ರಾಜ್ಯ

ಕೇಬಲ್‌ ಟಿವಿ ಆಪರೇಟರ್‌ ಶುಲ್ಕ ಶೇ.50 ರಷ್ಟು ಕಡಿತ : ಕೆ.ಜೆ.ಜಾರ್ಜ್‌

ಬೆಳಗಾವಿ (ಸುವರ್ಣಸೌಧ) : ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಕೇಬಲ್ ಟಿವಿ ಆಪರೇಟರ್‌ಗಳಿಗೆ ವಿಧಿಸಲಾಗುತ್ತಿರುವ ಶುಲ್ಕವನ್ನು ಶೇ.50ರಷ್ಟು ಕಡಿಮೆ ಮಾಡಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಪ್ರಕಟಿಸಿದರು.

ವಿಧಾನಪರಿಷತ್‌ನಲ್ಲಿ ಸದಸ್ಯರಾದ ಬಲ್ಕಿಸ್ ಭಾನು ಅವರ ಪ್ರಶ್ನೆಗೆ ಉತ್ತರಿಸಿದ ಅವರು, ನಗರ ಹಾಗೂ ಗ್ರಾಮೀಣ ಭಾಗಗಳಲ್ಲಿ ಕೇಬಲ್ ಟಿವಿ ಆಪರೇಟರ್‌ಗಳಿಗೆ ಇಂಧನ ಇಲಾಖೆಯ ವಿದ್ಯುತ್ ಕಂಬಗಳನ್ನು ಬಳಸಿಕೊಂಡಲ್ಲಿ ಅವರಿಗೆ ೧೫೦ ರೂ. ಶುಲ್ಕ ವಿಽಸಲಾಗುತ್ತಿತ್ತು. ಈ ಶುಲ್ಕವು ಆರ್ಥಿಕವಾಗಿ ಹೆಚ್ಚಿನ ಹೊರೆಯಾಗುತ್ತಿದ್ದರಿಂದ ಕಡಿಮೆ ಮಾಡಬೇಕೆಂದು ಹಲವು ಬಾರಿ ಮನವಿ ಮಾಡಿದ್ದರು. ಹೀಗಾಗಿ ಹಾಲಿ ಇರುವ ಶುಲ್ಕದಲ್ಲಿ ಶೇ.೫೦ರಷ್ಟು ರಿಯಾಯಿತಿ ಅಂದರೆ ೧೫೦ ರೂ. ಬದಲಿಗೆ ಇನ್ನು ಮುಂದೆ ೭೫ ರೂ. ಶುಲ್ಕ ವಿಧಿಸುವುದಾಗಿ ಘೋಷಣೆ ಮಾಡಿದರು.

ಇದನ್ನು ಓದಿ: ಅನಗತ್ಯ ಸಿಜೇರಿಯನ್‌ ಹೆರಿಗೆ : ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮ ಖಚಿತ

ಗ್ರಾಮೀಣ ಮತ್ತು ಮಲೆನಾಡು ಭಾಗಗಳಲ್ಲಿ ಶುಲ್ಕ ಕಡಿಮೆ ಮಾಡುತ್ತೇವೆ. ಇದರಿಂದ ಹೆಚ್ಚಿನ ಜನರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.

ಇದಕ್ಕೂ ಮುನ್ನ ಮಾತನಾಡಿದ ಬಲ್ಕಿಸ್ ಭಾನು ಅವರು, ಇಡೀ ರಾಜ್ಯದಲ್ಲಿ ೨,೮೦೦ ಕೇಬಲ್ ಆಪರೇಟರ್ ಇದ್ದಾರೆ. ಒಂದು ಕಂಬಕ್ಕೆ ಮೊದಲು ೪೦ ರೂ. ಶುಲ್ಕ ಇತ್ತು. ಹೊಸ ಸುತ್ತೋಲೆ ಹೊರಡಿಸಿ, ಒಂದು ಕಂಬಕ್ಕೆ ೧೫೦ ರೂ. ಜಿಎಸ್‌ಟಿ ಕಟ್ಟಬೇಕು ಅಂತ ಆದೇಶ ಮಾಡಿದ್ದಾರೆ. ಹಾಗೇ ಕೇಂದ್ರಕ್ಕೆ ಲೈಸನ್ಸ್‌ಗೆ ೫ ಸಾವಿರ ರೂ., ಸ್ಥಳೀಯಾಡಳಿತಕ್ಕೂ ಫೀಸ್ ಕಟ್ಟಬೇಕು. ಗ್ರಾಮೀಣ ಹಾಗೂ ಮಲೆನಾಡು ಸೇರಿ ಹಲವು ಭಾಗಗಳಲ್ಲಿ ಸಮಸ್ಯೆ ಹೆಚ್ಚಾಗುತ್ತದೆ. ಹಾಗಾಗಿ ಈ ಶುಲ್ಕವನ್ನು ಕಡಿಮೆ ಮಾಡಬೇಕು ಎಂದು ಒತ್ತಾಯಿಸಿದರು.

ಆಂದೋಲನ ಡೆಸ್ಕ್

Recent Posts

ಮಲೆನಾಡಿನಲ್ಲಿ ಮಳೆಯ ಅಬ್ಬರ: ಜೋಗ ಜಲಪಾತಕ್ಕೆ ಜೀವಕಳೆ

ಶಿವಮೊಗ್ಗ: ಮಲೆನಾಡಿನಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ವಿಶ್ವವಿಖ್ಯಾತ ಜೋಗ ಜಲಪಾತ ಜೀವಕಳೆ ಪಡೆದುಕೊಂಡಿದೆ. ಕಳೆದ ನಾಲ್ಕೈದು ದಿನಗಳಿಂದ ಶಿವಮೊಗ್ಗದಲ್ಲಿ ಭಾರೀ…

56 mins ago

ಕೊಡಗು ಜಿಲ್ಲೆಯ ಮಳೆ ವಿವರ

ಕೊಡಗು: ಜಿಲ್ಲೆಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ರೈತರ ಮೊಗದಲ್ಲಿ ಮಂದಹಾಸ ಮನೆಮಾಡಿದೆ. ಜಿಲ್ಲೆಯ ಮಳೆಯ ವಿವರ ಈ…

1 hour ago

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026: ಗಜಪಡೆ ಆಯ್ಕೆ ಪ್ರಕ್ರಿಯೆಗೆ ಚಾಲನೆ

ಮಡಿಕೇರಿ: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಗಜಪಡೆಗೆ ಆಯ್ಕೆ ಪ್ರಕ್ರಿಯೆಗೆ ಅಧಿಕೃತ ಚಾಲನೆ ಸಿಕ್ಕಿದೆ. ಇದರ ಭಾಗವಾಗಿ…

2 hours ago

ವಯನಾಡಿನಲ್ಲಿ ಮೇಘಸ್ಫೋಟ: ಇಬ್ಬರು ಕಾರ್ಮಿಕರು ಜೀವಂತ ಸಮಾಧಿ: 30 ಮಂದಿ ನಾಪತ್ತೆ

ತಿರುವನಂತಪುರಂ: ವಯನಾಡಿನಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು, ಮೆಪ್ಪಾಡಿಯಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತ ಉಂಟಾಗಿದೆ. ವಯನಾಡಿನ ಸುರಂಗ ನಿರ್ಮಾಣ ಪ್ರದೇಶದ ಮೀನಾಕ್ಷಿ…

3 hours ago

ಬ್ರಿಡ್ಜ್‌ ಮ್ಯಾನ್‌ ಖ್ಯಾತಿಯ ಪದ್ಮಶ್ರೀ ಡಾ.ಗಿರೀಶ್‌ ಭಾರದ್ವಾಜ್‌ ನಿಧನ

ಮಂಗಳೂರು: ತೂಗುಸೇತುವೆಗಳ ಸರದಾರ, ಸುಳ್ಯದ ವಿಶ್ವೇಶ್ವರಯ್ಯ ಎಂದೇ ಖ್ಯಾತರಾಗಿದ್ದ ಪದ್ಮಶ್ರೀ ಪುರಸ್ಕೃತ ಎಂಜಿನಿಯರ್‌ ಡಾ.ಗಿರೀಶ್‌ ಭಾರದ್ವಾಜ್‌ ಅವರು ಇಂದು ನಿಧನರಾಗಿದ್ದಾರೆ.…

3 hours ago

ಕೊಡಗು: ಕಾಫಿ ತೋಟದಲ್ಲಿ ಕಾಡಾನೆ ಮೃತದೇಹ ಪತ್ತೆ

ಕೊಡಗು: ಕಾಫಿ ತೋಟದಲ್ಲಿ ಕಾಡಾನೆ ಮೃತದೇಹ ಪತ್ತೆಯಾಗಿದೆ. ಕುಂಜಿಲ-ಕಕ್ಕಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಲಡಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಪರದಂಡ…

5 hours ago