ರಾಜ್ಯ

ಕಸ್ತೂರಿ ರಂಗನ್ ವರದಿ ತಿರಸ್ಕರಿಸಲು ಸಂಪುಟ ಸಭೆಯಲ್ಲಿ ನಿರ್ಣಯ

ಬೆಂಗಳೂರು: ರಾಜ್ಯದ ಪಶ್ಚಿಮ ಘಟ್ಟಗಳ ಕುರಿತ ಕಸ್ತೂರಿರಂಗನ್‌ ವರದಿಯನ್ನು ತಿರಸ್ಕರಿಸಲು ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ವಿಧಾನಸೌಧಲದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ ಎಂದು ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಹೇಳಿದ್ದಾರೆ.

ಸಾಕಷ್ಟು ವಿರೋಧ ವ್ಯಕ್ತವಾಗಿದ್ದ ಕಸ್ತೂರಿ ರಂಗನ್ ವರದಿಯನ್ನು ತಿರಸ್ಕರಿಸಲು ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ವಿಧಾನಸೌಧದಲ್ಲಿ ನಡೆದ ಸಂಪುಟ ಸಭೆ ಈ ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ ಎಂದು ಸಭೆ ಬಳಿಕ ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಹೇಳಿದ್ದಾರೆ.

ಪಶ್ಚಿಮ ಘಟ್ಟಗಳಲ್ಲಿ ಮಾನವನ ಹಸ್ತಕ್ಷೇಪ ಮಾಡುತ್ತಿರುವುದರಿಂದಾಗಿ ಪರಿಸರಕ್ಕೆ ಧಕ್ಕೆ ಉಂಟಾಗುತ್ತಿದೆ. ಆ ಮೂಲಕ ಜೀವ ಸಂಕುಲಕ್ಕೂ ಅಪಾಯ ಎದುರಾಗಲಿದೆ ಎನ್ನುವುದು ಪರಿಸರ ತಜ್ಞರ ಆತಂಕವಾಗಿತ್ತು. ಇದಕ್ಕಾಗಿ ಕಸ್ತೂರಿ ರಂಗನ್ ವರದಿಯನ್ನು ಸಿದ್ಧಪಡಿಸಲಾಗಿತ್ತು. ಆದರೆ ಭಾರಿ ವಿರೋಧದ ನಡುವೆ ಇಂದಿನ ಸಂಪುಟ ಸಭೆಯಲ್ಲಿ ವರದಿಯನ್ನು ತಿರಸ್ಕಾರ ಮಾಡಲಾಗಿದೆ ಎಂದರು.

ಇತ್ತೀಚೆಗೆ ಕಸ್ತೂರಿ ರಂಗನ್ ವರದಿ ಜಾರಿಗೆ ಜನಪ್ರತಿನಿಧಿಗಳ ಸಭೆಯಲ್ಲಿ ಸಮ್ಮತಿಸಲಾಗಿತ್ತು. ಆದರೆ ಕೇಂದ್ರ ಸರ್ಕಾರದ ಕಸ್ತೂರಿರಂಗನ್ ಸಮಿತಿಯ ಶಿಫಾರಸುಗಳನ್ನು ಕರ್ನಾಟಕ ಸರ್ಕಾರ ಪೂರ್ಣವಾಗಿ ಜಾರಿಗೊಳಿಸಲು ಸಾಧ್ಯವಿಲ್ಲ ಎಂದು ಇತ್ತೀಚೆಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಕೂಡ ಹೇಳಿದ್ದರು. ಪಶ್ಚಿಮ ಘಟ್ಟಗಳ ಪರಿಸರ ರಕ್ಷಣೆ ಉದ್ದೇಶದಿಂದಾಗಿ ಪರಿಸರ ತಜ್ಞ ಮಾಧವ ಗಾಡ್ಗಿಲ್ ಎಂಬುವವರ ಅಧ್ಯಕ್ಷತೆಯಲ್ಲಿ ಕೆಂದ್ರ ಸರ್ಕಾರ ಒಂದು ಸಮಿತಿ ರಚಿಸಿತ್ತು. ಅವರು 2011ರ ಆಗಸ್ಟ್ 31ರಂದು ಸರ್ಕಾರಕ್ಕೆ ತಮ್ಮ ವರದಿ ಸಲ್ಲಿಸಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕಾಂಗ್ರೆಸ್‌ ಶಾಸಕ ಷಡಕ್ಷರಿ ಆರೋಗ್ಯ ಸ್ಥಿತಿ ಗಂಭೀರ

ನವದೆಹಲಿ: ತಿಪಟೂರು ಕಾಂಗ್ರೆಸ್‌ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…

26 mins ago

ಕೇರಳದಲ್ಲಿ ಮತ್ತೆ ನಿಫಾ ವೈರಸ್‌ ಪತ್ತೆ: ಆರೋಗ್ಯ ಇಲಾಖೆಯಿಂದ ಹೈಅಲರ್ಟ್‌

ಕೋಯಿಕ್ಕೋಡ್:‌ ವಯನಾಡು, ಕೋಯಿಕ್ಕೋಡ್‌ನಲ್ಲಿ ಶಿಗೆಲ್ಲಾ ವೈರಸ್‌ ಸೋಂಕು ಹರಡಿರುವ ನಡುವೆ ನಿಫಾ ವೈರಸ್‌ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…

34 mins ago

ಕೆಆರ್‌ಎಸ್‌ ಡ್ಯಾಂ ನೀರಿನ ಮಟ್ಟ 81 ಅಡಿಗೆ ಕುಸಿತ: ರೈತರಲ್ಲಿ ಆತಂಕ

ಮಂಡ್ಯ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ 81 ಅಡಿಗೆ ಕುಸಿದಿದ್ದು, ರೈತರಲ್ಲಿ ಆತಂಕ ಮನೆಮಾಡಿದೆ.…

1 hour ago

ಮಧ್ಯಪ್ರಾಚ್ಯ ಯುದ್ಧ ಮತ್ತೆ ಉಲ್ಬಣ: ಹಾರ್ಮುಜ್‌ ಜಲಸಂಧಿ ಬಂದ್‌ ಮಾಡಿದ ಇರಾನ್‌

ಟೆಹರಾನ್:‌ ಇರಾನ್‌, ಅಮೇರಿಕಾ ಮತ್ತು ಇಸ್ರೇಲ್‌ ಸಂಘರ್ಷ ಮತ್ತೆ ಉಲ್ಬಣಗೊಂಡಿದೆ. ಯುಎಸ್‌ ದಾಳಿ ಬೆನ್ನಲ್ಲೇ ಹಾರ್ಮುಜ್‌ ಜಲಸಂಧಿಯನ್ನು ಇರಾನ್‌ ಮತ್ತೆ…

2 hours ago

ಓದುಗರ ಪತ್ರ: ನೇರಳೆ ತಳಿ ಅಭಿವೃದ್ಧಿಗೆ ಸರ್ಕಾರ ಕ್ರಮ ಕೈಗೊಳ್ಳಲಿ

ನೇರಳೆ ಹಣ್ಣಿನ ಬೀಜಗಳ ಔಷಧಿಯ ಗುಣಗಳನ್ನು ಪರಿಗಣಿಸಿ ಸರ್ಕಾರವು ಇವುಗಳ ಸಂರಕ್ಷಣೆ ಮತ್ತು ಮೌಲ್ಯವರ್ಧನೆಗೆ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ. ತೋಟಗಾರಿಕಾ…

4 hours ago

ಓದುಗರ ಪತ್ರ: ಪರಸಯ್ಯನ ಹುಂಡಿ ಸರ್ಕಲ್‌ನಲ್ಲಿ ಬಸ್ ನಿಲುಗಡೆಯಿಂದ ತೊಂದರೆ

ಮೈಸೂರಿನ ರಿಂಗ್ ರಸ್ತೆ ಪರಸಯ್ಯನ ಹುಂಡಿ ಸರ್ಕಲ್‌ನಲ್ಲಿ ಪ್ರತಿನಿತ್ಯ ಸಾರಿಗೆ ನಿಗಮದ ಬಸ್‌ಗಳನ್ನು ನಿಲುಗಡೆ ಮಾಡುವುದರಿಂದ ಪ್ರತಿನಿತ್ಯ ಟ್ರಾಫಿಕ್ ಜಾಮ್…

4 hours ago