ಹುಬ್ಬಳ್ಳಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಶಾಮೀಲಾಗಿರುವ ನಟ ದರ್ಶನ ಅವರನ್ನು ಕೃಷಿ ರಾಯಭಾರಿಯನ್ನಾಗಿ ಮುಂದುವರೆಸಲು ಸಾಧ್ಯವಿಲ್ಲ ಎಂದು ಶುಕ್ರವಾರ (ಜೂನ್.14) ಸಚಿವ ಎಂ.ಬಿ ಪಾಟೀಲ್ ತಿಳಿಸಿದರು.
ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದರ್ಶನ್ ಅವರು ಕೊಲೆ ಪ್ರಕರಣದಡಿ ತನಿಖೆ ಎದುರಿಸುತ್ತಿದ್ದಾರೆ ಅಂತವರನ್ನು ಕೃಷಿ ರಾಯಭಾರಿಯನ್ನಾಗಿ ಮುಂದುವರೆಸಲು ಸಾಧ್ಯವಿಲ್ಲ. ಜೈಲಿನಲ್ಲಿ ದರ್ಶನ್ ಅವರಿಗೆ ಯಾವುದೇ ವಿಐಪಿ ಸೌಲಭ್ಯಗಳನ್ನು ನಾವು ನೀಡಿಲ್ಲ. ಅವರ ಮೇಲಿನ ಆರೋಪ ಸಾಭೀತಾದರೆ ಅವರಿಗೆ ಶಿಕ್ಷೆಯಾಗುತ್ತದೆ ಎಂದು ಸಚಿವ ಎಂಬಿ ಪಾಟೀಲ್ ಸ್ಪಷ್ಟಪಡಿಸಿದರು.
ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಪೋಕ್ಸೋ ಪ್ರಕರಣದಡಿ ಜಾಮೀನು ರಹಿತ ವಾರೆಂಟ್ ಹೊರಡಿಸಿರುವ ನ್ಯಾಯಾಲಯದ ವಿಚಾರದಲ್ಲಿ ಕಾಂಗ್ರೆಸ್ ಹಸ್ತಕ್ಷೇಪ ಮಾಡಿದೆ ಎಂದು ಬಿಜೆಪಿ ಆರೋಪಿಸುತ್ತಿದೆ ಎಂದು ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಇದೊಂದು ಅತ್ಯಂತ ಗಂಭೀರವಾದ ಪ್ರಕರಣವಾಗಿದೆ. ಕಾಯ್ದೆಯ ಅನ್ವಯ ನ್ಯಾಯಾಲಯ ತೀರ್ಪು ನೀಡಲಿದ್ದು, ತಪ್ಪು ಯಾರೇ ಮಾಡಿದ್ದರು ಅದನ್ನು ಕೋರ್ಟ್ ನಿರ್ಧರಿಸುತ್ತದೆ. ಈ ವಿಚಾರದಲ್ಲಿ ಸರ್ಕಾರ ಯಾವುದೇ ಹಸ್ತಕ್ಷೇಪ ಮಾಡುವ ಅಥವಾ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದರು.
ಇನ್ನು ಸಿಎಂ ಖುರ್ಚಿ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಆಗುವ ಆಸೆ ಎಲ್ಲರಿಗೂ ಇರುತ್ತದೆ ಆದರೆ ಅದನ್ನು ಅಂತಿಮವಾಗಿ ಪಕ್ಷದ ಹೈ ಕಮಾಂಡ್ ನಿರ್ಧರಿಸಲಿದೆ ಸದ್ಯಕ್ಕೆ ಸಿಎಂ ಖುರ್ಚಿ ಖಾಲಿ ಇಲ್ಲ. ಹಾಗಾಗಿ ಸಿಎಂ ಬದಲಾವಣೆ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಜಾಣ್ಮೆಯ ಉತ್ತರ ನೀಡಿದರು.
ಬೆಂಗಳೂರು: ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ಅವರು ನೀಡಿರುವ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ…
ಹಾಸನ: ಕಾಡಾನೆ ದಾಳಿಗೆ ಮತ್ತೋರ್ವ ರೈತ ಬಲಿಯಾಗಿರುವ ಧಾರುಣ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಕಣಗುಪ್ಪೆ…
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಏಪ್ರಿಲ್.15ರವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಮುಂಬೈ: ಭಾರತೀಯ ಚಿತ್ರರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ವಿಧಿವಶರಾಗಿದ್ದಾರೆ. ಹಿರಿಯ ಗಾಯಕಿ ಅಗಲಿಕೆಗೆ ಪ್ರಧಾನಿ ನರೇಂದ್ರ ಮೋದಿ ಕಂಬನಿ…
ಬೈರುತ್: ಅಮೇರಿಕಾ-ಇರಾನ್ ಮಾತುಕತೆ ವಿಫಲವಾದ ಕೆಲವೇ ಗಂಟೆಗಳ ನಂತರ ಹೆಬ್ಜುಲ್ಲಾ ಭದ್ರಕೋಟೆಯನ್ನು ಗುರಿಯಾಗಿಸಿಕೊಂಡು ಇಸ್ರೇಲ್ ನಡೆಸಿದ ದಾಳಿಯಲ್ಲಿ 11 ಮಂದಿ…
ಬೆಂಗಳೂರು : ಶಕ್ತಿ ಯೋಜನೆಯ ಮಹಿಳಾ ಟಿಕೆಟ್ಗಳನ್ನು ಪುರುಷ ಪ್ರಯಾಣಿಕರಿಗೂ ನೀಡಿ ಹಣ ಸಂಗ್ರಹಿಸಿ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ…