ಬೆಳಗಾವಿ (ಸುವರ್ಣಸೌಧ) : ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಕೇಬಲ್ ಟಿವಿ ಆಪರೇಟರ್ಗಳಿಗೆ ವಿಧಿಸಲಾಗುತ್ತಿರುವ ಶುಲ್ಕವನ್ನು ಶೇ.50ರಷ್ಟು ಕಡಿಮೆ ಮಾಡಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಪ್ರಕಟಿಸಿದರು.
ವಿಧಾನಪರಿಷತ್ನಲ್ಲಿ ಸದಸ್ಯರಾದ ಬಲ್ಕಿಸ್ ಭಾನು ಅವರ ಪ್ರಶ್ನೆಗೆ ಉತ್ತರಿಸಿದ ಅವರು, ನಗರ ಹಾಗೂ ಗ್ರಾಮೀಣ ಭಾಗಗಳಲ್ಲಿ ಕೇಬಲ್ ಟಿವಿ ಆಪರೇಟರ್ಗಳಿಗೆ ಇಂಧನ ಇಲಾಖೆಯ ವಿದ್ಯುತ್ ಕಂಬಗಳನ್ನು ಬಳಸಿಕೊಂಡಲ್ಲಿ ಅವರಿಗೆ ೧೫೦ ರೂ. ಶುಲ್ಕ ವಿಽಸಲಾಗುತ್ತಿತ್ತು. ಈ ಶುಲ್ಕವು ಆರ್ಥಿಕವಾಗಿ ಹೆಚ್ಚಿನ ಹೊರೆಯಾಗುತ್ತಿದ್ದರಿಂದ ಕಡಿಮೆ ಮಾಡಬೇಕೆಂದು ಹಲವು ಬಾರಿ ಮನವಿ ಮಾಡಿದ್ದರು. ಹೀಗಾಗಿ ಹಾಲಿ ಇರುವ ಶುಲ್ಕದಲ್ಲಿ ಶೇ.೫೦ರಷ್ಟು ರಿಯಾಯಿತಿ ಅಂದರೆ ೧೫೦ ರೂ. ಬದಲಿಗೆ ಇನ್ನು ಮುಂದೆ ೭೫ ರೂ. ಶುಲ್ಕ ವಿಧಿಸುವುದಾಗಿ ಘೋಷಣೆ ಮಾಡಿದರು.
ಇದನ್ನು ಓದಿ: ಅನಗತ್ಯ ಸಿಜೇರಿಯನ್ ಹೆರಿಗೆ : ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮ ಖಚಿತ
ಗ್ರಾಮೀಣ ಮತ್ತು ಮಲೆನಾಡು ಭಾಗಗಳಲ್ಲಿ ಶುಲ್ಕ ಕಡಿಮೆ ಮಾಡುತ್ತೇವೆ. ಇದರಿಂದ ಹೆಚ್ಚಿನ ಜನರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.
ಇದಕ್ಕೂ ಮುನ್ನ ಮಾತನಾಡಿದ ಬಲ್ಕಿಸ್ ಭಾನು ಅವರು, ಇಡೀ ರಾಜ್ಯದಲ್ಲಿ ೨,೮೦೦ ಕೇಬಲ್ ಆಪರೇಟರ್ ಇದ್ದಾರೆ. ಒಂದು ಕಂಬಕ್ಕೆ ಮೊದಲು ೪೦ ರೂ. ಶುಲ್ಕ ಇತ್ತು. ಹೊಸ ಸುತ್ತೋಲೆ ಹೊರಡಿಸಿ, ಒಂದು ಕಂಬಕ್ಕೆ ೧೫೦ ರೂ. ಜಿಎಸ್ಟಿ ಕಟ್ಟಬೇಕು ಅಂತ ಆದೇಶ ಮಾಡಿದ್ದಾರೆ. ಹಾಗೇ ಕೇಂದ್ರಕ್ಕೆ ಲೈಸನ್ಸ್ಗೆ ೫ ಸಾವಿರ ರೂ., ಸ್ಥಳೀಯಾಡಳಿತಕ್ಕೂ ಫೀಸ್ ಕಟ್ಟಬೇಕು. ಗ್ರಾಮೀಣ ಹಾಗೂ ಮಲೆನಾಡು ಸೇರಿ ಹಲವು ಭಾಗಗಳಲ್ಲಿ ಸಮಸ್ಯೆ ಹೆಚ್ಚಾಗುತ್ತದೆ. ಹಾಗಾಗಿ ಈ ಶುಲ್ಕವನ್ನು ಕಡಿಮೆ ಮಾಡಬೇಕು ಎಂದು ಒತ್ತಾಯಿಸಿದರು.
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…
ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…
ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…
ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…
ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…
ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…