ರಾಜ್ಯ

ಕೇಬಲ್‌ ಟಿವಿ ಆಪರೇಟರ್‌ ಶುಲ್ಕ ಶೇ.50 ರಷ್ಟು ಕಡಿತ : ಕೆ.ಜೆ.ಜಾರ್ಜ್‌

ಬೆಳಗಾವಿ (ಸುವರ್ಣಸೌಧ) : ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಕೇಬಲ್ ಟಿವಿ ಆಪರೇಟರ್‌ಗಳಿಗೆ ವಿಧಿಸಲಾಗುತ್ತಿರುವ ಶುಲ್ಕವನ್ನು ಶೇ.50ರಷ್ಟು ಕಡಿಮೆ ಮಾಡಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಪ್ರಕಟಿಸಿದರು.

ವಿಧಾನಪರಿಷತ್‌ನಲ್ಲಿ ಸದಸ್ಯರಾದ ಬಲ್ಕಿಸ್ ಭಾನು ಅವರ ಪ್ರಶ್ನೆಗೆ ಉತ್ತರಿಸಿದ ಅವರು, ನಗರ ಹಾಗೂ ಗ್ರಾಮೀಣ ಭಾಗಗಳಲ್ಲಿ ಕೇಬಲ್ ಟಿವಿ ಆಪರೇಟರ್‌ಗಳಿಗೆ ಇಂಧನ ಇಲಾಖೆಯ ವಿದ್ಯುತ್ ಕಂಬಗಳನ್ನು ಬಳಸಿಕೊಂಡಲ್ಲಿ ಅವರಿಗೆ ೧೫೦ ರೂ. ಶುಲ್ಕ ವಿಽಸಲಾಗುತ್ತಿತ್ತು. ಈ ಶುಲ್ಕವು ಆರ್ಥಿಕವಾಗಿ ಹೆಚ್ಚಿನ ಹೊರೆಯಾಗುತ್ತಿದ್ದರಿಂದ ಕಡಿಮೆ ಮಾಡಬೇಕೆಂದು ಹಲವು ಬಾರಿ ಮನವಿ ಮಾಡಿದ್ದರು. ಹೀಗಾಗಿ ಹಾಲಿ ಇರುವ ಶುಲ್ಕದಲ್ಲಿ ಶೇ.೫೦ರಷ್ಟು ರಿಯಾಯಿತಿ ಅಂದರೆ ೧೫೦ ರೂ. ಬದಲಿಗೆ ಇನ್ನು ಮುಂದೆ ೭೫ ರೂ. ಶುಲ್ಕ ವಿಧಿಸುವುದಾಗಿ ಘೋಷಣೆ ಮಾಡಿದರು.

ಇದನ್ನು ಓದಿ: ಅನಗತ್ಯ ಸಿಜೇರಿಯನ್‌ ಹೆರಿಗೆ : ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮ ಖಚಿತ

ಗ್ರಾಮೀಣ ಮತ್ತು ಮಲೆನಾಡು ಭಾಗಗಳಲ್ಲಿ ಶುಲ್ಕ ಕಡಿಮೆ ಮಾಡುತ್ತೇವೆ. ಇದರಿಂದ ಹೆಚ್ಚಿನ ಜನರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.

ಇದಕ್ಕೂ ಮುನ್ನ ಮಾತನಾಡಿದ ಬಲ್ಕಿಸ್ ಭಾನು ಅವರು, ಇಡೀ ರಾಜ್ಯದಲ್ಲಿ ೨,೮೦೦ ಕೇಬಲ್ ಆಪರೇಟರ್ ಇದ್ದಾರೆ. ಒಂದು ಕಂಬಕ್ಕೆ ಮೊದಲು ೪೦ ರೂ. ಶುಲ್ಕ ಇತ್ತು. ಹೊಸ ಸುತ್ತೋಲೆ ಹೊರಡಿಸಿ, ಒಂದು ಕಂಬಕ್ಕೆ ೧೫೦ ರೂ. ಜಿಎಸ್‌ಟಿ ಕಟ್ಟಬೇಕು ಅಂತ ಆದೇಶ ಮಾಡಿದ್ದಾರೆ. ಹಾಗೇ ಕೇಂದ್ರಕ್ಕೆ ಲೈಸನ್ಸ್‌ಗೆ ೫ ಸಾವಿರ ರೂ., ಸ್ಥಳೀಯಾಡಳಿತಕ್ಕೂ ಫೀಸ್ ಕಟ್ಟಬೇಕು. ಗ್ರಾಮೀಣ ಹಾಗೂ ಮಲೆನಾಡು ಸೇರಿ ಹಲವು ಭಾಗಗಳಲ್ಲಿ ಸಮಸ್ಯೆ ಹೆಚ್ಚಾಗುತ್ತದೆ. ಹಾಗಾಗಿ ಈ ಶುಲ್ಕವನ್ನು ಕಡಿಮೆ ಮಾಡಬೇಕು ಎಂದು ಒತ್ತಾಯಿಸಿದರು.

ಆಂದೋಲನ ಡೆಸ್ಕ್

Recent Posts

ಆಹಾರ ಸುರಕ್ಷತೆ ಬಗ್ಗೆ ಕಳವಳ: ತಪಾಸಣೆಗೆ ಸಚಿವ ಯು.ಟಿ.ಖಾದರ್‌ ಸೂಚನೆ

ಮಂಗಳೂರು: ಜನರಿಗೆ ಶುದ್ಧ ಆಹಾರ ಪೂರೈಸುವ ನಿಟ್ಟಿನಲ್ಲಿ ತಜ್ಞರ ತಂಡದ ತಪಾಸಣೆ ನಿರಂತರವಾಗಿ ನಡೆಯಲಿದ್ದು, ಎರಡನೇ ಬಾರಿ ಲೋಪಗಳು ಕಂಡು…

33 mins ago

ನಾಗೇಂದ್ರ ರಾಜೀನಾಮೆ; ಅನಿಲ್‌ಗೆ ಸಚಿವ ಸ್ಥಾನ ಸಿಗುವುದೇ?

ಮಂಜು ಕೋಟೆ ಎಚ್.ಡಿ.ಕೋಟೆ: ನಾಯಕ ಸಮುದಾಯದ ಮುಖಂಡರಾದ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಹಿನ್ನೆಲೆಯಲ್ಲಿ ತೆರವಾಗಿರುವ ಆ…

7 hours ago

ಓದುಗರ ಪತ್ರ: ಮದ್ದು ಅರೆಯಲಿ ಆಳುವವರು!

ಮದ್ದು ಅರೆಯಲಿ ಆಳುವವರು! ಬಗೆದಷ್ಟೂ ಬಯಲಾಗುತಿದೆ ಬ್ರಹ್ಮಾಂಡ ಭ್ರಷ್ಟಾಚಾರ ನೆಲದಾಳಕೂ ಬೇರೂರಿದೆ ಕೆಪಿಎಸ್‌ಸಿಯ ಕರ್ಮಕಾಂಡ! ಹಣವಂತರ ಆಡುಂಬಲವಿದು ಹರಣವಾಗುತಿದೆ ಬಡವನ…

7 hours ago

ಓದುಗರ ಪತ್ರ: ಪಾದಚಾರಿ ಮಾರ್ಗಕ್ಕೂ ಅಡ್ಡಗಾಲು

ಮೈಸೂರಿನ ಕುವೆಂಪು ನಗರ ಕಾಂಪ್ಲೆಕ್ಸ್ ಹತ್ತಿರ ಇರುವ ಒಂದನೇ ಹಂತ (ಇಡಬ್ಲ್ಯು ಎಸ್) ೩ನೇ ಕ್ರಾಸ್ ಬಳಿ ರಸ್ತೆಯ ಒಂದು…

7 hours ago

ಓದುಗರ ಪತ್ರ: ಈ ಶೌಚಾಲಯ ಪ್ರಾರಂಭಕ್ಕೆ ಮುಹೂರ್ತ ಬಂದಿಲ್ಲವೇ?

ಹೆಚ್. ಡಿ. ಕೋಟೆ ಮಿನಿ ವಿಧಾನಸೌಧ ಆಡಳಿತ ಕಚೇರಿ ಪಕ್ಕದಲ್ಲಿ ಸಾರ್ವಜನಿಕರಿಗಾಗಿ ಸಾಕಷ್ಟು ಹಣ ಖರ್ಚು ಮಾಡಿ ಶೌಚಾಲಯವನ್ನು ನಿರ್ಮಾಣ…

7 hours ago

ಓದುಗರ ಪತ್ರ: 365 ದಿನಗಳೂ ಸಾರ್ವಜನಿಕ ಗ್ರಂಥಾಲಯಗಳ ಸೇವೆ ಲಭ್ಯವಿರಲಿ

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುವ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಿಕೊಡುವ ಉದ್ದೇಶದಿಂದ ಬೆಂಗಳೂರು, ಮೈಸೂರು ಸೇರಿದಂತೆ ಹಲವು ನಗರಗಳಲ್ಲಿ ಸಾರ್ವಜನಿಕ ಗ್ರಂಥಾಲಯಗಳು…

7 hours ago