ರಾಜ್ಯ

ಸಚಿವ ಸಂಪುಟ ವಿಸ್ತರಣೆ ವರಿಷ್ಠರಿಗೆ ಬಿಟ್ಟ ವಿಚಾರ: ಟಿ.ಬಿ.ಜಯಚಂದ್ರ

ತುಮಕೂರು: ಸಚಿವ ಸಂಪುಟ ವಿಸ್ತರಣೆ ವರಿಷ್ಠರಿಗೆ ಬಿಟ್ಟಿರುವ ವಿಚಾರ ವರಿಷ್ಠರೇ ತೀರ್ಮಾನ ಮಾಡುತ್ತಾರೆ ಎಂದು ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಹೇಳಿದ್ದಾರೆ.

ತುಮಕೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು ಒಂದು ಚುನಾವಣೆಯಲ್ಲಿ ಸೋತವರು ಗೆದಿದ್ದಾರೆ. ಗೆದ್ದವರು ಸೋತಿದ್ದಾರೆ. ಜುಲೈ 15ಕ್ಕೆ ಅಸೆಂಬ್ಲಿ ಇದೆ, ಅದಾದ ಬಳಿಕ ವರಿಷ್ಠರು ಸಚಿವ ಸಂಪುಟದ ಬಗ್ಗೆ ನಿರ್ಧಾರ ಮಾಡುತ್ತಾರೆ ಎಂದರು.

ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ವಿಚಾರ ಸಮರ್ಥಿಸಿಕೊಂಡ ಟಿಬಿಜೆ, ಗ್ಯಾರಂಟಿ ಯೋಜನೆಗಳನ್ನು ಬಿಜೆಪಿ-ಜೆಡಿಎಸ್‌ನಿಂದ ಅಪಹಾಸ್ಯ ಮಾಡಲಾಗುತ್ತಿದೆ. ಬಡವರ ಯೋಜನೆಗಳನ್ನು ಬಿಟ್ಟಿ ಭಾಗ್ಯ. ಉಚಿತ ಎಂದು ಅಪಹಾಸ್ಯ ಮಾಡಲಾಗುತ್ತಿದೆ. ಸಂಪನ್ಮೂಲವನ್ನು ಜಾಸ್ತಿ ಮಾಡಬೇಕಾದಾಗ ಬೆಲೆ ಏರಿಕೆ ಅನಿವಾರ್ಯ ಆಗಲಿದೆ. ಪೆಟ್ರೋಲ್ ಡೀಸೆಲ್ ಜೊತೆಗೆ ಬೇರೆ ಬೇರೆ ಮಾರ್ಗಗಳ ಚರ್ಚೆ ಮಾಡಲಾಗುತ್ತಿದೆ. ಗ್ಯಾರಂಟಿ ಜೊತೆ ಅಭಿವೃದ್ಧಿ ಯೋಜನೆಗಳು ಕುಂಠಿತ ಆಗದಂತೆ ಸರ್ಕಾರ ಚಿಂತನೆ ಮಾಡುತ್ತಿದೆ ಎಂದರು.

ಬಿಜೆಪಿ ಆಡಳಿತ ಇರುವ ರಾಜ್ಯಗಳಲ್ಲಿ ಕರ್ನಾಟಕಕ್ಕಿಂತ ಹೆಚ್ಚು ಇಂಧನ ಬೆಲೆ ಇದೆ. ಮಹಾರಾಷ್ಟ್ರದ ಬಳಿಕ ಕರ್ನಾಟಕ ರಾಜ್ಯ 2ನೇ ಸ್ಥಾನ ತೆರಿಗೆ ಕಟ್ಟುವಲ್ಲಿ ಮುಂದೆ ಇದೆ. ರಾಜ್ಯಕ್ಕೆ ಹೆಚ್ಚು ತೆರಿಗೆ ಕಟ್ಟಲಾಗುತ್ತಿದೆ ಆದರೆ ಕೇಂದ್ರ ಕಡಿಮೆ ವಾಪಸ್ ಕೊಡುತ್ತಿದೆ. ಅಭಿವೃದ್ಧಿ ಕಾರ್ಯಗಳಿಗೆ ಹಿನ್ನಡೆಯಾಗದಂತೆ ಗ್ಯಾರಂಟಿ ಯೋಜನೆ ಮುಂದುವರಿಯಲಿದೆ ಎಂದು ತಿಳಿಸಿದರು.

andolana

Recent Posts

ಓದುಗರ ಪತ್ರ | ರಾಜ್ಯ ವಿಧಾನ ಮಂಡಲ ಅಧಿವೇಶನ ಸದ್ಬಳಕೆಗೆ ದಾರಿ ಯಾವುದಯ್ಯ!?

ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನ ವಿರೋಧ ಪಕ್ಷಗಳ ಸಕ್ರೀಯ ಭಾಗವಹಿಸುವಿಕೆ ಇಲ್ಲದೇ ನೀರಸವಾಗಿ ಕೊನೆಗೊಂಡಿದ್ದು ಪ್ರಜಾಪ್ರಭುತ್ವದ ದುರ್ದೈವದ ಸಂಗತಿಯಾಗಿದೆ.…

12 mins ago

ಓದುಗರ ಪತ್ರ | ಹಿಂದಿ ಶಿಕ್ಷಕರ ನೇಮಕಾತಿ ಏಕಿಲ್ಲ?

15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಹಿಂದಿ ಶಿಕ್ಷಕರನ್ನು ಪಟ್ಟಿಯಿಂದ ಹೊರಗಿಟ್ಟಿರುವುದು ಖಂಡನೀಯ. ಇದು ಸಂವಿಧಾನ ಬಾಹಿರ ನಡೆ. ಇದು ಹಿಂದಿ…

20 mins ago

ಓದುಗರ ಪತ್ರ | ಕನ್ನಡ ಚಿತ್ರ; ಟಿಕೆಟ್‌ಗಳಲ್ಲಿ ಆಂಗ್ಲ ಹೆಸರು !

ಮಲ್ಟಿಪ್ಲೆಕ್ಸ್‌ಗಳಲ್ಲಿ ಕನ್ನಡದ ಚಲನಚಿತ್ರಗಳು ಪ್ರದರ್ಶಿತವಾಗುತ್ತವೆ. ಗ್ರಾಹಕರಿಗೆ ನೀಡುವ ಟಿಕೆಟಿನಲ್ಲಿ ಸಿನಿಮಾದ ಹೆಸರೂ ಅಚ್ಚಾಗಿರುತ್ತದೆ.ಆದರೆ... ಕನ್ನಡ ಚಿತ್ರಕ್ಕೆ ಖರೀದಿಸುವ ಟಿಕೆಟ್‌ನಲ್ಲಿ ಚಿತ್ರದ…

24 mins ago

ಓದುಗರ ಪತ್ರ | ಮತದಾರರ ಕರಡು ಪಟ್ಟಿಯ ತಪ್ಪುಗಳನ್ನು ಸರಿಪಡಿಸಿ

ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್-೨೬) ಕಾರ್ಯ ಮುಗಿದು ಇದೀಗ ಕರಡು ಪಟ್ಟಿ ಬಿಡುಗಡೆಯಾಗಿದೆ. ಎಸ್‌ಐಆರ್ ಬಗ್ಗೆ ಹಲವಾರು ಅನುಮಾನ…

27 mins ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ಕಳಚಿದ ಚಲನಚಿತ್ರ ಪತ್ರಿಕೋದ್ಯಮದ ಹಿರಿಯ ಕೊಂಡಿ ಶ್ರೀಕೃಪಾ

ಕನ್ನಡ ಚಿತ್ರವೊಂದು ದೇಶ-ವಿದೇಶಗಳಲ್ಲಿ ಜೈತ್ರಯಾತ್ರೆ ಮಾಡುತ್ತಿರುವ ಸಂದರ್ಭ. ಕನ್ನಡ ಚಿತ್ರರಂಗದ ಕಡೆ ಭಾರತದ ಉಳಿದ ಚಿತ್ರೋದ್ಯಮಗಳು ತಿರುಗಿ ನೋಡುವ ಬೆಳವಣಿಗೆ.…

38 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 28  ಶುಕ್ರವಾರ

55 mins ago