Some Paracetamol Medicines Have Failed Quality Standards: Minister Dinesh Gundu Rao
ಬೆಳಗಾವಿ : ಮೊಟ್ಟೆಯಲ್ಲಿ ಕ್ಯಾನ್ಸರ್ಕಾರಕ ಅಂಶವಿದೆ ಎಂಬ ವಿಚಾರದ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿ ವರದಿ ನೀಡಲು ಇಲಾಖೆಗೆ ಸೂಚಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ಗುಂಡೂರಾವ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊಟ್ಟೆಯ ಬಗ್ಗೆ ಆತಂಕ ಪಡುವುದು ಬೇಡ. ಕಳೆದ ಸೆಪ್ಟೆಂಬರ್, ಅಕ್ಟೋಬರ್ನಲ್ಲಿ 125 ಮೊಟ್ಟೆಗಳ ಮಾದರಿಯನ್ನು ಪರೀಕ್ಷೆ ಮಾಡಲಾಗಿದೆ. 123 ಮೊಟ್ಟೆಗಳ ಮಾದರಿ ಗುಣಮಟ್ಟ ಸರಿಯಿದೆ. ಒಂದೆರೆಡು ಮೊಟ್ಟೆಯ ಸ್ಯಾಂಪಲ್ ಮಾತ್ರ ಸರಿ ಇಲ್ಲ ಎಂದು ವರದಿ ಬಂದಿತ್ತು. ಇದರಿಂದ ಆತಂಕಕ್ಕೊಳಗಾಗುವುದು ಬೇಡ ಎಂದರು.
ಇದನ್ನು ಓದಿ: ಹವಾಮಾನ ವೈಪರೀತ್ಯ : ವಿಮಾನದಲ್ಲೇ ಸಿಲುಕಿದ್ದ ಕರ್ನಾಟಕದ 21 ಶಾಸಕರು ಮತ್ತು 7 ಸಚಿವರು
ಸಮಾಧಾನದಿಂದ ಇರೋಣ. ಮೊಟ್ಟೆ ತಗೆದುಕೊಳ್ಳುವುದು ಬೇಡ ಎಂಬ ವಿಚಾರ ಸದ್ಯಕ್ಕೆ ಬೇಡ. ಎಗ್ಗಾಸ್ ಕಂಪನಿಯ ಮೊಟ್ಟೆಯಲ್ಲಿ ಉಪಯೋಗ ಮಾಡಬಾರದಂತಹ ಆ್ಯಂಟಿಬಯೋಟಿಕ್ ಅಂಶದ ಮಾಹಿತಿ ಬಂದಿತ್ತು. ಅದರ ಬಗ್ಗೆ ಸ್ಪಷ್ಟವಾದ ವಿಚಾರ ತಿಳಿಯಲು ಆರೋಗ್ಯ ಇಲಾಖೆಗೆ ಸೂಚಿಸಲಾಗಿದೆ. ಗೊಂದಲವಿದ್ದರೆ ತಿಳಿದುಕೊಳ್ಳಬೇಕು. ಈಗಾಗಲೇ ಆ ಕಂಪನಿಯ ಮೊಟ್ಟೆ ಸ್ಯಾಂಪಲ್ಗಳನ್ನು ತೆಗೆದುಕೊಂಡಿದ್ದಾರೆ. ಪರೀಕ್ಷಿಸಿದ ನಂತರ ನಿರ್ದಿಷ್ಟ ವಿಚಾರ ತಿಳಿದುಬರಲಿದೆ. ಅಲ್ಲಿಯವರೆಗೂ ಸಮಾಧಾನದಿಂದ ಇರೋಣ. ಏಕೆಂದರೆ ಮೊಟ್ಟೆ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು ಎಂದರು.
ಅಧಿವೇಶನ ಒಂದು ವಾರದ ಕಾಲ ವಿಸ್ತರಿಸಲು ಮೊಟಕುಗೊಂಡಿದೆ ಎಂದು ಹೇಳಿದ್ದಾರೆ. ಪ್ರಸಕ್ತ ಅಧಿವೇಶನದಲ್ಲಿ ರಾಜ್ಯದ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆಯಾಗಬೇಕಿದೆ. ಬಹಳಷ್ಟು ವಿಚಾರಗಳು ಇನ್ನೂ ಬಾಕಿ ಇದ್ದು, ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕಾಗಿರುವ ಹಿನ್ನೆಲೆಯಲ್ಲಿ ಈ ಅಧಿವೇಶನವನ್ನು ಇನ್ನೂ ಒಂದು ವಾರಗಳ ಕಾಲ ವಿಸ್ತರಿಸಬೇಕೆಂದು ಸಭಾಧ್ಯಕ್ಷರನ್ನು ಅವರು ಒತ್ತಾಯಿಸಿದ್ದಾರೆ.
ರಾಜ್ಯ ಸರ್ಕಾರ ಕೆಲ ತಿಂಗಳುಗಳ ಹಿಂದೆ ಒಂದನೇ ತರಗತಿ ಪ್ರವೇಶಕ್ಕೆ ಆರು ವರ್ಷಗಳ ವಯೋಮಿತಿ ನಿಗದಿ ಮಾಡಿದ ಬಗ್ಗೆ ಕೈಗೊಂಡ…
ಹೆಚ್.ಡಿ.ಕೋಟೆ ತಾಲ್ಲೂಕಿನ ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ ಹಂಪಾಪುರ ಮತ್ತು ಜಿನ್ನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಮುಚ್ಚಲು ಹೊರಟಿರುವ ಸರ್ಕಾರದ…
ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧ ೨೭ ನೇದಿನಕ್ಕೆ ಕಾಲಿಟ್ಟಿದೆ, ಸದ್ಯದ ಪರಿಸ್ಥಿತಿಯನ್ನು ಗಮನಿಸಿದರೆ ಅಮೆರಿಕ ತನ್ನ…
ಬಿಆರ್ಟಿ ಅರಣ್ಯವು ಕರ್ನಾಟಕದ ಪ್ರಮುಖ ಜೀವವೈವಿಧ್ಯ ಪ್ರದೇಶಗಳಲ್ಲೊಂದು ಬಿಳಿಗಿರಿ ರಂಗನ ಬೆಟ್ಟ (ಬಿಆರ್ಟಿ) ಅರಣ್ಯವು ಕರ್ನಾಟಕದ ಪ್ರಮುಖ ಜೀವವೈವಿಧ್ಯ ಪ್ರದೇಶಗಳಲ್ಲಿ…
ಮಹೇಶ ಎಲಕುಂಚವಾರ್ ಅವರ ಪ್ರಸಿದ್ಧ ಮರಾಠಿ ನಾಟಕವನ್ನು ರಂಗಕರ್ಮಿ ಪ್ರಸಾದ್ ಕುಂದೂರು ಕನ್ನಡಕ್ಕೆ ಅನುವಾದಿಸಿದ್ದಾರೆ ಮರಾಠಿಯ ಮಹೇಶ ಎಲಕುಂಚವಾರ ಅವರ…
‘ಆಂದೋಲನ’ ತಂಡದಿಂದ ರಿಯಾಲಿಟಿ ಚೆಕ್ ಮೈಸೂರು: ಸಾಂಸ್ಕ ತಿಕ ನಗರಿ ಮೈಸೂರಿನಲ್ಲಿ ಬೇಸಿಗೆಯ ತಾಪ ಏರುತ್ತಿದ್ದಂತೆ, ದಾಹ ತಣಿಸಿಕೊಳ್ಳಲು ಜನರು…