ಬೆಂಗಳೂರು: ಸಂಚಾರಿ ನಿಯಮ ಪಾಲಿಸದೆ ವಾಹನ ಓಡಿಸುವವರ, ಕುಡಿದು ವಾಹನ ಚಲಾಯಿಸುವರ ಚಾಲನಾ ಪರವಾನಗಿಯನ್ನು ರದ್ದು ಮಾಡಿ ಎಂದು ಸಿಎಂ ಸಿದ್ದರಾಮಯ್ಯ ಸಾರಿಗೆ ಸಚಿವ ರಾಮಲಿಂಗರೆಡ್ಡಿ ಅವರಿಗೆ ಸೂಚನೆ ನೀಡಿದರು.
ಆಧುನಿಕ ಜೀವ ರಕ್ಷಕ ಸವಲತ್ತುಗಳಿರುವ 65 ಆ್ಯಂಬುಲೆನ್ಸ್ ಗಳನ್ನು ಲೋಕಾರ್ಪಣೆ ಮಾಡಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸಂಚಾರಿ ನಿಯಮಗಳನ್ನು ಶಿಸ್ತಿನಿಂದ ಪಾಲಿಸಿದರೆ ಬಹುತೇಕ ಅಪಘಾತಗಳು ಸಂಭವಿಸುವುದೇ ಇಲ್ಲ. ಕುಡಿದು ವಾಹನ ಓಡಿಸುವುದನ್ನು ನೂರಕ್ಕೆ ನೂರರಷ್ಟು ನಿಲ್ಲಿಸಿ. ನಿಮ್ಮ ಕುಟುಂಬಗಳನ್ನು ಅನಾಥ ಮಾಡಬೇಡಿ ಎಂದು ಯುವ ಸಮೂಹಕ್ಕೆ ಸಿಎಂ ಕರೆ ನೀಡಿದರು.
ಮೊಬೈಲ್ ಮಾತಾಡಿಕೊಂಡು ವಾಹನ ಓಡಿಸಿದರೆ ಅಪಘಾತಗಳಾಗದೆ ಇರುತ್ತದಾ ಎಂದು ಪ್ರಶ್ನಿಸಿದ ಸಿಎಂ, ನಿಮ್ಮ ಜೀವಕ್ಕೆ ನೀವೇ ಜವಾಬ್ದಾರಿ. ನಿಮ್ಮ ಕುಟುಂಬಕ್ಕೆ ನೀವೇ ಜವಾಬ್ದಾರಿ. ಆದ್ದರಿಂದ ಸಂಚಾರಿ ನಿಯಮಗಳನ್ನು ಕಟ್ಟು ನಿಟ್ಟಾಗಿ ಪಾಲಿಸಿ ಎಂದರು.
ಕೊಳ್ಳೇಗಾಲ: ರಾತ್ರಿ ಕಂಠಪೂರ್ತಿ ಕುಡಿದ ಇಬ್ಬರ ನಡುವೆ ಹಳೇ ವೈಷಮ್ಯದಿಂದ ಕಲಹ ನಡೆದು ಓರ್ವನನ್ನು ಕೊಲೆ ಮಾಡಿ ಪೊಲೀಸರಿಗೆ ಶರಣಾಗಿರುವ…
ಬೆಂಗಳೂರು: ರಾಜ್ಯದಲ್ಲಿ ಬಿಸಿಲಿನ ಆರ್ಭಟ ಜೋರಾಗಿರುವ ಬೆನ್ನಲ್ಲೇ ಮುಂದಿನ ಒಂದು ವಾರದವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಬೆಂಗಳೂರು: ಕಳೆದ ಹಲವು ದಿನಗಳಿಂದ ರಾಜ್ಯಾದ್ಯಂತ ತಾಪಮಾನ ಹೆಚ್ಚಾಗಿದ್ದು, ಜನರು ಹೈರಾಣಾಗಿದ್ದಾರೆ. ಸುಡು ಬಿಸಿಲು ಹಾಗೂ ಸೆಖೆಯಿಂದಾಗಿ ಕರುನಾಡ ಜನರು…
ಮುತ್ತತ್ತಿಯಲ್ಲಿ ನೀರಿಗಿಳಿದ ಯುವಕ ಸಾವು ಹಲಗೂರು: ಇಲ್ಲಿಗೆ ಸಮೀಪದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ತೀವ್ರ ಸೆಳೆತಕ್ಕೆ…
ರಾಯ್ಪುರ: ಛತ್ತೀಸ್ಗಢದಲ್ಲಿ ಖಾಸಗಿ ವಿಮಾನವೊಂದು ಪತನವಾಗಿದ್ದು, ಪೈಲಟ್ ಹಾಗೂ ಸಹ ಪೈಲಟರ್ ಇಬ್ಬರೂ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಛತ್ತೀಸ್ಗಢದ…
ಚೆನ್ನೈ: ಇರಾನ್-ಇಸ್ರೇಲ್ ಯುದ್ಧ ಶುರುವಾಗುವ ಮೊದಲು ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದನ್ನು ಪಾಲಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ…