ರಾಜ್ಯ

ಚಂದ್ರಶೇಖರನಾಥ ಸ್ವಾಮೀಜಿ ಪ್ರಕರಣವನ್ನು ಸರ್ಕಾರ ವಾಪಸ್‌ ಪಡೆಯಬೇಕು: ಮಾಜಿ ಸಂಸದ ಡಿ.ಕೆ ಸುರೇಶ್‌

ಬೆಂಗಳೂರು: ವಿವಾದದ ಹೇಳಿಕೆ ನೀಡಿರುವ ಸಂಬಂಧ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ಅವರ ಮೇಲೆ ದಾಖಲಾಗಿರುವ ಪ್ರಕರಣವನ್ನು ಕಾಂಗ್ರೆಸ್‌ ಸರ್ಕಾರ ವಾಪಸ್‌ ಪಡೆಯಬೇಕು ಎಂದು ಮಾಜಿ ಸಂಸದ ಡಿ.ಕೆ.ಸುರೇಶ್‌ ಆಗ್ರಹಿಸಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಸ್ಲಿಂಮರಿಗೆ ಮತದಾನದ ಹಕ್ಕನ್ನು ನೀಡಿರುವ ಕುರಿತು ಸ್ವಾಮೀಜಿ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಕುರಿತು ರಾಜ್ಯ ಸರ್ಕಾರ ಇವರ ವಿರುದ್ಧ ಪ್ರಕರಣ ದಾಖಲಿಸಿತ್ತು. ಈಗ ಸ್ವಾಮೀಜಿ ತಮ್ಮ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ್ದು, ಆ ಹೇಳಿಕೆ ಅವರು ಸಾಂದರ್ಭಿಕವಾಗಿ ಹೇಳಿದ್ದಾರೆ ಎಂದರು.

ಸಂವಿಧಾನ ಎಲ್ಲರಿಗೂ ಒಂದೇ ಎನ್ನುವುದನ್ನು ಅವರು ಹೇಳಿದ್ದು, ತಪ್ಪನ್ನು ಒಪ್ಪಕೊಂಡಿದ್ದಾರೆ. ವಯೋಸಹಜ ಕಾರಣ ಅವರ ಮೇಲಿನ ದೂರನ್ನು ಹಿಂಪಡೆಯಲು ಅಧಿಕಾರಿಗಳಿಗೆ ಸೂಚಿಸುವಂತೆ ಸಿಎಂ ಸಿದ್ದರಾಮಯ್ಯ ಅವರಲ್ಲಿ ಮನವಿ ಮಾಡುತ್ತೇನೆ ಎಂದು ಹೇಳಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಬಿಜೆಪಿಯವರು ತಮ್ಮಲ್ಲಿನ ಒಳಜಗಳದಿಂದ ಎರಡು ಬಣಗಳಾಗಿದ್ದಾರೆ. ಈಗ ಒಂದು ಯತ್ನಾಳ್‌ ವಿರುದ್ಧ ಹೋರಾಟ ಮಾಡುತ್ತದೆಯೋ ಅಥವಾ ಕಾಂಗ್ರೆಸ್‌ ವಿರುದ್ಧ ಮಾಡುತ್ತದೆಯೋ ನನಗೆ ತಿಳಿಯದು. ಆದರೆ ನಮ್ಮ ಕಾಂಗ್ರೆಸ್‌ ಸರ್ಕಾರ ಮಾತ್ರ ರಾಜ್ಯದ ಅಭಿವೃದ್ದಿ ದೃಷ್ಟಿಯಿಂದ ಮುನ್ನಡೆಯುತ್ತಿದೆ. ಅಲ್ಲದೇ ವಿರೋಧ ಪಕ್ಷಗಳು ಕೂಡ ರಾಜ್ಯದ ಜನರ ಸಂಕಷ್ಟಗಳಿಗೆ ನೆರವಾಗುವ ಕೆಲಸ ಮಾಡಲಿ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಡಿ.ಕೆ.ಶಿವಕುಮಾರ್‌ ಜನ್ಮದಿನಾಚರಣೆ : ರಾರಾಜಿಸಿದ ಮುಂದಿನ ಮುಖ್ಯಮಂತ್ರಿ ಡಿಕೆಶಿ ಬ್ಯಾನರ್‌ಗಳು

ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…

44 mins ago

ದರ್ಶನ್‌ಗೆ ಇನ್ನೂ ಒಂದು ವರ್ಷ ಜಾಮೀನು ಇಲ್ಲ : ಅರ್ಜಿ ವಜಾಗೊಳಿಸಿದ ಸುಪೀಂ

ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್‌ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…

57 mins ago

ಜೂನ್‌ 21ರಂದು ನೀಟ್-ಯುಜಿ 2026ರ ಮರು ಪರೀಕ್ಷೆ

ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…

3 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; ಪ್ರತಿಷ್ಠಿತ ಕಾನ್‌ ಚಿತ್ರೋತ್ಸವದಲ್ಲಿ ಭಾರತ ಚಿತ್ರೋದ್ಯಮ

ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್‌ನ ಕಾನ್‌ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…

6 hours ago

ಗಗನಮುಖಿಯಾಗಿದ್ದ ತೆಂಗಿನ ಕಾಯಿ ದರ ಕುಸಿತ

ಎಚ್‌.ಎಸ್.ದಿನೇಶ್‌ ಕುಮಾರ್‌ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…

7 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.15  ಶುಕ್ರವಾರ

7 hours ago