ. ಸಂಪನ್ಮೂಲವನ್ನು ಜಾಸ್ತಿ ಮಾಡಬೇಕಾದಾಗ ಬೆಲೆ ಏರಿಕೆ ಅನಿವಾರ್ಯ ಆಗಲಿದೆ. ಪೆಟ್ರೋಲ್ ಡೀಸೆಲ್ ಜೊತೆಗೆ ಬೇರೆ ಬೇರೆ ಮಾರ್ಗಗಳ ಚರ್ಚೆ ಮಾಡಲಾಗುತ್ತಿದೆ. ಗ್ಯಾರಂಟಿ ಜೊತೆ ಅಭಿವೃದ್ಧಿ ಯೋಜನೆಗಳು ಕುಂಠಿತ ಆಗದಂತೆ ಸರ್ಕಾರ ಚಿಂತನೆ ಮಾಡುತ್ತಿದೆ ಎಂದರು.
ಬಿಜೆಪಿ ಆಡಳಿತ ಇರುವ ರಾಜ್ಯಗಳಲ್ಲಿ ಕರ್ನಾಟಕಕ್ಕಿಂತ ಹೆಚ್ಚು ಇಂಧನ ಬೆಲೆ ಇದೆ. ಮಹಾರಾಷ್ಟ್ರದ ಬಳಿಕ ಕರ್ನಾಟಕ ರಾಜ್ಯ 2ನೇ ಸ್ಥಾನ ತೆರಿಗೆ ಕಟ್ಟುವಲ್ಲಿ ಮುಂದೆ ಇದೆ. ರಾಜ್ಯಕ್ಕೆ ಹೆಚ್ಚು ತೆರಿಗೆ ಕಟ್ಟಲಾಗುತ್ತಿದೆ ಆದರೆ ಕೇಂದ್ರ ಕಡಿಮೆ ವಾಪಸ್ ಕೊಡುತ್ತಿದೆ. ಅಭಿವೃದ್ಧಿ ಕಾರ್ಯಗಳಿಗೆ ಹಿನ್ನಡೆಯಾಗದಂತೆ ಗ್ಯಾರಂಟಿ ಯೋಜನೆ ಮುಂದುವರಿಯಲಿದೆ ಎಂದು ತಿಳಿಸಿದರು.
ಅಮರಾವತಿ: ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್ ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ವೈಎಸ್ಆರ್ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್…
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು. ಜಾನಕಿ ಅವರ ಪುತ್ರ…
ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…
ಟೆಹರಾನ್: ಹಾರ್ಮುಜ್ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…
ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…
ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…