ಬೆಂಗಳೂರು: ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ 20 ಲಕ್ಷ ನಕಲಿ ಕಾರ್ಡ್ಗಳನ್ನು ರದ್ದುಪಡಿಸಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ.
ವಿಧಾನಸಭೆಯ ಪ್ರಶ್ನೋತ್ತರದ ಅವ„ಯಲ್ಲಿ ಹುಬ್ಬಳ್ಳಿ-ಧಾರವಾಡ ಕೇಂದ್ರೀಯ ಕ್ಷೇತ್ರದ ಶಾಸಕ ಮಹೇಶ್ ತೆಂಗಿನಕಾಯಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಮಂಡಳಿಯಲ್ಲಿ 56 ಲಕ್ಷ ಮಂದಿ ನೋಂದಣಿಯಾಗಿದ್ದರು. ಮನೆಮನೆಗೆ ತೆರಳಿ ತಪಾಸಣೆ ಮಾಡಿದಾಗ 26 ಲಕ್ಷ ನಕಲಿ ಕಾರ್ಡ್ಗಳನ್ನು ರದ್ದುಪಡಿಸಲಾಗಿದೆ. ಅದರ ಬಳಿಕ 30 ಲಕ್ಷ ಕಾರ್ಡ್ಗಳು ಉಳಿದುಕೊಂಡಿವೆ. ಕಾರ್ಮಿಕರಿಗೆ ಸೌಲಭ್ಯಗಳನ್ನು ನೀಡಲು ನಮ್ಮ ಸರ್ಕಾರದಲ್ಲಿ ಹಣಕಾಸಿನ ಕೊರತೆ ಇಲ್ಲ ಎಂದು ಸ್ಪಷ್ಟಪಡಿಸಿದರು.
ಶಾಸಕ ಅರಗ ಜ್ಞಾನೇಂದ್ರ, ಕಾರ್ಮಿಕ ಇಲಾಖೆಯಲ್ಲಿ ಸಿಬ್ಬಂದಿ ಹಾಗೂ ಅ„ಕಾರಿಗಳ ಕೊರತೆಯಿದೆ. ಮಲೆನಾಡು ಭಾಗದಂತಹ ಪ್ರದೇಶಗಳಲ್ಲಿ ಮನೆಮನೆಗೆ ತೆರಳಿ ತಪಾಸಣೆ ನಡೆಸಲು ಕಷ್ಟದ ವಾತಾವರಣವಿದೆ ಎಂದರು.
ಇದಕ್ಕೆ ಸ್ಪಷ್ಟನೆ ನೀಡಿದ ಸಚಿವರು, ಅಂಬೇಡ್ಕರ್ ಸೇವಾ ಕೇಂದ್ರಗಳೆಂದು ತೆರೆಯಲಾಗಿದೆ. 43 ವಾಹನಗಳಲ್ಲಿ ಅ„ಕಾರಿಗಳು, ಸಿಬ್ಬಂದಿಗಳು ಮನೆಮನೆಗೆ ತೆರಳಿ ಅರ್ಜಿ ಸಲ್ಲಿಸಿದ ಲಾನುಭವಿಗಳ ನೈಜತೆಯನ್ನು ಪರಿಶೀಲನೆ ಮಾಡಲಿದ್ದಾರೆ. ಅರ್ಹರ ಸೌಲಭ್ಯಗಳು ವಂಚನೆಯಾಗಬಾರದು. ಹಾಗೆಯೇ ಅನರ್ಹರಿಗೆ ಸೌಲಭ್ಯ ಸಿಗಬಾರದು ಎಂಬುದು ನಮ್ಮ ಸರ್ಕಾರದ ಉದ್ದೇಶ ಎಂದು ತಿಳಿಸಿದರು.
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…