ರಾಜ್ಯ

ಸಾರಿಗೆ ನೌಕರರ ಬೇಡಿಕೆ ಈಡೇರದಿದ್ದರೆ ಕರ್ನಾಟಕ ಬಂದ್‌ಗೆ ಕರೆ: ವಾಟಾಳ್‌ ನಾಗರಾಜ್‌ ಎಚ್ಚರಿಕೆ

ರಾಮನಗರ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿರುವ ಬಗ್ಗೆ ಕನ್ನಡ ಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಪ್ರತಿಕ್ರಿಯೆ ನೀಡಿದ್ದು, ನೌಕರರ ಬೇಡಿಕೆ ಈಡೇರಿಸದಿದ್ದರೆ ಕರ್ನಾಟಕ ಬಂದ್‌ಗೆ ಕರೆ ನೀಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ರಾಮನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇದು ಸಾರಿಗೆ ನೌಕರರ ಬಹಳ ವರ್ಷದ ಬೇಡಿಕೆಯಾಗಿದೆ. ಅವರ ಬೇಡಿಕೆ ಸರಿಯಾಗಿದೆ. ಅವರ 36 ತಿಂಗಳ ಸಂಬಳ ಯಾಕೆ ಬಾಕಿ ಇಟ್ಟುಕೊಂಡಿದ್ದೀರಿ? ಎಂದು ಪ್ರಶ್ನೆ ಮಾಡಿದರು.

ಸಿದ್ದರಾಮಯ್ಯ ಹಾಗೂ ರಾಮಲಿಂಗಾರೆಡ್ಡಿ ಅವರು ಕೂಡಲೇ ನೌಕರರ ಬೇಡಿಕೆ ಈಡೇರಿಸಬೇಕು. ನೌಕರರ ಬಂದ್‌ಗೆ ನಮ್ಮ ಸಂಪೂರ್ಣ ಬೆಂಬಲವಿದೆ. ಒಂದು ವೇಳೆ ಸರ್ಕಾರವು ನೌಕರರ ಬೇಡಿಕೆ ಈಡೇರಿಸದಿದ್ದಲ್ಲಿ ನಾವು ಕೂಡ ಹೋರಾಟ ಮಾಡುತ್ತೇವೆ. ಮುಂದಿನ ದಿನಗಳಲ್ಲಿ ಕರ್ನಾಟಕ ಬಂದ್‌ಗೆ ಕರೆ ನೀಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಆಂದೋಲನ ಡೆಸ್ಕ್

Recent Posts

ಪ್ರತ್ಯೇಕ ಪ್ರಕರಣ: ಮನೆ, ದೇವಸ್ಥಾನದಲ್ಲಿ ಕಳವು

ಹನಗೋಡು: ಹಾಡಹಗಲೇ ಮನೆ ಬೀಗ ಒಡೆದು ಚಿನ್ನಾಭರಣ ಮತ್ತು ನಗದು ಕಳವು ಮಾಡಿರುವ ಘಟನೆ ನಡೆದಿದೆ. ಹನಗೋಡು ಹೋಬಳಿಯ ಕಡೇಮನುಗನಹಳ್ಳಿ…

10 hours ago

ಜಿಲ್ಲಾಧಿಕಾರಿ ಆದೇಶ ಮೀರಿ ಶಾಲೆ ಸಮಯದಲ್ಲಿ ಸಂಚಾರ: 6 ಟಿಪ್ಪರ್ ವಶ

ಗುಂಡ್ಲುಪೇಟೆ: ತಾಲ್ಲೂಕಿನಲ್ಲಿ ಟಿಪ್ಪರ್‌ಗಳ ಹಾವಳಿ ಹೆಚ್ಚಾಗಿ ಶಾಲಾ ಮಕ್ಕಳ ವಾಹಕ ಅಪಘಾತಕ್ಕೀಡಾಗಿ ಹಲವು ಮಕ್ಕಳಿಗೆ ಗಾಯಗಳಾಗಿದ್ದ ಪ್ರಕರಣದ ಬಳಿಕ ತಾಲ್ಲೂಕಿನಾದ್ಯಂತ…

10 hours ago

ಗೃಹಲಕ್ಷ್ಮೀ ಹಣದ ದುರುಪಯೋಗ ತಡೆಗೆ ಬಯೋಮೆಟ್ರಿಕ್‌

ಬೆಂಗಳೂರು: ಕರ್ನಾಟಕ ಸರ್ಕಾರದ 'ಗೃಹಲಕ್ಷ್ಮಿ' ಯೋಜನೆಯಡಿ ಫಲಾನುಭವಿಗಳಿಗೆ ನೇರವಾಗಿ ಜಮೆ ಆಗುವ ಹಣದ ದುರುಪಯೋಗವನ್ನು ತಡೆಯಲು ಮತ್ತು ಅರ್ಹ ಫಲಾನುಭವಿಗಳಿಗೆ…

12 hours ago

ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಸೂರಜ್ ಹೆಗ್ಡೆ ಅಂತ್ಯಕ್ರಿಯೆ

ಬೆಂಗಳೂರು: ಎಐಸಿಸಿ ಪ್ರಧಾನ ಕಾರ್ಯದರ್ಶಿ, ರಾಜ್ಯ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಉಪಾಧ್ಯಕ್ಷ ಸೂರಜ್ ಹೆಗ್ಡೆ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆಯನ್ನು…

13 hours ago

ವಿಶಾಖಪಟ್ಟಣ ಉಕ್ಕು ಕಾರ್ಖಾನೆಯಲ್ಲಿ ಅವಘಡ: ಸ್ವತಂತ್ರ ತನಿಖೆಗೆ ಆದೇಶಿಸಿದ ಕೇಂದ್ರ ಸಚಿವ ಎಚ್‌ಡಿಕೆ

ವಿಶಾಖಪಟ್ಟಣ: ಇಲ್ಲಿನ ವಿಶಾಖ ಉಕ್ಕು ಕಾರ್ಖಾನೆಯಲ್ಲಿ ಸಂಭವಿಸಿದ ಅವಘಡದಲ್ಲಿ ಹಲವು ಕಾರ್ಮಿಕರು ಸಾವನ್ನಪ್ಪಿದ ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿ ಬಂದ…

14 hours ago

ಮಂಡ್ಯ: ಒಂದೇ ಕುಟುಂಬದ ಮೂವರು ಸಾವು

ಮಂಡ್ಯ: ಒಂದೇ ಕುಟುಂಬದ ಮೂವರು ಅನುಮಾನಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮಂಡ್ಯದ ನೆಹರು ನಗರದಲ್ಲಿ ನಡೆದಿದೆ. ತಂದೆ ಪ್ರಭಾಕರ್‌, ತಾಯಿ ಜ್ಯೋತಿ…

14 hours ago