ಬೆಂಗಳೂರು: ವಿವಾದದ ಹೇಳಿಕೆ ನೀಡಿರುವ ಸಂಬಂಧ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ಅವರ ಮೇಲೆ ದಾಖಲಾಗಿರುವ ಪ್ರಕರಣವನ್ನು ಕಾಂಗ್ರೆಸ್ ಸರ್ಕಾರ ವಾಪಸ್ ಪಡೆಯಬೇಕು ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಆಗ್ರಹಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಸ್ಲಿಂಮರಿಗೆ ಮತದಾನದ ಹಕ್ಕನ್ನು ನೀಡಿರುವ ಕುರಿತು ಸ್ವಾಮೀಜಿ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಕುರಿತು ರಾಜ್ಯ ಸರ್ಕಾರ ಇವರ ವಿರುದ್ಧ ಪ್ರಕರಣ ದಾಖಲಿಸಿತ್ತು. ಈಗ ಸ್ವಾಮೀಜಿ ತಮ್ಮ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ್ದು, ಆ ಹೇಳಿಕೆ ಅವರು ಸಾಂದರ್ಭಿಕವಾಗಿ ಹೇಳಿದ್ದಾರೆ ಎಂದರು.
ಸಂವಿಧಾನ ಎಲ್ಲರಿಗೂ ಒಂದೇ ಎನ್ನುವುದನ್ನು ಅವರು ಹೇಳಿದ್ದು, ತಪ್ಪನ್ನು ಒಪ್ಪಕೊಂಡಿದ್ದಾರೆ. ವಯೋಸಹಜ ಕಾರಣ ಅವರ ಮೇಲಿನ ದೂರನ್ನು ಹಿಂಪಡೆಯಲು ಅಧಿಕಾರಿಗಳಿಗೆ ಸೂಚಿಸುವಂತೆ ಸಿಎಂ ಸಿದ್ದರಾಮಯ್ಯ ಅವರಲ್ಲಿ ಮನವಿ ಮಾಡುತ್ತೇನೆ ಎಂದು ಹೇಳಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಬಿಜೆಪಿಯವರು ತಮ್ಮಲ್ಲಿನ ಒಳಜಗಳದಿಂದ ಎರಡು ಬಣಗಳಾಗಿದ್ದಾರೆ. ಈಗ ಒಂದು ಯತ್ನಾಳ್ ವಿರುದ್ಧ ಹೋರಾಟ ಮಾಡುತ್ತದೆಯೋ ಅಥವಾ ಕಾಂಗ್ರೆಸ್ ವಿರುದ್ಧ ಮಾಡುತ್ತದೆಯೋ ನನಗೆ ತಿಳಿಯದು. ಆದರೆ ನಮ್ಮ ಕಾಂಗ್ರೆಸ್ ಸರ್ಕಾರ ಮಾತ್ರ ರಾಜ್ಯದ ಅಭಿವೃದ್ದಿ ದೃಷ್ಟಿಯಿಂದ ಮುನ್ನಡೆಯುತ್ತಿದೆ. ಅಲ್ಲದೇ ವಿರೋಧ ಪಕ್ಷಗಳು ಕೂಡ ರಾಜ್ಯದ ಜನರ ಸಂಕಷ್ಟಗಳಿಗೆ ನೆರವಾಗುವ ಕೆಲಸ ಮಾಡಲಿ ಎಂದು ಹೇಳಿದರು.
ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ…
ಮದ್ದೂರು : ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ…
ಬೆಂಗಳೂರು : ಗ್ರಾಮಗಳಿಗೆ ನುಗ್ಗಿ ಬೆಳೆಹಾನಿ, ಜೀವಹಾನಿ ಮಾಡುತ್ತಿರುವ ಆನೆಗಳ ಸೆರೆಗೆ ಆದೇಶ ನೀಡಿದ್ದು, ಈಗಾಗಲೇ 2 ಆನೆ ಸೆರೆ…
ಬೆಂಗಳೂರು : ಭದ್ರಾ ಅಭಯಾರಣ್ಯದ ಪರಿಸರ ಸೂಕ್ಷ್ಮ ವಲಯ ಪ್ರದೇಶವನ್ನು ನಿಗದಿ ಪಡಿಸುವ ಕುರಿತಂತೆ ಚಿಕ್ಕಮಗಳೂರು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ…
ಹೊಸದಿಲ್ಲಿ : ಎಲ್ಪಿಜಿ ಸಿಲಿಂಡರ್ ರಿಫಿಲಿಂಗ್ ಸಮಯ ಮಿತಿ ಬದಲಾವಣೆ ಬಗ್ಗೆ ಹಲವು ಊಹಾಪೋಹಗಳು ಹರಡಿದ್ದು, ಇದೀಗ ಪೆಟ್ರೋಲಿಯಂ ಮತ್ತು…
ನಾಪೋಕ್ಲು : ದ್ವಿಚಕ್ರ ವಾಹನವೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಚೈಯಂಡಾಣೆಯ ನರಿಯಂದಡ ಗ್ರಾಮದಲ್ಲಿ ಜರುಗಿದೆ. ಸ್ಥಳೀಯ…