ರಾಜ್ಯ

ನಿಮ್ಮ ಆಶೀರ್ವಾದ ಇರುವವರೆಗೂ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ಸಾಧ್ಯವಿಲ್ಲ: ಬಿಜೆಪಿ ಗೆ ಎಚ್ಚರಿಕೆ ಕೊಟ್ಟ ಸಿಎಂ

ಗೋಕಾಕ: ನಿಮ್ಮ ಆಶೀರ್ವಾದ ಇರುವವರೆಗೂ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿ ಗೆ ಸ್ಪಷ್ಟ ಎಚ್ಚರಿಕೆ ಕೊಟ್ಟರು.

ಕೌಜಲಗಿಯಲ್ಲಿ ಆಯೋಜಿಸಿದ್ದ ಅದ್ದೂರಿ ಕಾರ್ಯಕ್ರಮದಲ್ಲಿ ಸಂಗೊಳ್ಳಿ ರಾಯಣ್ಣ ಮತ್ತು ರಾಯಣ್ಣ ಕೋಟೆಯನ್ನು ಉದ್ಘಾಟಿಸಿ ಮಾತನಾಡಿದರು.

ರಾಣಿ ಚನ್ನಮ್ಮನ ಬಲಗೈ ಬಂಟ ರಾಯಣ್ಣ ಅತ್ಯಂತ ಪರಾಕ್ರಮಿ. ಬ್ರಿಟೀಷರು ರಾಣಿ ಚನ್ನಮ್ಮನ ಆಸ್ಥಾನದ ಮೇಲೆ ದಾಳಿ ನಡೆಸಿದಾಗ ರಾಯಣ್ಣನ ಹೋರಾಟದಿಂದ, ಶೌರ್ಯದಿಂದ ಗೆಲುವು ಸಾಧ್ಯವಾಯಿತು. ಎರಡನೇ ಯುದ್ಧದಲ್ಲಿ ಸೋಲಾದರೂ ಬ್ರಿಟೀಷರ ಕೈಗೆ ಸಿಗದೆ ತಪ್ಪಿಸಿಕೊಂಡ ರಾಯಣ್ಣ ಗೆರಿಲ್ಲಾ ಸೈನ್ಯ ಕಟ್ಟಿ, ಗೆರಿಲ್ಲಾ ಯುದ್ಧ ಮಾಡಿ ಬ್ರಿಟೀಷರಿಗೆ ಚಳ್ಳೆಹಣ್ಣು ತಿನ್ನಿಸಿದರು. ಇದರಿಂದ ಬ್ರಿಟೀಷರು ನೆಮ್ಮದಿ ಕೆಡಿಸಿಕೊಂಡಿದ್ದರು. ಆದರೆ ನಮ್ಮವರೇ ರಾಯಣ್ಣನನ್ನು ಬ್ರಿಟೀಷರಿಗೆ ಹಿಡಿದುಕೊಟ್ಟರು.

ನಮ್ಮವರ ದೇಶದ್ರೋಹದಿಂದ ರಾಯಣ್ಣ ಬ್ರಿಟೀಷರ ವಶವಾದರು. ರಾಯಣ್ಣ ಈಜಾಡುವಾಗ ಅವರ ಕೈಯಲ್ಲಿ ಆಯುಧ ಇರುವುದಿಲ್ಲ . ಈ ವೇಳೆ ಅವರನ್ನು ಬಂಧಿಸುವುದು ಸುಲಭ ಎಂದು ಬ್ರಿಟೀಷರಿಗೆ ಐಡಿಯಾ ಕೊಟ್ಟು ಬಂಧನಕ್ಕೆ ಕಾರಣರಾದವರು ನಮ್ಮವರೇ ಎಂದರು.

ಇಂಥಾ ದೇಶದ್ರೋಹಿಗಳು ನಮ್ಮಲ್ಲೇ ಇದ್ದಾರೆ. ಈ ಬಿಜೆಪಿಯವರು ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಕೆಳಗಿಳಿಸಬೇಕು ಎಂದು ಷಡ್ಯಂತ್ರ ಮಾಡುತ್ತಲೇ ಇದ್ದಾರೆ. ಆದರೆ ಎಲ್ಲಿಯವರೆಗೂ ನಿಮ್ಮ ಆಶೀರ್ವಾದ ನನ್ನ ಮೇಲೆ ಇರುತ್ತದೋ ಅಲ್ಲಿಯವರೆಗೂ ನನ್ನನ್ನು ಕೆಳಗಿಳಿಸಲು ಸಾಧ್ಯವಿಲ್ಲ ಎಂದರು.

ಹಿಂದುಳಿದ ಸಮುದಾಯದವರು ಸಿಎಂ ಆಗಬಾರದು, ಅಧಿಕಾರದಲ್ಲಿರಬಾರದು ಎನ್ನುವುದು ಬಿಜೆಪಿಯ ಪುರಾತನ ಸಿದ್ಧಾಂತ. ಅದಕ್ಕೇ ಯಾವುದೇ ತಪ್ಪಿಲ್ಲದಿದ್ದರೂ ನನ್ನ ವಿರುದ್ಧ ಬಿಜೆಪಿಯವರು ಭಯಾನಕ ಷಡ್ಯಂತ್ರ ರಚಿಸಿದ್ದಾರೆ. ಜನರ ಆಶೀರ್ವಾದ ನನ್ನ ಮೇಲೆ ಇರುವವರೆಗೂ ಷಡ್ಯಂತ್ರ ಗೆಲ್ಲುವುದಿಲ್ಲ ಎಂದು ಸ್ಪಷ್ಟ ಎಚ್ಚರಿಕೆ ನೀಡಿದರು.

ಬಾಗೋಜಿಕೊಪ್ಪ ಮಠದ ಶಿವಲಿಂಗ ಮುರುಘರಾಜೇಂದ್ರ ಸ್ವಾಮಿಗಳ ದಿವ್ಯ ಸಾನ್ನಿದ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಸತೀಶ್ ಜಾರಕಿಹೊಳಿ, ಶಾಸಕರಾ ಬಾಲಚಂದ್ರ ಜಾರಕಿಹೊಳಿ ಹಾಗೂ ಮುಖ್ಯ ಸಚೇತಕರಾದ ಅಶೋಕ್ ಪಟ್ಟಣ್ ಸೇರಿ ಹಲವು ನಾಯಕರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

2026ರ ದಸರಾ ಗಜಪಡೆ ಪಟ್ಟಿ ಬಿಡುಗಡೆ: ಅಂಬಾರಿ ಸಾರಥಿ ಅಭಿಮನ್ಯುವಿಗೆ ಕೊಕ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…

2 hours ago

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…

3 hours ago

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

3 hours ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

4 hours ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

9 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

9 hours ago