ಬೆಂಗಳೂರು: ಅಕ್ಟೋಬರ್.18ರಂದು ಸಚಿವ ಸಂಪುಟ ಸಭೆ ಕರೆಯಲಾಗಿದ್ದು, ಅಲ್ಲಿ ಜಾತಿ ಗಣತಿ ವರದಿ ಮಂಡನೆಯಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪಕ್ಷಾತೀತವಾಗಿ ಎಲ್ಲಾ ನಾಯಕರು ಜಾತಿ ಗಣತಿ ವರದಿ ಜಾರಿಗೆ ಒತ್ತಾಯಿಸಿದ್ದಾರೆ.
ಇದೇ ತಿಂಗಳ 18ರಂದು ನಡೆಯುವ ಸಂಪುಟ ಸಭೆ ಮುಂದೆ ಈ ವರದಿಯ ಬಗ್ಗೆ ಚರ್ಚೆ ನಡೆಸಲಾಗುವುದು.
ಇದು ಹಿಂದುಳಿದ ವರ್ಗಗಳ ಸಮೀಕ್ಷೆ ಮಾತ್ರವಲ್ಲ. ಏಳು ಕೋಟಿ ಜನರ ಸಮೀಕ್ಷೆ. ದೇಶದಲ್ಲಿ ಮೊದಲ ಬಾರಿಗೆ ಇಂತಹ ಸಮೀಕ್ಷೆ ನಡೆದಿದೆ. ನಾನು ಈ ವರದಿಯನ್ನು ನೋಡಿಲ್ಲ ಹಾಗೂ ಓದೂ ಕೂಡ ಇಲ್ಲ ಎಂದರು.
ಅಂದು ನಡೆಯುವ ಸಭೆಯಲ್ಲಿ ಜಾತಿ ಗಣತಿ ವರದಿ ಬಗ್ಗೆ ಸಂಪೂರ್ಣ ಚರ್ಚೆ ನಡೆಯಲಿದೆ. ಎಲ್ಲಾ ಸಚಿವರ ಅಭಿಪ್ರಾಯಗಳನ್ನು ಸಹ ಕೇಳಲಾಗುತ್ತದೆ. ಸಭೆ ಬಳಿಕ ಮುಂದಿನ ತೀರ್ಮಾನ ಏನು ಎಂಬುದನ್ನು ನಿರ್ಧಾರ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದರು.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…