ಬೆಂಗಳೂರು: ವಿವಾದದ ಹೇಳಿಕೆ ನೀಡಿರುವ ಸಂಬಂಧ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ಅವರ ಮೇಲೆ ದಾಖಲಾಗಿರುವ ಪ್ರಕರಣವನ್ನು ಕಾಂಗ್ರೆಸ್ ಸರ್ಕಾರ ವಾಪಸ್ ಪಡೆಯಬೇಕು ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಆಗ್ರಹಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಸ್ಲಿಂಮರಿಗೆ ಮತದಾನದ ಹಕ್ಕನ್ನು ನೀಡಿರುವ ಕುರಿತು ಸ್ವಾಮೀಜಿ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಕುರಿತು ರಾಜ್ಯ ಸರ್ಕಾರ ಇವರ ವಿರುದ್ಧ ಪ್ರಕರಣ ದಾಖಲಿಸಿತ್ತು. ಈಗ ಸ್ವಾಮೀಜಿ ತಮ್ಮ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ್ದು, ಆ ಹೇಳಿಕೆ ಅವರು ಸಾಂದರ್ಭಿಕವಾಗಿ ಹೇಳಿದ್ದಾರೆ ಎಂದರು.
ಸಂವಿಧಾನ ಎಲ್ಲರಿಗೂ ಒಂದೇ ಎನ್ನುವುದನ್ನು ಅವರು ಹೇಳಿದ್ದು, ತಪ್ಪನ್ನು ಒಪ್ಪಕೊಂಡಿದ್ದಾರೆ. ವಯೋಸಹಜ ಕಾರಣ ಅವರ ಮೇಲಿನ ದೂರನ್ನು ಹಿಂಪಡೆಯಲು ಅಧಿಕಾರಿಗಳಿಗೆ ಸೂಚಿಸುವಂತೆ ಸಿಎಂ ಸಿದ್ದರಾಮಯ್ಯ ಅವರಲ್ಲಿ ಮನವಿ ಮಾಡುತ್ತೇನೆ ಎಂದು ಹೇಳಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಬಿಜೆಪಿಯವರು ತಮ್ಮಲ್ಲಿನ ಒಳಜಗಳದಿಂದ ಎರಡು ಬಣಗಳಾಗಿದ್ದಾರೆ. ಈಗ ಒಂದು ಯತ್ನಾಳ್ ವಿರುದ್ಧ ಹೋರಾಟ ಮಾಡುತ್ತದೆಯೋ ಅಥವಾ ಕಾಂಗ್ರೆಸ್ ವಿರುದ್ಧ ಮಾಡುತ್ತದೆಯೋ ನನಗೆ ತಿಳಿಯದು. ಆದರೆ ನಮ್ಮ ಕಾಂಗ್ರೆಸ್ ಸರ್ಕಾರ ಮಾತ್ರ ರಾಜ್ಯದ ಅಭಿವೃದ್ದಿ ದೃಷ್ಟಿಯಿಂದ ಮುನ್ನಡೆಯುತ್ತಿದೆ. ಅಲ್ಲದೇ ವಿರೋಧ ಪಕ್ಷಗಳು ಕೂಡ ರಾಜ್ಯದ ಜನರ ಸಂಕಷ್ಟಗಳಿಗೆ ನೆರವಾಗುವ ಕೆಲಸ ಮಾಡಲಿ ಎಂದು ಹೇಳಿದರು.
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…
ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್ ಫಾರ್ಮ್ಗಳಲ್ಲಿ ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…
ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…