ರಾಜ್ಯ

ಫೆ.೯ ಮಂಡ್ಯ ಬಂದ್‌ಗೆ ಕರೆ!

ಮಂಡ್ಯ : ಕೆರಗೋಡು ಗ್ರಾಮದಲ್ಲಿ ಹನುಮಾನ್ ಧ್ವಜ ವಿವಾದ ತಾರಕಕ್ಕೇರಿದ್ದು, ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ.

ಹನುಮ ಧ್ವಜ ವಿವಾದ ಹಿನ್ನೆಲೆ ಫೆ.9 ರಂದು ಮಂಡ್ಯ ನಗರ ಬಂದ್ ಗೆ ಕರೆ ನೀಡಲಾಗಿದೆ. ಭಜರಂಗದಳ ಸಂಘಟನೆ ಫೆ.9 ರಂದು ಮಂಡ್ಯ ನಗರ ಬಂದ್ ಗೆ ಕರೆ ನೀಡಿದೆ ಎಂದು ತಿಳಿದು ಬಂದಿದೆ.

ಏನಿದು ಪ್ರಕರಣ :   ಮಂಡ್ಯದ ಕೆರಗೋಡು ಗ್ರಾಮದಲ್ಲಿ 108 ಅಡಿ ಎತ್ತರದಲ್ಲಿ ಕಟ್ಟಲಾಗಿದ್ದ ಹನುಮ ಧ್ವಜವನ್ನು ಜಿಲ್ಲಾಡಳಿತ ತೆರವುಗೊಳಿಸಿದ ಬೆನ್ನಲ್ಲೇ ನಿಷೇಧಾಜ್ಞೆ ಉಲ್ಲಂಘಿಸಿ ಗ್ರಾಮಸ್ಥರು, ಹಿಂದೂಪರ ಸಂಘಟನೆ ಕಾರ್ಯಕರ್ತರ ಸಮ್ಮುಖದಲ್ಲಿ ಮಹಿಳೆಯರು ಏಣಿ ಮೂಲಕ ಧ್ವಜಸ್ತಂಭ ಹತ್ತಿ ಶ್ರೀರಾಮನ ಫ್ಲೆಕ್ಸ್ ಹಾಗೂ ಕೇಸರಿ ಧ್ವಜವನ್ನು ಕಟ್ಟಿದ್ದರು. ಅಲ್ಲದೇ ಕೇಸರಿ ಬಾವುಟಗಳನ್ನು ಹಿಡಿದು ಗ್ರಾಮಸ್ಥರು ಧ್ವಜಸ್ತಂಭದ ಬಳಿ ನೆರೆದಿದ್ದರು.

ಧ್ವಜಸ್ತಂಭದಲ್ಲಿ ಕಟ್ಟಿದ್ದ ಫ್ಲೆಕ್ಸ್ ಹಾಗೂ ದ್ವಜವನ್ನು ತೆರವುಗೊಳಿಸಲು ಮುಂದಾದ ಪೊಲಿಸರು ಹಾಗೂ ಗ್ರಾಮಸ್ಥರ ನಡುವೆ ಮಾತಿನ ಚಕಮಕಿ ನಡೆದಿದೆ.

ಈ ವೇಳೆ ಪೊಲೀಸರು ಹಾಗೂ ಯುವಕರ ನಡುವೆ ವಾಗ್ವಾದ ನಡೆದಿದ್ದು, ಯುವಕರನ್ನು ಚದುರಿಸಲು ಪೊಲೀಸರು ಮತ್ತೆ ಲಘು ಲಾಠಿ ಪ್ರಹಾರ ನಡೆಸಿದ್ದಾರೆ.

ಸ್ಥಳದಲ್ಲಿ ಉದ್ಬಿಗ್ನ ವಾತಾವರಣ ನಿರ್ಮಾಣವಾಗಿದೆ.ನಂತರ ವಿವಾದಿತ ಧ್ವಜ ಸ್ಥಂಭದ ಮೇಲೆ ಜಿಲ್ಲಾಡಳಿತ ತ್ರಿವಣ ಧ್ವಜ ಹಾರಿಸಿದೆ.

ಎಸಿ ನೇತೃತ್ವದಲ್ಲಿ ಪೊಲೀಸರು ಭಾರತದ ತ್ರಿವಣ ಧ್ವಜವನ್ನು ಹಾರಿಸಿದ್ದಾರೆ. ಈ ವೇಳೆ ಪ್ರತಿಭಟನಾಕಾರರು ಬ್ಯಾರಿಕೇಡ್ ಎತ್ತಿ ಪೊಲೀಸರ ಮೇಲೆ ಎಸೆದಿದ್ದಾರೆ. ಮತ್ತೆ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ.

andolanait

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

5 hours ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

7 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

7 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

9 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

15 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

21 hours ago