ಬೆಂಗಳೂರು: ಭಾಷಾ ವಿಚಾರಕ್ಕೆ ಸಂಬಂಧಿಸಿದಂತೆ ಕೆಎಸ್ಆರ್ಟಿಸಿ ಬಸ್ ನಿರ್ವಾಹಕನ ಮೇಲಿನ ಹಲ್ಲೆ ಖಂಡಿಸಿ ಮಾರ್ಚ್ 22ರಂದು ಅಖಂಡ ಕರ್ನಾಟಕ ಬಂದ್ಗೆ ಕರೆ ನೀಡಲಾಗಿದೆ.
ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್, ಮಾ.22ರ ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ಕರ್ನಾಟಕ ಬಂದ್ ಮಾಡಲು ನಿರ್ಧರಿಸಲಾಗಿದೆ. ಮಾ.3ರಂದು ಕನ್ನಡ ಒಕ್ಕೂಟದಿಂದ ರಾಜಭವನಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ತಿಳಿಸಿದರು.
ಮಾ.7ರಂದು ಬೆಳಗಾವಿ ಚಲೋ, ಮಾ.11ರಂದು ಅತ್ತಿಬೆಲೆ ಅಂಗಡಿ ಬಂದ್, ಮಾ.16ರಂದು ಹೊಸಕೋಟೆ ಟೋಲ್ ಬಂದ್ ಮಾಡಲಾಗುತ್ತದೆ ಎಂದರು.
ಮಹಾರಾಷ್ಟ್ರದಲ್ಲಿ ಕನ್ನಡಿಗರ ಮೇಲೆ ಮರಾಠಿಗರ ಪುಂಡಾಟಿಕೆ ಹೆಚ್ಚಾಗಿದ್ದು, ಈ ಎಲ್ಲವನ್ನು ಖಂಡಿಸಲು ಮಾ.22ರಂದು ಅಖಂಡ ಕರ್ನಾಟಕ ಬಂದ್ ಮಾಡಲು ಕನ್ನಡ ಪರ ಸಂಘಟನೆಗಳು ತೀರ್ಮಾನಿಸಿವೆ ಎಂದು ತಿಳಿಸಿದರು.
ದಾವಣಗೆರೆ: ನುಡಿದಂತೆ ನಡೆಯುವ ಕಾಂಗ್ರೆಸ್ ಪಕ್ಷದ ಮೇಲೆ ಜನರಿಗೆ ಭರವಸೆಯಿದ್ದು, ಈ ಬಾರಿಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ವಿಶ್ವಾಸವಿದೆ…
ಭೇರ್ಯ ಮಹೇಶ್: ಕೆ.ಆರ್.ನಗರ ತಾಲ್ಲೂಕು ವರದಿಗಾರರು ಕೆ.ಆರ್.ನಗರ : ಜಾತಿ ಬೇದವಿಲ್ಲದೆ ನೊಂದವರಿಗೆ ದ್ವನಿಯಾಗಿ, ಸಂಕಷ್ಟದಲ್ಲಿರುವವರುಗೆ ಆರ್ಥಿಕ ನೆರವು ನೀಡಿ,…
ಮಂಡ್ಯ: ಮಾರ್ಚ್.28ರಂದು ಮೇಲುಕೋಟೆ ವೈರಮುಡಿ ಜಾತ್ರಾ ಮಹೋತ್ಸವ ನಡೆಯಲಿರುವ ಹಿನ್ನೆಲೆಯಲ್ಲಿ ಕೆಎಸ್ಆರ್ಟಿಸಿ ವತಿಯಿಂದ 140 ಬಸ್ಗಳು ಕಾರ್ಯಾಚರಣೆ ನಡೆಸಲಿವೆ. ಜಾತ್ರಾ…
ಟೆಹರಾನ್: ನಾವು ನೀಡಿದ ಎಚ್ಚರಿಕೆಗೆ ತಲೆಬಾಗಿ ಅಮೇರಿಕಾ ಈಗ ಕದನ ವಿರಾಮ ಘೋಷಣೆ ಮಾಡಿದ ಎಂದು ಇರಾನ್ ತಿರುಗೇಟು ನೀಡಿದೆ.…
ಮಂಡ್ಯ: ಕೃಷಿ ಹೊಂಡದಲ್ಲಿ ಈಜಲು ಹೋಗಿ ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ನಂದೀಪುರ ಗ್ರಾಮದಲ್ಲಿ ನಡೆದಿದೆ.…
ಬೆಂಗಳೂರು: ಕಳೆದ ವರ್ಷ ಕೃಷಿ ಇಲಾಖೆಯ ಸಮಾರು 945 ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿಯನ್ನು…