ಮೈಸೂರು : ನಿರ್ದಿಷ್ಟ ಬ್ರಾಂಡ್ನ ಮೊಟ್ಟೆಗಳಲ್ಲಿ ಕ್ಯಾನ್ಸರ್ಗೆ ಕಾರಣವಾಗುವ ‘ಜಿನೋಟಾಕ್ಸಿಕ್ ಅಂಶ’ ಪತ್ತೆಯಾಗಿದೆ ಎಂದು ಹೇಳುವ ವೈರಲ್ ವಿಡಿಯೋ ಇದೀಗ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕ ಚರ್ಚೆಯನ್ನು ಹುಟ್ಟುಹಾಕಿದೆ.
ಮೊಟ್ಟೆಗಳಲ್ಲಿ ನಿಷೇಧಿತ ಕ್ಯಾನ್ಸರ್ ಕಾರಕ ಅಂಶವಿದೆ ಎಂದು ಹೇಳಿರುವ ಪ್ರಯೋಗಾಲಯದ ಪರೀಕ್ಷೆಗಳ ವರದಿಯನ್ನು ವಿಡಿಯೋದಲ್ಲಿ ಉಲ್ಲೇಖಿಸಲಾಗಿದ್ದು, ಇದು ಗ್ರಾಹಕರ ಕಳವಳಕ್ಕೆ ಕಾರಣವಾಗಿದೆ.
ಬೆಂಗಳೂರಿನ ಎಚ್ಸಿಜಿ ಕ್ಯಾನ್ಸರ್ ಆಸ್ಪತ್ರೆಯ ಕನ್ಸಲ್ಟೆಂಟ್ ಮೆಡಿಕಲ್ ಆಂಕೊಲಾಜಿಸ್ಟ್ ಡಾ. ಸ್ಮಿತಾ ಸಲ್ಡಾನಾ, ನೈಟ್ರೋಫ್ಯೂರಾನ್ಗಳು ಸೇರಿದಂತೆ ಇತರೆ ವಸ್ತುಗಳನ್ನು ಕೆಲವೊಮ್ಮೆ ಕೋಳಿ ಸಾಕಣೆಯಲ್ಲಿ ಬಳಸಲಾಗುತ್ತದೆ. ‘ನೈಟ್ರೋಫ್ಯೂರಾನ್ಗಳ ಕೆಲವು ಮೆಟಾಬಾಲೈಟ್ಗಳು, ಮಾನವ ದೇಹದಲ್ಲಿ ದೀರ್ಘಕಾಲದವರೆಗೆ ಮುಂದುವರಿದರೆ, ಡಿಎನ್ಎಗೆ ಹಾನಿ ಮಾಡಬಹುದು ಮತ್ತು ಅವು ಜಿನೋಟಾಕ್ಸಿಕ್ ಸಾಮರ್ಥ್ಯವನ್ನು ಹೊಂದಿರುತ್ತವೆ. ಮೊಟ್ಟೆಗಳು ಸ್ವತಃ ಕ್ಯಾನ್ಸರ್ ಕಾರಕವಲ್ಲ’ ಎಂದು ಅವರು ವಿವರಿಸಿದರು.
ಇದನ್ನೂ ಓದಿ:-ಶಿವಾಜಿ ಮುಸ್ಲಿಂರ ವಿರೋಧಿಯಾಗಿರಲಿಲ್ಲ :ಸಚಿವ ಕಾರ್ಮಿಕ ಸಂತೋಷ ಲಾಡ್
‘ಮಕ್ಕಳು ಮತ್ತು ಗರ್ಭಿಣಿಯರು ಹಾನಿಕಾರಕಗಳಿಂದ ಹೆಚ್ಚಿನ ಅಪಾಯಕ್ಕೆ ತುತ್ತಾಗುವ ಸಾಧ್ಯತೆ ಇದೆ. ದಿನಕ್ಕೆ ಆರು ಅಥವಾ ಏಳು ಮೊಟ್ಟೆಗಳನ್ನು ತಿನ್ನುವುದು ಸೂಕ್ತವಲ್ಲ. ಸಾಂದರ್ಭಿಕ ಸೇವನೆಯು ಕ್ಯಾನ್ಸರ್ ಅಪಾಯವನ್ನುಂಟುಮಾಡುವುದಿಲ್ಲ; ದೀರ್ಘಕಾಲದವರೆಗೆ ಕ್ಯಾನ್ಸರ್ ಕಾರಕಗಳಿಗೆ ಒಡ್ಡಿಕೊಳ್ಳುವುದರಿಂದ ಅಪಾಯವಿದೆ’ ಎಂದರು.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…