ಮಂಡ್ಯ : ʼʼನಾನು ಮಂಡ್ಯ ಸೊಸೆ, ಯಾವತ್ತೂ ಮಂಡ್ಯ ಬಿಡಲ್ಲ. ಮುಂದೊಮ್ಮೆ ರಾಜಕಾರಣ ಬಿಡಬಹುದು ಆದರೆ ಸ್ವಾಭಿಮಾನ, ಸಿದ್ಧಾಂತ ಬಿಡಲ್ಲʼʼ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಹೇಳಿದರು.
ಶುಕ್ರವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ʼʼ ಅಂಬರೀಶ್ ಕುಟುಂಬಕ್ಕೆ ಮಂಡ್ಯ ಜನರು ಸಾಕಷ್ಟು ಪ್ರೀತಿ ಕೊಟ್ಟು ಹರಸಿದ್ದಾರೆ, ಬೆಳೆಸಿದ್ದಾರೆ. ಹೀಗಾಗಿ ನಾನೇಕೆ ಮಂಡ್ಯ ಬಿಟ್ಟು ಹೋಗಬೇಕು? ಮಂಡ್ಯ ಬಿಟ್ಟು ಬೇರೆಲ್ಲೂ ಹೋಗುವುದಿಲ್ಲʼʼ ಎಂದು ಸ್ಪಷ್ಟಪಡಿಸಿದರು.
ಜೆಡಿಎಸ್- ಬಿಜೆಪಿ ಮೈತ್ರಿ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ʼʼಜೆಡಿಎಸ್ ಬಿಜೆಪಿ ಮೈತ್ರಿ ಆಗಿದೆ ಆದರೆ ಕ್ಷೇತ್ರ ಹಂಚಿಕೆ ಇನ್ನೂ ಆಗಿಲ್ಲ. ಈಗ ಎದ್ದಿರುವ ಊಹಾಪೋಹಗಳಿಗೆ ಪ್ರತಿಕ್ರಿಯೆ ಕೊಡಲ್ಲ. ಈ ವಿಚಾರದಲ್ಲಿ ನಾನು ದುಡುಕಿನ ನಿರ್ಧಾರ ಮಾಡಲ್ಲ. ಮಂಡ್ಯ ಜನ ನನ್ನ ಜೊತೆ ಇದ್ದಾರೆ, ನನಗೆ ಆ ವಿಶ್ವಾಸ ಇದೆ. ಈ ಕ್ಷೇತ್ರ ಬೇಕು, ಆ ಕ್ಷೇತ್ರ ಬೇಕು ಎಂದು ಯಾವ ಪಕ್ಷವನ್ನೂ ಕೇಳಿಲ್ಲ. ನನ್ನ ರಾಜಕೀಯ ಭವಿಷ್ಯದ ಬಗ್ಗೆ ನನಗೆ ಯೋಚನೆ ಇಲ್ಲʼʼ ಎಂದರು.
ʼʼಸಿಎಂ ಬದಲಾವಣೆ ಮಾಡುವುದು ಕಾಂಗ್ರೆಸ್ ಪಕ್ಷದ ಆಂತರಿಕ ವಿಚಾರ. ಈ ಬಗ್ಗೆ ನಾನು ಮಾತನಾಡಲ್ಲʼʼ ಎಂದು ಇದೇ ವೇಳೆ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಮೈಸೂರು: ಇಂದು ಆಷಾಢ ಮಾಸದ ಮೊದಲ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡ ಅಧಿದೇವತೆ ಚಾಮುಂಡೇಶ್ವರಿಗೆ ಮಹಾಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಇಡೀ…
ಈ ವರ್ಷ ನಾಡ ಹಬ್ಬ ದಸರಾದಲ್ಲಿ ಕಂಬಳ ಕ್ರೀಡೆಯನ್ನು ಆಯೋಜಿಸಲು ಸರ್ಕಾರ ಹಠಕ್ಕೆ ಬಿದ್ದಂತೆ ವರ್ತಿಸುತ್ತಿದೆ. ಈಗಾಗಲೇ ಸಾರ್ವಜನಿಕರು ಹಾಗೂ…
ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನೆಲೆಸಿರುವ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆಯಲು ಪ್ರತಿ ವರ್ಷ ಆಷಾಢ ಮಾಸದ ಶುಕ್ರವಾರಗಳಂದು…
ಭಾರತೀಯ ಚಿತ್ರೋದ್ಯಮದ ಉತ್ತೇಜನಕ್ಕಾಗಿ, ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯ ಮುಂದಾಗಿರುವ ಸುದ್ದಿ. ಚಿತ್ರರಂಗಕ್ಕೆ ಸಂಬಂಧಿಸಿದಂತೆ, ಚಿತ್ರಗಳನ್ನು ವರ್ಗೀಕರಿಸಿ, ಪ್ರಮಾಣಪತ್ರ…
ನವೀನ್ ಡಿಸೋಜ ತ್ವರಿತಗತಿಯಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯ; ಒಟ್ಟು ೪,೬೮,೬೫೭ ನಮೂನೆ ವಿತರಣೆ ಮೂಲಕ ಶೇ.೧೦೦ ಪ್ರಗತಿ…
ಹನೂರು: ತಾಲ್ಲೂಕಿನ ಬೈಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರೆಕಾಡುವಿನದೊಡ್ಡಿ ಮತ್ತು ಅರ್ಧನಾರೀಪುರ ಗ್ರಾಮಗಳಿಗೆ ಗುರುವಾರ ಗ್ರಾಮ ಪಂಚಾಯಿತಿ ವತಿಯಿಂದ ಟ್ಯಾಂಕರ್…