ಮಂಡ್ಯ : ಕೆರಗೋಡು ಗ್ರಾಮದಲ್ಲಿ ಹನುಮಾನ್ ಧ್ವಜ ವಿವಾದ ತಾರಕಕ್ಕೇರಿದ್ದು, ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ.
ಹನುಮ ಧ್ವಜ ವಿವಾದ ಹಿನ್ನೆಲೆ ಫೆ.9 ರಂದು ಮಂಡ್ಯ ನಗರ ಬಂದ್ ಗೆ ಕರೆ ನೀಡಲಾಗಿದೆ. ಭಜರಂಗದಳ ಸಂಘಟನೆ ಫೆ.9 ರಂದು ಮಂಡ್ಯ ನಗರ ಬಂದ್ ಗೆ ಕರೆ ನೀಡಿದೆ ಎಂದು ತಿಳಿದು ಬಂದಿದೆ.
ಏನಿದು ಪ್ರಕರಣ : ಮಂಡ್ಯದ ಕೆರಗೋಡು ಗ್ರಾಮದಲ್ಲಿ 108 ಅಡಿ ಎತ್ತರದಲ್ಲಿ ಕಟ್ಟಲಾಗಿದ್ದ ಹನುಮ ಧ್ವಜವನ್ನು ಜಿಲ್ಲಾಡಳಿತ ತೆರವುಗೊಳಿಸಿದ ಬೆನ್ನಲ್ಲೇ ನಿಷೇಧಾಜ್ಞೆ ಉಲ್ಲಂಘಿಸಿ ಗ್ರಾಮಸ್ಥರು, ಹಿಂದೂಪರ ಸಂಘಟನೆ ಕಾರ್ಯಕರ್ತರ ಸಮ್ಮುಖದಲ್ಲಿ ಮಹಿಳೆಯರು ಏಣಿ ಮೂಲಕ ಧ್ವಜಸ್ತಂಭ ಹತ್ತಿ ಶ್ರೀರಾಮನ ಫ್ಲೆಕ್ಸ್ ಹಾಗೂ ಕೇಸರಿ ಧ್ವಜವನ್ನು ಕಟ್ಟಿದ್ದರು. ಅಲ್ಲದೇ ಕೇಸರಿ ಬಾವುಟಗಳನ್ನು ಹಿಡಿದು ಗ್ರಾಮಸ್ಥರು ಧ್ವಜಸ್ತಂಭದ ಬಳಿ ನೆರೆದಿದ್ದರು.
ಧ್ವಜಸ್ತಂಭದಲ್ಲಿ ಕಟ್ಟಿದ್ದ ಫ್ಲೆಕ್ಸ್ ಹಾಗೂ ದ್ವಜವನ್ನು ತೆರವುಗೊಳಿಸಲು ಮುಂದಾದ ಪೊಲಿಸರು ಹಾಗೂ ಗ್ರಾಮಸ್ಥರ ನಡುವೆ ಮಾತಿನ ಚಕಮಕಿ ನಡೆದಿದೆ.
ಈ ವೇಳೆ ಪೊಲೀಸರು ಹಾಗೂ ಯುವಕರ ನಡುವೆ ವಾಗ್ವಾದ ನಡೆದಿದ್ದು, ಯುವಕರನ್ನು ಚದುರಿಸಲು ಪೊಲೀಸರು ಮತ್ತೆ ಲಘು ಲಾಠಿ ಪ್ರಹಾರ ನಡೆಸಿದ್ದಾರೆ.
ಸ್ಥಳದಲ್ಲಿ ಉದ್ಬಿಗ್ನ ವಾತಾವರಣ ನಿರ್ಮಾಣವಾಗಿದೆ.ನಂತರ ವಿವಾದಿತ ಧ್ವಜ ಸ್ಥಂಭದ ಮೇಲೆ ಜಿಲ್ಲಾಡಳಿತ ತ್ರಿವಣ ಧ್ವಜ ಹಾರಿಸಿದೆ.
ಎಸಿ ನೇತೃತ್ವದಲ್ಲಿ ಪೊಲೀಸರು ಭಾರತದ ತ್ರಿವಣ ಧ್ವಜವನ್ನು ಹಾರಿಸಿದ್ದಾರೆ. ಈ ವೇಳೆ ಪ್ರತಿಭಟನಾಕಾರರು ಬ್ಯಾರಿಕೇಡ್ ಎತ್ತಿ ಪೊಲೀಸರ ಮೇಲೆ ಎಸೆದಿದ್ದಾರೆ. ಮತ್ತೆ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಚ್ 2026ರ ರಾಜ್ಯ ಬಜೆಟ್ನಲ್ಲಿ ಆಶಾ ಕಾರ್ಯಕರ್ತೆಯರಿಗೆ ನೀಡಲಾಗಿದ್ದ ಹಿಂದಿನ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ಚಿರತೆ ದಾಳಿಗೆ ಹಸುವೊಂದು ಬಲಿಯಾಗಿರುವ ಘಟನೆ ರಾಮಾಪುರ ಸಮೀಪದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಹುದಿನಗಳಿಂದ ನೆನಗುದಿಗೆ ಬಿದ್ದಿದ್ದ ರಾಮನಗುಡ್ಡ ಜಲಾಶಯಕ್ಕೆ ನೀರು ತುಂಬಿಸಿ, ಅಲ್ಲಿಂದ…
ತುಮಕೂರು: ಎಷ್ಟೇ ಟೀಕೆ ಟಿಪ್ಪಣಿಗಳು ಬಂದರೂ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭರವಸೆ…
ಮಂಡ್ಯ: ವಿಶೇಷ ಚೇತನರು ಸಮಾಜದ ಮುಖ್ಯ ವಾಹಿನಿಗೆ ಬರಬೇಕು ಹಾಗೂ ಸ್ವಾವಲಂಬಿ ಬದುಕನ್ನು ಕಟ್ಟಿಕೊಳ್ಳಲು ಎಲ್ಲರೂ ಸಹಕರಿಸಬೇಕು ಎಂದು ಮಂಡ್ಯ…
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಬೆಂಗಳೂರು ಜಿಎಎಫ್ ಎಕ್ಸ್-2026ರ 7ನೇ ಆವೃತ್ತಿಯ ಉದ್ಘಾಟಿಸಿ ಮಾತನಾಡಿದರು. “ಎವೊಲ್ಯೂಶನ್ ರಿಲೋಡೆಡ್” ಎಂಬ ವಿಷಯವನ್ನೊಳಗೊಂಡ…