ಬೆಂಗಳೂರು: ದಕ್ಷಿಣ ಭಾರತದ ಪ್ರಸಿದ್ಧ ಖಾದ್ಯ ಇಡ್ಲಿಯನ್ನು ಎಲ್ಲೆಡೆ ತಯಾರಿಸಲಾಗುತ್ತದೆ. ಆದರೆ ಈ ಇಡ್ಲಿಯಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆಯಾಗಿದೆ ಎಂದು ಆಹಾರ ಇಲಾಖೆ ವರದಿ ಬಹಿರಂಗಪಡಿಸಿದೆ.
ಈ ಹಿನ್ನೆಲೆಯಲ್ಲಿ ಜನತೆಗೆ ಬಿಗ್ ಶಾಕ್ ಎದುರಾಗಿದ್ದು, ಇಡ್ಲಿಯಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆಯಾಗಿದೆ ಎಂದು ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಇಲಾಖೆ ನಡೆಸಿದ ಪರೀಕ್ಷೆಯಿಂದ ತಿಳಿದುಬಂದಿದೆ.
ಇಡ್ಲಿ ತಯಾರಿಕೆಗೆ ಪ್ಲಾಸ್ಟಿಕ್ ಬಳಕೆ ಮಾಡಲಾಗುತ್ತಿದೆ ಎಂದು ಸಾರ್ವಜನಿಕರಿಂದ ಪದೇ ಪದೇ ದೂರುಗಳು ಬಂದಿದ್ದವು. ದೂರು ಬಂದ ಹಿನ್ನೆಲೆಯಲ್ಲಿ ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಇಲಾಖೆ ಸುಮಾರು 500 ಆಹಾರ ಮಳಿಗೆಗಳ ಮೇಲೆ ದಾಳಿ ನಡೆಸಿತ್ತು. ಈ ವೇಳೆ ಸುಮಾರು 35 ಕಡೆ ಪ್ಲಾಸ್ಟಿಕ್ ಬಳಕೆ ಮಾಡಿರುವುದು ಪತ್ತೆಯಾಗಿದೆ. ಈ ಬೆನ್ನಲ್ಲೇ 35 ಮಳಿಗೆದಾರರಿಗೆ ನೋಟಿಸ್ ನೀಡಲಾಗಿದೆ.
ಇದೆಲ್ಲದರ ಜೊತೆಗೆ ಮುಖ್ಯವಾಗಿ 500 ಕಡೆಗಳಲ್ಲಿ ಸಂಗ್ರಹಿಸಿದ್ದ ಮಾದರಿಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ವರದಿಯ ಪ್ರಕಾರ 35 ಡೇಂಜರ್ ಎಂದು ಬಂದಿದ್ದು, ಇಡ್ಲಿಗೆ ಬಳಸುವ ಪ್ಲಾಸ್ಟಿಕ್ನಲ್ಲಿ ಶಾಖ ಹೆಚ್ಚಾದಂತೆ ಪಿಎಫ್ಎಎಸ್ ಕೆಮಿಕಲ್ ಎಂಬ ಹಾನಿಕಾರಕ ಅಂಶ ಹೊರ ಸೂಸುತ್ತದೆ ಎಂದು ವರದಿ ಬಂದಿದೆ.
ಈ ಎಲ್ಲಾ ಬೆಳವಣಿಗೆಗಳ ನಡುವೆಯೇ ಆಹಾರ ತಯಾರಿಕೆಗೆ ಈ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧ ಮಾಡುವುದಕ್ಕೆ ಇಲಾಖೆ ಮುಂದಾಗಿದೆ.
ಬೆಂಗಳೂರು : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ಜಾತಿಗಳ ಮೀಸಲಾತಿ ಪ್ರಮಾಣವನ್ನು ಶೇ.56ಕ್ಕೆ ಹೆಚ್ಚಳ…
ಹೊಸದಿಲ್ಲಿ : ಹಿರಿಯ ನಟ ಧರ್ಮೇಂದ್ರ, ದಂತಕಥೆ ಹಿನ್ನೆಲೆ ಗಾಯಕಿ ಅಲ್ಕಾ ಯಾಜ್ಞಿಕ್, ಮಲಯಾಳಂ ಸಿನಿಮಾ ದಿಗ್ಗಜ ಮಮ್ಮುಟ್ಟಿ, ಬಂಗಾಳಿ…
ಹೊಸದಿಲ್ಲಿ : ನ್ಯಾಯಾಂಗ ಸ್ವಾತಂತ್ರ್ಯಕ್ಕೆ ಅಪಾಯ ಹೊರಗಿನಿಂದಲ್ಲ, ‘ಆಂತರಿಕ ವ್ಯವಸ್ಥೆ’ಯಿಂದಲೇ ಇದೆ ಎಂದು ಹೇಳಿರುವ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಉಜ್ಜಲ್…
ಬೆಂಗಳೂರು : ಅಧಿಕಾರಿಗಳು ಜನಪ್ರತಿನಿಧಿಗಳ ದೂರವಾಣಿ ಕರೆಯನ್ನು ಸ್ವೀಕರಿಸಲೇಬೇಕು ಎಂಬ ಸುತ್ತೋಲೆಯನ್ನು ಹೊರಡಿಸುವ ಮೂಲಕ ಸರ್ಕಾರಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರ…
ಮೈಸೂರು : ಹೊಸದಿಲ್ಲಿಯಲ್ಲಿ ಬುದ್ಧಗಯಾ ವಿಮೋಚನೆ ಐತಿಹಾಸಿಕ ಚಳವಳಿಯಲ್ಲಿ ಬೌದ್ಧ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಬೌದ್ಧ ಚಿಂತಕ,…
ಮೈಸೂರು : ರಥಸಪ್ತಮಿ ಅಂಗವಾಗಿ ನಗರದಲ್ಲಿ ಭಾನುವಾರ ಅರಮನೆ ಸೇರಿದಂತೆ ವಿವಿಧೆಡೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸೂರ್ಯನಿಗೆ ನಮಿಸಲಾಯಿತು.…