ಬೆಂಗಳೂರು: ಸಂಚಾರಿ ನಿಯಮ ಪಾಲಿಸದೆ ವಾಹನ ಓಡಿಸುವವರ, ಕುಡಿದು ವಾಹನ ಚಲಾಯಿಸುವರ ಚಾಲನಾ ಪರವಾನಗಿಯನ್ನು ರದ್ದು ಮಾಡಿ ಎಂದು ಸಿಎಂ ಸಿದ್ದರಾಮಯ್ಯ ಸಾರಿಗೆ ಸಚಿವ ರಾಮಲಿಂಗರೆಡ್ಡಿ ಅವರಿಗೆ ಸೂಚನೆ ನೀಡಿದರು.
ಆಧುನಿಕ ಜೀವ ರಕ್ಷಕ ಸವಲತ್ತುಗಳಿರುವ 65 ಆ್ಯಂಬುಲೆನ್ಸ್ ಗಳನ್ನು ಲೋಕಾರ್ಪಣೆ ಮಾಡಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸಂಚಾರಿ ನಿಯಮಗಳನ್ನು ಶಿಸ್ತಿನಿಂದ ಪಾಲಿಸಿದರೆ ಬಹುತೇಕ ಅಪಘಾತಗಳು ಸಂಭವಿಸುವುದೇ ಇಲ್ಲ. ಕುಡಿದು ವಾಹನ ಓಡಿಸುವುದನ್ನು ನೂರಕ್ಕೆ ನೂರರಷ್ಟು ನಿಲ್ಲಿಸಿ. ನಿಮ್ಮ ಕುಟುಂಬಗಳನ್ನು ಅನಾಥ ಮಾಡಬೇಡಿ ಎಂದು ಯುವ ಸಮೂಹಕ್ಕೆ ಸಿಎಂ ಕರೆ ನೀಡಿದರು.
ಮೊಬೈಲ್ ಮಾತಾಡಿಕೊಂಡು ವಾಹನ ಓಡಿಸಿದರೆ ಅಪಘಾತಗಳಾಗದೆ ಇರುತ್ತದಾ ಎಂದು ಪ್ರಶ್ನಿಸಿದ ಸಿಎಂ, ನಿಮ್ಮ ಜೀವಕ್ಕೆ ನೀವೇ ಜವಾಬ್ದಾರಿ. ನಿಮ್ಮ ಕುಟುಂಬಕ್ಕೆ ನೀವೇ ಜವಾಬ್ದಾರಿ. ಆದ್ದರಿಂದ ಸಂಚಾರಿ ನಿಯಮಗಳನ್ನು ಕಟ್ಟು ನಿಟ್ಟಾಗಿ ಪಾಲಿಸಿ ಎಂದರು.
೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್ನ…
ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…
ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…
ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…