ಮಂಡ್ಯ : ʼʼನಾನು ಮಂಡ್ಯ ಸೊಸೆ, ಯಾವತ್ತೂ ಮಂಡ್ಯ ಬಿಡಲ್ಲ. ಮುಂದೊಮ್ಮೆ ರಾಜಕಾರಣ ಬಿಡಬಹುದು ಆದರೆ ಸ್ವಾಭಿಮಾನ, ಸಿದ್ಧಾಂತ ಬಿಡಲ್ಲʼʼ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಹೇಳಿದರು.
ಶುಕ್ರವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ʼʼ ಅಂಬರೀಶ್ ಕುಟುಂಬಕ್ಕೆ ಮಂಡ್ಯ ಜನರು ಸಾಕಷ್ಟು ಪ್ರೀತಿ ಕೊಟ್ಟು ಹರಸಿದ್ದಾರೆ, ಬೆಳೆಸಿದ್ದಾರೆ. ಹೀಗಾಗಿ ನಾನೇಕೆ ಮಂಡ್ಯ ಬಿಟ್ಟು ಹೋಗಬೇಕು? ಮಂಡ್ಯ ಬಿಟ್ಟು ಬೇರೆಲ್ಲೂ ಹೋಗುವುದಿಲ್ಲʼʼ ಎಂದು ಸ್ಪಷ್ಟಪಡಿಸಿದರು.
ಜೆಡಿಎಸ್- ಬಿಜೆಪಿ ಮೈತ್ರಿ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ʼʼಜೆಡಿಎಸ್ ಬಿಜೆಪಿ ಮೈತ್ರಿ ಆಗಿದೆ ಆದರೆ ಕ್ಷೇತ್ರ ಹಂಚಿಕೆ ಇನ್ನೂ ಆಗಿಲ್ಲ. ಈಗ ಎದ್ದಿರುವ ಊಹಾಪೋಹಗಳಿಗೆ ಪ್ರತಿಕ್ರಿಯೆ ಕೊಡಲ್ಲ. ಈ ವಿಚಾರದಲ್ಲಿ ನಾನು ದುಡುಕಿನ ನಿರ್ಧಾರ ಮಾಡಲ್ಲ. ಮಂಡ್ಯ ಜನ ನನ್ನ ಜೊತೆ ಇದ್ದಾರೆ, ನನಗೆ ಆ ವಿಶ್ವಾಸ ಇದೆ. ಈ ಕ್ಷೇತ್ರ ಬೇಕು, ಆ ಕ್ಷೇತ್ರ ಬೇಕು ಎಂದು ಯಾವ ಪಕ್ಷವನ್ನೂ ಕೇಳಿಲ್ಲ. ನನ್ನ ರಾಜಕೀಯ ಭವಿಷ್ಯದ ಬಗ್ಗೆ ನನಗೆ ಯೋಚನೆ ಇಲ್ಲʼʼ ಎಂದರು.
ʼʼಸಿಎಂ ಬದಲಾವಣೆ ಮಾಡುವುದು ಕಾಂಗ್ರೆಸ್ ಪಕ್ಷದ ಆಂತರಿಕ ವಿಚಾರ. ಈ ಬಗ್ಗೆ ನಾನು ಮಾತನಾಡಲ್ಲʼʼ ಎಂದು ಇದೇ ವೇಳೆ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ನವದೆಹಲಿ: ಸೆಪ್ಟೆಂಬರ್ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್ಗೆ…
ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಅನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ. ಜುಲೈನಲ್ಲಿ…
ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…
ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…
ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…