ರಾಜ್ಯ

ಇಡ್ಲಿ ಪ್ರಿಯರಿಗೆ ಬಿಗ್‌ ಶಾಕ್:‌ ಇಡ್ಲಿಗೆ ಬಳಸುವ ಪ್ಲಾಸ್ಟಿಕ್‌ನಲ್ಲಿ ಕ್ಯಾನ್ಸರ್‌ಕಾರಕ ಅಂಶ ಪತ್ತೆ

ಬೆಂಗಳೂರು: ದಕ್ಷಿಣ ಭಾರತದ ಪ್ರಸಿದ್ಧ ಖಾದ್ಯ ಇಡ್ಲಿಯನ್ನು ಎಲ್ಲೆಡೆ ತಯಾರಿಸಲಾಗುತ್ತದೆ. ಆದರೆ ಈ ಇಡ್ಲಿಯಲ್ಲಿ ಕ್ಯಾನ್ಸರ್‌ ಕಾರಕ ಅಂಶ ಪತ್ತೆಯಾಗಿದೆ ಎಂದು ಆಹಾರ ಇಲಾಖೆ ವರದಿ ಬಹಿರಂಗಪಡಿಸಿದೆ.

ಈ ಹಿನ್ನೆಲೆಯಲ್ಲಿ ಜನತೆಗೆ ಬಿಗ್‌ ಶಾಕ್‌ ಎದುರಾಗಿದ್ದು, ಇಡ್ಲಿಯಲ್ಲಿ ಕ್ಯಾನ್ಸರ್‌ ಕಾರಕ ಅಂಶ ಪತ್ತೆಯಾಗಿದೆ ಎಂದು ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಇಲಾಖೆ ನಡೆಸಿದ ಪರೀಕ್ಷೆಯಿಂದ ತಿಳಿದುಬಂದಿದೆ.

ಇಡ್ಲಿ ತಯಾರಿಕೆಗೆ ಪ್ಲಾಸ್ಟಿಕ್‌ ಬಳಕೆ ಮಾಡಲಾಗುತ್ತಿದೆ ಎಂದು ಸಾರ್ವಜನಿಕರಿಂದ ಪದೇ ಪದೇ ದೂರುಗಳು ಬಂದಿದ್ದವು. ದೂರು ಬಂದ ಹಿನ್ನೆಲೆಯಲ್ಲಿ ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಇಲಾಖೆ ಸುಮಾರು 500 ಆಹಾರ ಮಳಿಗೆಗಳ ಮೇಲೆ ದಾಳಿ ನಡೆಸಿತ್ತು. ಈ ವೇಳೆ ಸುಮಾರು 35 ಕಡೆ ಪ್ಲಾಸ್ಟಿಕ್‌ ಬಳಕೆ ಮಾಡಿರುವುದು ಪತ್ತೆಯಾಗಿದೆ. ಈ ಬೆನ್ನಲ್ಲೇ 35 ಮಳಿಗೆದಾರರಿಗೆ ನೋಟಿಸ್‌ ನೀಡಲಾಗಿದೆ.

ಇದೆಲ್ಲದರ ಜೊತೆಗೆ ಮುಖ್ಯವಾಗಿ 500 ಕಡೆಗಳಲ್ಲಿ ಸಂಗ್ರಹಿಸಿದ್ದ ಮಾದರಿಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ವರದಿಯ ಪ್ರಕಾರ 35 ಡೇಂಜರ್‌ ಎಂದು ಬಂದಿದ್ದು, ಇಡ್ಲಿಗೆ ಬಳಸುವ ಪ್ಲಾಸ್ಟಿಕ್‌ನಲ್ಲಿ ಶಾಖ ಹೆಚ್ಚಾದಂತೆ ಪಿಎಫ್‌ಎಎಸ್‌ ಕೆಮಿಕಲ್‌ ಎಂಬ ಹಾನಿಕಾರಕ ಅಂಶ ಹೊರ ಸೂಸುತ್ತದೆ ಎಂದು ವರದಿ ಬಂದಿದೆ.

ಈ ಎಲ್ಲಾ ಬೆಳವಣಿಗೆಗಳ ನಡುವೆಯೇ ಆಹಾರ ತಯಾರಿಕೆಗೆ ಈ ಪ್ಲಾಸ್ಟಿಕ್‌ ಬಳಕೆಯನ್ನು ನಿಷೇಧ ಮಾಡುವುದಕ್ಕೆ ಇಲಾಖೆ ಮುಂದಾಗಿದೆ.

 

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ | ಬೀದಿನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಜೆ.ಪಿ.ನಗರದ ಸಾಯಿಬಾಬಾ ದೇವಸ್ಥಾನದ ಹಿಂಭಾಗದ ರಸ್ತೆಯಲ್ಲಿ ಬೀದಿನಾಯಿಗಳ ಹಾವಳಿ ವಿಪರೀತವಾಗಿದೆ. ರಾತ್ರಿಯ ಹೊತ್ತಿನಲ್ಲಿ ಒಂದೇ ಸಮನೆ ಬೊಗಳುತ್ತಿರುತ್ತವೆ. ದ್ವಿಚಕ್ರವಾಹನ…

4 mins ago

ಗುಂಡ್ಲುಪೇಟೆ | ವಿದ್ಯುತ್ ಸ್ಪರ್ಶಿಸಿ ಹುಲಿ ಸಾವು

ಗುಂಡ್ಲುಪೇಟೆ : ತಾಲೂಕಿನ ಪಡಗೂರು ಗ್ರಾಮದಲ್ಲಿ ವಿದ್ಯುತ್ ಸ್ಪರ್ಶಿಸಿ ಹುಲಿಯೊಂದು ಸಾವನ್ನಪ್ಪಿರುವ ಘಟನೆ ನಡೆದಿದೆ. ಗ್ರಾಮದ ಅಡವಿ ಮಠದ ಸಮೀಪವಿರುವ…

41 mins ago

ಓದುಗರ ಪತ್ರ | ಪ್ರಾಣಿ, ಪಕ್ಷಿಗಳಿಗೆ ನೀರು ಕೊಡಿ

ಬೇಸಿಗೆ ಆರಂಭವಾಗುವುದೇ ತಡ ಪ್ರತಿಯೊಬ್ಬರಿಗೂ ಬಾಯಾರಿಕೆ ಹೆಚ್ಚಾಗಿ, ಜಾಸ್ತಿ ನೀರು ಕುಡಿಯಬೇಕಾಗುತ್ತದೆ. ಬಿಸಿಲಿನ ಬೇಗೆ ಹೆಚ್ಚಾಗುವುದರಿಂದ ಎಂತಹವರಿಗೂ ವಿವಿಧ ರೀತಿಯ…

1 hour ago

ಓದುಗರ ಪತ್ರ | ಸರ್ಕಾರಿ ಶಾಲೆಗಳಿಗೆ ಲ್ಯಾಪ್ ಟಾಪ್, ವೈಫೈ ಸೌಲಭ್ಯ ಕಲ್ಪಿಸಿ

ಈಗ ಶಾಲೆಯಲ್ಲಿ ಶಿಕ್ಷಕರು ಕೇವಲ ಪಠ್ಯ ಬೋಧಕರಾಗಿ ಮಾತ್ರ ಉಳಿದಿಲ್ಲ. ಬೋಧನೆಯ ಜೊತೆ ಜೊತೆಗೆ ಮಕ್ಕಳನ್ನು ದಾಖಲಾತಿ ಮಾಡಿಕೊಳ್ಳುವುದು, ಮಧ್ಯಾಹ್ನದ…

2 hours ago

ಆಂದೋಲನ ವಿಶೇಷ ; ಸೋನಂ ವಾಂಗ್ಚುಕ್ ದಿಢೀರ್ ಬಿಡುಗಡೆ ‌

• ಆರೋಪ ಸಾಬೀತು ಮಾಡಲು ಕೇಂದ್ರ ವಿಫಲ • ಸುಪ್ರೀಂ ಮುಜುಗರದಿಂದ ಪಾರು? ಪರಿಸರ ಮತ್ತು ಶೈಕ್ಷಣಿಕ ಕ್ಷೇತ್ರಗಳಲ್ಲಿ ಮಾಡಿದ…

4 hours ago

ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಜಾತ್ರೆಗೆ ಸಕಲ ಸಿದ್ಧತೆ

ಮಹಾದೇಶ್‌ ಎಂ.ಗೌಡ ಹನೂರು : ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಸೋಮವಾರದಿಂದ ಪ್ರಾರಂಭವಾಗಿರುವ ಯುಗಾದಿ ಜಾತ್ರಾ ಮಹೋತ್ಸವ ಮಾರ್ಚ್ 19ರವರೆಗೆ…

4 hours ago