Some Paracetamol Medicines Have Failed Quality Standards: Minister Dinesh Gundu Rao
ಬೆಳಗಾವಿ : ಮೊಟ್ಟೆಯಲ್ಲಿ ಕ್ಯಾನ್ಸರ್ಕಾರಕ ಅಂಶವಿದೆ ಎಂಬ ವಿಚಾರದ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿ ವರದಿ ನೀಡಲು ಇಲಾಖೆಗೆ ಸೂಚಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ಗುಂಡೂರಾವ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊಟ್ಟೆಯ ಬಗ್ಗೆ ಆತಂಕ ಪಡುವುದು ಬೇಡ. ಕಳೆದ ಸೆಪ್ಟೆಂಬರ್, ಅಕ್ಟೋಬರ್ನಲ್ಲಿ 125 ಮೊಟ್ಟೆಗಳ ಮಾದರಿಯನ್ನು ಪರೀಕ್ಷೆ ಮಾಡಲಾಗಿದೆ. 123 ಮೊಟ್ಟೆಗಳ ಮಾದರಿ ಗುಣಮಟ್ಟ ಸರಿಯಿದೆ. ಒಂದೆರೆಡು ಮೊಟ್ಟೆಯ ಸ್ಯಾಂಪಲ್ ಮಾತ್ರ ಸರಿ ಇಲ್ಲ ಎಂದು ವರದಿ ಬಂದಿತ್ತು. ಇದರಿಂದ ಆತಂಕಕ್ಕೊಳಗಾಗುವುದು ಬೇಡ ಎಂದರು.
ಇದನ್ನು ಓದಿ: ಹವಾಮಾನ ವೈಪರೀತ್ಯ : ವಿಮಾನದಲ್ಲೇ ಸಿಲುಕಿದ್ದ ಕರ್ನಾಟಕದ 21 ಶಾಸಕರು ಮತ್ತು 7 ಸಚಿವರು
ಸಮಾಧಾನದಿಂದ ಇರೋಣ. ಮೊಟ್ಟೆ ತಗೆದುಕೊಳ್ಳುವುದು ಬೇಡ ಎಂಬ ವಿಚಾರ ಸದ್ಯಕ್ಕೆ ಬೇಡ. ಎಗ್ಗಾಸ್ ಕಂಪನಿಯ ಮೊಟ್ಟೆಯಲ್ಲಿ ಉಪಯೋಗ ಮಾಡಬಾರದಂತಹ ಆ್ಯಂಟಿಬಯೋಟಿಕ್ ಅಂಶದ ಮಾಹಿತಿ ಬಂದಿತ್ತು. ಅದರ ಬಗ್ಗೆ ಸ್ಪಷ್ಟವಾದ ವಿಚಾರ ತಿಳಿಯಲು ಆರೋಗ್ಯ ಇಲಾಖೆಗೆ ಸೂಚಿಸಲಾಗಿದೆ. ಗೊಂದಲವಿದ್ದರೆ ತಿಳಿದುಕೊಳ್ಳಬೇಕು. ಈಗಾಗಲೇ ಆ ಕಂಪನಿಯ ಮೊಟ್ಟೆ ಸ್ಯಾಂಪಲ್ಗಳನ್ನು ತೆಗೆದುಕೊಂಡಿದ್ದಾರೆ. ಪರೀಕ್ಷಿಸಿದ ನಂತರ ನಿರ್ದಿಷ್ಟ ವಿಚಾರ ತಿಳಿದುಬರಲಿದೆ. ಅಲ್ಲಿಯವರೆಗೂ ಸಮಾಧಾನದಿಂದ ಇರೋಣ. ಏಕೆಂದರೆ ಮೊಟ್ಟೆ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು ಎಂದರು.
ಅಧಿವೇಶನ ಒಂದು ವಾರದ ಕಾಲ ವಿಸ್ತರಿಸಲು ಮೊಟಕುಗೊಂಡಿದೆ ಎಂದು ಹೇಳಿದ್ದಾರೆ. ಪ್ರಸಕ್ತ ಅಧಿವೇಶನದಲ್ಲಿ ರಾಜ್ಯದ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆಯಾಗಬೇಕಿದೆ. ಬಹಳಷ್ಟು ವಿಚಾರಗಳು ಇನ್ನೂ ಬಾಕಿ ಇದ್ದು, ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕಾಗಿರುವ ಹಿನ್ನೆಲೆಯಲ್ಲಿ ಈ ಅಧಿವೇಶನವನ್ನು ಇನ್ನೂ ಒಂದು ವಾರಗಳ ಕಾಲ ವಿಸ್ತರಿಸಬೇಕೆಂದು ಸಭಾಧ್ಯಕ್ಷರನ್ನು ಅವರು ಒತ್ತಾಯಿಸಿದ್ದಾರೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಹಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಮಳೆಯ…
ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿ ಸಫಾರಿ ಕೇಂದ್ರದ ವಾಹನಗಳಿಗೆ ಜಿಪಿಎಸ್ ಹಾಗೂ ಡ್ಯಾಶ್ ಕ್ಯಾಮ್ಗಳನ್ನು ಅಳವಡಿಸಲಾಗಿದೆ ಎಂದು…
ಮೈಸೂರು: ಮೈಸೂರು ಜಿಲ್ಲೆಯಲ್ಲಿ ಸಚಿವ ಯತೀಂದ್ರ ಅವರ ಏಕಚಕ್ರಾಧಿಪತ್ಯ ನಡೆಯುತ್ತಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಚ್. ವಿಶ್ವನಾಥ್…
ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮವಾಗಿ ಮೊಬೈಲ್ ಫೋನ್ ಬಳಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ…
ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದೆ. ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ಸ್ ಕಾವೇರಿ…
ಮೈಸೂರಿನ ವಿ.ವಿ.ಮೊಹಲ್ಲದ ೨ನೇ ಮುಖ್ಯರಸ್ತೆಯಲ್ಲಿರುವ (ಕ್ಲಬ್ ಹಿಂಭಾಗ) ವಾರ್ಡ್ ಸಂಖ್ಯೆ ೧೯ರ ವ್ಯಾಪ್ತಿಗೆ ಒಳಪಡುವ ಕನ್ಸರ್ವೆನ್ಸಿಯಲ್ಲಿ ಗಿಡ ಗಂಟಿಗಳು ಬೃಹದಾಕಾರವಾಗಿ…