ರಾಜ್ಯ

ನಿಮ್ಮ ಆಶೀರ್ವಾದ ಇರುವವರೆಗೂ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ಸಾಧ್ಯವಿಲ್ಲ: ಬಿಜೆಪಿ ಗೆ ಎಚ್ಚರಿಕೆ ಕೊಟ್ಟ ಸಿಎಂ

ಗೋಕಾಕ: ನಿಮ್ಮ ಆಶೀರ್ವಾದ ಇರುವವರೆಗೂ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿ ಗೆ ಸ್ಪಷ್ಟ ಎಚ್ಚರಿಕೆ ಕೊಟ್ಟರು.

ಕೌಜಲಗಿಯಲ್ಲಿ ಆಯೋಜಿಸಿದ್ದ ಅದ್ದೂರಿ ಕಾರ್ಯಕ್ರಮದಲ್ಲಿ ಸಂಗೊಳ್ಳಿ ರಾಯಣ್ಣ ಮತ್ತು ರಾಯಣ್ಣ ಕೋಟೆಯನ್ನು ಉದ್ಘಾಟಿಸಿ ಮಾತನಾಡಿದರು.

ರಾಣಿ ಚನ್ನಮ್ಮನ ಬಲಗೈ ಬಂಟ ರಾಯಣ್ಣ ಅತ್ಯಂತ ಪರಾಕ್ರಮಿ. ಬ್ರಿಟೀಷರು ರಾಣಿ ಚನ್ನಮ್ಮನ ಆಸ್ಥಾನದ ಮೇಲೆ ದಾಳಿ ನಡೆಸಿದಾಗ ರಾಯಣ್ಣನ ಹೋರಾಟದಿಂದ, ಶೌರ್ಯದಿಂದ ಗೆಲುವು ಸಾಧ್ಯವಾಯಿತು. ಎರಡನೇ ಯುದ್ಧದಲ್ಲಿ ಸೋಲಾದರೂ ಬ್ರಿಟೀಷರ ಕೈಗೆ ಸಿಗದೆ ತಪ್ಪಿಸಿಕೊಂಡ ರಾಯಣ್ಣ ಗೆರಿಲ್ಲಾ ಸೈನ್ಯ ಕಟ್ಟಿ, ಗೆರಿಲ್ಲಾ ಯುದ್ಧ ಮಾಡಿ ಬ್ರಿಟೀಷರಿಗೆ ಚಳ್ಳೆಹಣ್ಣು ತಿನ್ನಿಸಿದರು. ಇದರಿಂದ ಬ್ರಿಟೀಷರು ನೆಮ್ಮದಿ ಕೆಡಿಸಿಕೊಂಡಿದ್ದರು. ಆದರೆ ನಮ್ಮವರೇ ರಾಯಣ್ಣನನ್ನು ಬ್ರಿಟೀಷರಿಗೆ ಹಿಡಿದುಕೊಟ್ಟರು.

ನಮ್ಮವರ ದೇಶದ್ರೋಹದಿಂದ ರಾಯಣ್ಣ ಬ್ರಿಟೀಷರ ವಶವಾದರು. ರಾಯಣ್ಣ ಈಜಾಡುವಾಗ ಅವರ ಕೈಯಲ್ಲಿ ಆಯುಧ ಇರುವುದಿಲ್ಲ . ಈ ವೇಳೆ ಅವರನ್ನು ಬಂಧಿಸುವುದು ಸುಲಭ ಎಂದು ಬ್ರಿಟೀಷರಿಗೆ ಐಡಿಯಾ ಕೊಟ್ಟು ಬಂಧನಕ್ಕೆ ಕಾರಣರಾದವರು ನಮ್ಮವರೇ ಎಂದರು.

ಇಂಥಾ ದೇಶದ್ರೋಹಿಗಳು ನಮ್ಮಲ್ಲೇ ಇದ್ದಾರೆ. ಈ ಬಿಜೆಪಿಯವರು ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಕೆಳಗಿಳಿಸಬೇಕು ಎಂದು ಷಡ್ಯಂತ್ರ ಮಾಡುತ್ತಲೇ ಇದ್ದಾರೆ. ಆದರೆ ಎಲ್ಲಿಯವರೆಗೂ ನಿಮ್ಮ ಆಶೀರ್ವಾದ ನನ್ನ ಮೇಲೆ ಇರುತ್ತದೋ ಅಲ್ಲಿಯವರೆಗೂ ನನ್ನನ್ನು ಕೆಳಗಿಳಿಸಲು ಸಾಧ್ಯವಿಲ್ಲ ಎಂದರು.

ಹಿಂದುಳಿದ ಸಮುದಾಯದವರು ಸಿಎಂ ಆಗಬಾರದು, ಅಧಿಕಾರದಲ್ಲಿರಬಾರದು ಎನ್ನುವುದು ಬಿಜೆಪಿಯ ಪುರಾತನ ಸಿದ್ಧಾಂತ. ಅದಕ್ಕೇ ಯಾವುದೇ ತಪ್ಪಿಲ್ಲದಿದ್ದರೂ ನನ್ನ ವಿರುದ್ಧ ಬಿಜೆಪಿಯವರು ಭಯಾನಕ ಷಡ್ಯಂತ್ರ ರಚಿಸಿದ್ದಾರೆ. ಜನರ ಆಶೀರ್ವಾದ ನನ್ನ ಮೇಲೆ ಇರುವವರೆಗೂ ಷಡ್ಯಂತ್ರ ಗೆಲ್ಲುವುದಿಲ್ಲ ಎಂದು ಸ್ಪಷ್ಟ ಎಚ್ಚರಿಕೆ ನೀಡಿದರು.

ಬಾಗೋಜಿಕೊಪ್ಪ ಮಠದ ಶಿವಲಿಂಗ ಮುರುಘರಾಜೇಂದ್ರ ಸ್ವಾಮಿಗಳ ದಿವ್ಯ ಸಾನ್ನಿದ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಸತೀಶ್ ಜಾರಕಿಹೊಳಿ, ಶಾಸಕರಾ ಬಾಲಚಂದ್ರ ಜಾರಕಿಹೊಳಿ ಹಾಗೂ ಮುಖ್ಯ ಸಚೇತಕರಾದ ಅಶೋಕ್ ಪಟ್ಟಣ್ ಸೇರಿ ಹಲವು ನಾಯಕರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

‘ಕೊಲೆ ಬಗ್ಗೆ ನಮಗೆ ಗೊತ್ತೇ ಇರಲಿಲ್ಲ’

ಎಚ್.ಎಸ್.ದಿನೇಶ್ ಕುಮಾರ್ ನಿತ್ಯಾನಂದ ಕೊಲೆ ಪ್ರಕರಣದ ನಾಲ್ವರು ಆರೋಪಿಗಳ ಪಶ್ಚಾತ್ತಾಪದ ಕಣ್ಣೀರು ಮೈಸೂರು: ನಗರದ ಕುವೆಂಪುನಗರದಲ್ಲಿ ಪತ್ನಿಯಿಂದಲೇ ಹತ್ಯೆಯಾದ ನಿತ್ಯಾನಂದ…

5 hours ago

ಕೊಡಗು ಜಿಲ್ಲೆಯಾದ್ಯಂತ ಚುರುಕುಗೊಂಡ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಮುಂಗಾರು ಮಳೆ ಚುರುಕು ಪಡೆದುಕೊಂಡಿದ್ದು, ಹಾರಂಗಿ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು ಏರಿಕೆ ಕಂಡುಬಂದಿದೆ. ಹಾರಂಗಿ ಜಲಾಶಯಕ್ಕೆ…

7 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಮಹಾತ್ಮನ ಚಿಂತನೆಯ ಹಾದಿಯಲ್ಲಿ ನಡೆಯಬೇಕಿದೆ ನಾನು ಕಂಡ ಗಾಂಧಿಜಿಯವರಲ್ಲಿ, ಅವರ ಜೀವನದಲ್ಲಿ ನನ್ನನ್ನು ಅತ್ಯಂತ ಹೆಚ್ಚಾಗಿ ಆಕರ್ಷಿಸಿದ ವಿಷಯ ಎಂದರೆ…

8 hours ago

ಮನುಷ್ಯ ಕುಲದ ಪ್ರಜ್ಞಾವಂತಿಕೆ ವಿಕಾಸಕ್ಕೆ ಗಾಂಧೀಜಿ ಕೈಮರ

ಗಾಂಧಿಜಿಯವರ ಜೀವನ ಚರಿತ್ರೆ ದೇಶ, ಖಂಡಗಳ ಗಡಿ ದಾಟಿ ಮನುಷ್ಯರೆಲ್ಲರ ಒಳಿತನ್ನು ಬಯಸುವ ಬಯಕೆಯನ್ನು ಭಾವಿಸಿ, ಜೀವಿಸಿ ತೋರಿಸಿದವರ ಪುಣ್ಯ…

9 hours ago

ಗಾಂಧಿ ಮೈಮೇಲೆ ಬಂದಂತೆ ಬದುಕಿದ್ದ ಹುಚ್ಚೇಗೌಡರು

ಸ್ವಾಮಿ ಪೊನ್ನಾಚ್ಚಿ ನಾನು ಹುಚ್ಚೇಗೌಡರನ್ನು ನೋಡಿದ್ದು ಇತ್ತೀಚೆಗೆ. ಅದೂ ಅತ್ತಿಖಾನೆ ಎಸ್ಟೇಟ್ ಸ್ಥಾಪಕ ಮಾರಿಸ್ ಬಗ್ಗೆ ತಿಳಿಯಲು ಹೋದಾಗ. ಸಿಕ್ಕ…

9 hours ago

ವಿಲಾಯತಿಗೆ ಹೊರಟವನು ಜಾತಿ ಬಾಹಿರನಾದೆ

ನಮ್ಮ ಜಾತಿಯ ಜನರು ನನ್ನ ವಿದೇಶ ಪ್ರಯಾಣವನ್ನು ಕುರಿತು ಗೊಂದಲವನ್ನು ಎಬ್ಬಿಸಿದರು. ಅಲ್ಲಿಯವರೆಗೆ ಮೋಧ್ ಬನಿಯರ ಪೈಕಿ ಯಾರೂ ವಿಲಾಯತಿಗೆ…

9 hours ago