ರಾಜ್ಯ

ರಾಮಲಲ್ಲಾ ಮೂರ್ತಿ ಕೆತ್ತನೆ: ಅರುಣ್‌ಗೆ ಅಭಿನಂದನೆ ಸಲ್ಲಿಸಿದ ಬಿವೈ ವಿಜಯೇಂದ್ರ

ಬೆಂಗಳೂರು: ಜನವರಿ 22ರಂದು ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಉದ್ಘಾಟನೆಯಾಗಲಿದ್ದು, ಇದರೊಂದಿಗೆ ಬಾಲರಾಮ ಪ್ರತಿಷ್ಠಾಪನೆಯೂ ಆಗಲಿದೆ.

ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್​​ ಅವರು ಕೆತ್ತನೆಯ ರಾಮಲಲ್ಲಾ ಮೂರ್ತಿ ಕೆತ್ತನೆ ಮಾಡಿದ್ದು, ಅಯೋಧ್ಯೆಯಲ್ಲಿ ಪ್ರತಿಷ್ಠಾಪನೆಯಾಗಲಿದೆ. ಇದು ಇಡೀ ರಾಜ್ಯವೇ ಹೆಮ್ಮೆ ಪಡುವ ಸಂಗತಿಯಾಗಿದೆ. ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಶಿಲ್ಪಿ ಅರುಣ್ ಯೋಗಿರಾಜ್ ಅವರಿ​ಗೆ ತುಂಬು ಹೃದಯದ ಅಭಿನಂದನೆಗಳನ್ನು ತಿಳಿಸಿದ್ದಾರೆ.

ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಅವರು ಕೆತ್ತಿದ ರಾಮಲಲ್ಲಾ ಮೂರ್ತಿಯು ಅಯೋಧ್ಯೆಯಲ್ಲಿ ಪ್ರತಿಷ್ಠಾಪನೆ ಆಗುತ್ತಿರುವುದು ಅತ್ಯಂತ ಸಂತಸದ ವಿಚಾರ. ಜನವರಿ 22ರಂದು ಮೈಸೂರಿನ ಅರುಣ್ ಯೋಗಿರಾಜ್ ಅವರು ಕೆತ್ತಿದ ರಾಮಲಲಾ ಮೂರ್ತಿಯ ಪ್ರಾಣ ಪ್ರತಿಷ್ಠೆ ನಡೆಯುತ್ತಿರುವ ವಿಷಯ ಅತ್ಯಂತ ಖುಷಿಯನ್ನು ತಂದಿತ್ತಿದೆ ಎಂದಿದ್ದಾರೆ.

ಶ್ರೀರಾಮನಿಗೂ ಕರ್ನಾಟಕಕ್ಕೂ ವಿಶೇಷವಾದ ಬಾಂಧವ್ಯವಿದೆ. ಹನುಮಂತನು ಕರ್ನಾಟಕದಲ್ಲೇ ಜನಿಸಿದ್ದು, ಶ್ರೀರಾಮನಿಗೂ ಕರ್ನಾಟಕಕ್ಕೂ ಅವಿನಾಭಾವ ಸಂಬಂಧವಿದೆ. ಅರುಣ್ ಯೋಗಿರಾಜ್ ಅವರು ಕೆತ್ತಿದ ರಾಮಲಲಾ ಮೂರ್ತಿಯ ಪ್ರಾಣ ಪ್ರತಿಷ್ಠೆ ನಡೆಯುತ್ತಿರುವುದು ಕರ್ನಾಟಕಕ್ಕೆ ಹೆಮ್ಮೆಯ ವಿಷಯವಾಗಿದೆ. ಅರುಣ್ ಯೋಗಿರಾಜ್ ಅವರಿಗೆ ತುಂಬು ಹೃದಯದ ಅಭಿನಂದನೆಗಳು ಎಂದು ವಿಜಯೇಂದ್ರ ಹೇಳಿದ್ದಾರೆ.

andolanait

Recent Posts

ಮಂಡ್ಯದಲ್ಲಿ ಭಿಕ್ಷುಕಿ ನಿಧನ : ಮೃತಳ ಮನೆಯಲ್ಲಿ ಮೂಟೆಗಟ್ಟಲೆ ಹಣ ಪತ್ತೆ; ಊರಿಗೂರೇ ಶಾಕ್!

ಮಂಡ್ಯ: ವೃದ್ಧ ಭೀಕ್ಷುಕಿಯೊಬ್ಬರು ತಾನು ಬೇಡಿ ಸಂಗ್ರಹಿಸಿಟ್ಟಿದ್ದ ಸಂಪತ್ತು ಇದೀಗ ಪರರ ಪಾಲಾಗಿರುವ ಸಂಗತಿ ಜನರನ್ನು ಅಚ್ಚರಿಗೊಳಿಸಿದೆ. ಮಂಡ್ಯ ನಗರದ…

4 hours ago

ಜಿಲ್ಲೆಗೊಂದು ಕೈಗಾರಿಕೆ ತರುತ್ತೇನೆ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭರವಸೆ

ಪಾಂಡವಪುರ : ಜಿಲ್ಲೆಯ ಜನರ ನಿರೀಕ್ಷೆಯಂತೆ ಕೇಂದ್ರ ಸಚಿವನಾಗಿ ನನ್ನ ಅಧಿಕಾರದ ಅವಧಿಯೊಳಗೆ ಜಿಲ್ಲೆಗೊಂದು ಕೈಗಾರಿಕೆಯನ್ನು ತಂದೇ ತರುತ್ತೇವೆ ಎಂದು…

5 hours ago

ನಕಲಿ ಔಷಧ ತಯಾರಿಕಾ, ಮಾರಾಟ ಜಾಲ ; ವಿದೇಶದಲ್ಲಿ ಕಿಂಗ್‌ಪಿನ್ ಬಂಧನ

ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಹರಡಿದ್ದ ನಕಲಿ ಔಷಧ ಮಾರಾಟ ಜಾಲದ ಕಿಂಗ್ ಪಿನ್, ವಿದೇಶದಲ್ಲಿ ಅಡಗಿದ್ದ…

6 hours ago

ಗೋಣಿಕೊಪ್ಪ | ಮಾರುಕಟ್ಟೆಯಲ್ಲಿ ಗಸ್ತು ತಿರುಗಿದ ಪೊಲೀಸರು ; ಅಕ್ರಮ ಚಟುವಟಿಕೆ ಮೇಲೆ ನಿಗಾ

ಗೋಣಿಕೊಪ್ಪ : ಗೋಣಿಕೊಪ್ಪ ಪಟ್ಟಣದ ಮಾರುಕಟ್ಟೆ ಪ್ರದೇಶದಲ್ಲಿ ಅನಧಿಕೃತ ವಾಹನ ನಿಲುಗಡೆ, ರಸ್ತೆ ಅತಿಕ್ರಮಣ ಹಾಗೂ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ…

7 hours ago

ಪಾರದೀಪ್ ಕರಾವಳಿಯಲ್ಲಿ ಹಡಗು ಮುಳುಗಡೆ ; ಇಬ್ಬರ ರಕ್ಷಣೆ, 22 ಮಂದಿ ನಾಪತ್ತೆ

72,100 ಟನ್‌ ಕಬ್ಬಿಣದ ಅದಿರು ಇದ್ದ ಹಡಗು ಭುವನೇಶ್ವರ: ಒಡಿಶಾದ ಪಾರದೀಪ್ ಕರಾವಳಿಯ ಆಳ ಸಮುದ್ರದಲ್ಲಿ ಶನಿವಾರ ಭೀಕರ ನೌಕಾ…

8 hours ago

ಐಎಎಸ್‌ ಅಧಿಕಾರಿ ಜ್ಞಾನೇಂದ್ರ ಕುಮಾರ್ ಮನೆ ಬಾಗಿಲು ಒಡೆದು ಇಡಿ ದಾಳಿ

ಬೆಂಗಳೂರು : ಕೆಪಿಎಸ್‌ಸಿ ಹಗರಣ ಸಂಬಂಧ ಫೋನ್ ಕರೆಗೆ ಪ್ರತಿಕ್ರಿಯಿಸದ ಹಿನ್ನೆಲೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅನುಪಸ್ಥಿತಿಯಲ್ಲಿ ಅವರ…

9 hours ago