ತುಮಕೂರು: ಸಚಿವ ಸಂಪುಟ ವಿಸ್ತರಣೆ ವರಿಷ್ಠರಿಗೆ ಬಿಟ್ಟಿರುವ ವಿಚಾರ ವರಿಷ್ಠರೇ ತೀರ್ಮಾನ ಮಾಡುತ್ತಾರೆ ಎಂದು ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಹೇಳಿದ್ದಾರೆ.
ತುಮಕೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು ಒಂದು ಚುನಾವಣೆಯಲ್ಲಿ ಸೋತವರು ಗೆದಿದ್ದಾರೆ. ಗೆದ್ದವರು ಸೋತಿದ್ದಾರೆ. ಜುಲೈ 15ಕ್ಕೆ ಅಸೆಂಬ್ಲಿ ಇದೆ, ಅದಾದ ಬಳಿಕ ವರಿಷ್ಠರು ಸಚಿವ ಸಂಪುಟದ ಬಗ್ಗೆ ನಿರ್ಧಾರ ಮಾಡುತ್ತಾರೆ ಎಂದರು.
ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ವಿಚಾರ ಸಮರ್ಥಿಸಿಕೊಂಡ ಟಿಬಿಜೆ, ಗ್ಯಾರಂಟಿ ಯೋಜನೆಗಳನ್ನು ಬಿಜೆಪಿ-ಜೆಡಿಎಸ್ನಿಂದ ಅಪಹಾಸ್ಯ ಮಾಡಲಾಗುತ್ತಿದೆ. ಬಡವರ ಯೋಜನೆಗಳನ್ನು ಬಿಟ್ಟಿ ಭಾಗ್ಯ. ಉಚಿತ ಎಂದು ಅಪಹಾಸ್ಯ ಮಾಡಲಾಗುತ್ತಿದೆ. ಸಂಪನ್ಮೂಲವನ್ನು ಜಾಸ್ತಿ ಮಾಡಬೇಕಾದಾಗ ಬೆಲೆ ಏರಿಕೆ ಅನಿವಾರ್ಯ ಆಗಲಿದೆ. ಪೆಟ್ರೋಲ್ ಡೀಸೆಲ್ ಜೊತೆಗೆ ಬೇರೆ ಬೇರೆ ಮಾರ್ಗಗಳ ಚರ್ಚೆ ಮಾಡಲಾಗುತ್ತಿದೆ. ಗ್ಯಾರಂಟಿ ಜೊತೆ ಅಭಿವೃದ್ಧಿ ಯೋಜನೆಗಳು ಕುಂಠಿತ ಆಗದಂತೆ ಸರ್ಕಾರ ಚಿಂತನೆ ಮಾಡುತ್ತಿದೆ ಎಂದರು.
ಬಿಜೆಪಿ ಆಡಳಿತ ಇರುವ ರಾಜ್ಯಗಳಲ್ಲಿ ಕರ್ನಾಟಕಕ್ಕಿಂತ ಹೆಚ್ಚು ಇಂಧನ ಬೆಲೆ ಇದೆ. ಮಹಾರಾಷ್ಟ್ರದ ಬಳಿಕ ಕರ್ನಾಟಕ ರಾಜ್ಯ 2ನೇ ಸ್ಥಾನ ತೆರಿಗೆ ಕಟ್ಟುವಲ್ಲಿ ಮುಂದೆ ಇದೆ. ರಾಜ್ಯಕ್ಕೆ ಹೆಚ್ಚು ತೆರಿಗೆ ಕಟ್ಟಲಾಗುತ್ತಿದೆ ಆದರೆ ಕೇಂದ್ರ ಕಡಿಮೆ ವಾಪಸ್ ಕೊಡುತ್ತಿದೆ. ಅಭಿವೃದ್ಧಿ ಕಾರ್ಯಗಳಿಗೆ ಹಿನ್ನಡೆಯಾಗದಂತೆ ಗ್ಯಾರಂಟಿ ಯೋಜನೆ ಮುಂದುವರಿಯಲಿದೆ ಎಂದು ತಿಳಿಸಿದರು.
ಮಂಡ್ಯ : ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್ ಆಟೋ (ಟಾಟಾ ಏಸ್) ರಸ್ತೆ ಬದಿಗೆ ಉರುಳಿಬಿದ್ದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟು,…
ಹಾಸನ: ಮಗನನ್ನು ಶಾಲೆಗೆ ಸೇರಿಸಲಯ ಪತ್ರಕ್ಕಾಗಿ ಆಟೋದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಾಲಕನ ಅತಿಬೇಗ ಮತ್ತು ನಿರ್ಲಕ್ಷ್ಯದಿಂದ ಪಲ್ಟಿಯಾದ ಪರಿಣಾಮ ಅಮ್ಮ…
ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಬಾಲಿವುಡ್ ನಟ ರಣವೀರ್ ಸಿಂಗ್ ಭೇಟಿ ನೀಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಚಾಮುಂಡಿಬೆಟ್ಟದ…
ಬೆಂಗಳೂರು: ಇಂದು ಕೃಷಿ ಕ್ಷೇತ್ರ ಅನೇಕ ಸವಾಲುಗಳನ್ನು ಎದುರಿಸುತ್ತಿದೆ. ಹವಾಮಾನ ವೈಪರೀತ್ಯ, ಉತ್ಪಾದನಾ ವೆಚ್ಚದ ಏರಿಕೆ, ಮಾರುಕಟ್ಟೆ ಅಸ್ಥಿರತೆ ಮತ್ತು…
ಬೆಂಗಳೂರು: ಸಿಎಂ ಬದಲಾವಣೆ ಆದರೆ ಪರಮೇಶ್ವರ್ ಮುಖ್ಯಮಂತ್ರಿಯಾಗಲಿ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಇಂದು…
ಮೈಸೂರು: ರಸಗೊಬ್ಬರ ಖರೀದಿಗೆ ಎಫ್ಐಡಿ ಕಡ್ಡಾಯ ಮಾಡಿರುವುದನ್ನು ವಿರೋಧಿಸಿ ರೈತ ಮುಖಂಡರು ಪ್ರತಿಭಟನೆ ನಡೆಸಿದರು. ಮೈಸೂರಿನ ಕಾಡಾ ಕಛೇರಿ ಆವರಣದಲ್ಲಿರುವ…