ರಾಜ್ಯ

ಬಿಜೆಪಿ ಶಾಸಕ ಯತ್ನಾಳ್‌ ವಿರುದ್ಧ ದೂರು: ಕಾರಣ ಇಲ್ಲಿದೆ ನೋಡಿ?!

ಬೆಂಗಳೂರು: ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಮತ್ತು ಅವರ ಕುಟುಂಬದವರನ್ನು ದೇಶ ವಿರೋಧಿಗಳು ಎಂದು ನಿಂದಿಸಿರುವ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್‌ ಯತ್ನಾಳ್‌ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಸರವಣನ್‌ ಶೇಷಾದ್ರಿಪುರಂ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ಇಂದು (ಏ.೬) ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ ಬಸವನಗೌಡ ಪಾಟೀಲ್‌ ಯತ್ನಾಳ್‌, ರಾಮೇಶ್ವರ ಕೆಫೆ ಸ್ಟೋಟ ಪ್ರಕರಣದಲ್ಲಿ ವಿಚಾರಣೆಗೊಳಪಟ್ಟ ಬಿಜೆಪಿ ಕಾರ್ಯಕರ್ತನ ಪರವಾಗಿ ಸಮರ್ಥನೆ ಮಾಡುವ ಸಂಬಂಧ ಗಾಂಧಿನಗರ ವಿಧಾನಸಭಾ ಕ್ಷೇತ್ರದ ಶಾಸಕರು, ಸಚಿವರಾದ ದಿನೇಶ್‌ ಗುಂಡೂರಾವ್‌ ಅವರ ಮನೆಯಲ್ಲಿ ಅರ್ಧ ಪಾಕಿಸ್ತಾನವಿದೆ, ದೇಶವಿರೋಧಿ ಹೇಳಿಕೆ ನೀಡುವುದು ಅವರ ಚಟವಾಗಿದೆ ಎಂದು ಹೇಳಿದ್ದರು.

ಈ ಹೇಳಿಕೆಯನ್ನು ಉಲ್ಲೇಖಿಸಿರುವ ಶರವಣನ್‌, ಇಂತಹ ಹೇಳಿಕೆ ಮೂಲಕ ಇಡೀ ಕುಟುಂಬವನ್ನು ಅವಹೇಳನ ಮಾಡಿ ನಿಂದಿಸಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ. ಚುನಾವಣೆಯ ಸಂದರ್ಭದಲ್ಲಿ ಕೋಮು ಸೌಹಾರ್ದ ಹಾಳು ಮಾಡುವ ದುರದ್ದೇಶದಿಂದ ದಿನೇಶ್‌ ಗುಂಡೂರಾವ್‌ ಅವರ ಕುಟುಂದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಬಸವನಗೌಡ ಪಾಟೀಲ್‌ ಯತ್ನಾಳ್‌ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ತಿಳಿಸಲಾಗಿದೆ.

ಯತ್ನಾಳ್‌ ಹೇಳಿಕೆಗೆ ತಿರುಗೇಟು ನೀಡಿರುವ ದಿನೇಶ್‌ ಗುಂಡೂರಾವ್‌ ಪತ್ನಿ ತಬು ರಾವ್‌ ದಿನೇಶ್‌ ಗುಂಡೂರಾವ್‌ ಅವರ ಮನೆಯಲ್ಲಿ ಅರ್ಧ ಪಾಕಿಸ್ತಾನ ಇದೆ ಎಂಬ ಯತ್ನಾಳ್‌ ಅವರ ಹೇಳಿಕೆಯು ಅವಹೇಳನಕಾರಿ ಮತ್ತು ಮಾನಹಾನಿಕಾರವಾಗಿದೆ. ನಾನು ಮುಸಲ್ಮಾನಳಾಗಿ ಹುಟ್ಟಿರಬಹುದು. ಹಾಗೆಂದು ನನ್ನ ಭಾರತೀಯತೆಯನ್ನು ಯಾರು ಪ್ರಶ್ನಿಸಲು ಸಾಧ್ಯವಿಲ್ಲ. ಭಾರತೀಯ ಚುನುವಣಾ ಆಯೋಗ ಈ ಸಂಬಂಧ ಕ್ರಮ ಕೈಗೊಳ್ಳಲಿದೆಯೇ? ಪ್ರಧಾನಿ ಮೋದಿ, ಜೆಪಿ ನಡ್ಡಾ ಅವರು ಈ ವಿರುದ್ಧ ಕ್ರಮ ಕೈಗೊಳ್ಳುತ್ತಾರೆಯೆ? ಎಂದು ಪ್ರಶ್ನಿಸಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಮಳೆಯ ವಿವರ

ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…

8 hours ago

ಹಾರಂಗಿ ಜಲಾಶಯದ ಇಂದಿನ ನೀರಿನ ಮಟ್ಟ

ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…

8 hours ago

ತಮಿಳುನಾಡಿಗೆ ನಿತ್ಯ 9 ಸಾವಿರ ಕ್ಯೂಸೆಕ್ ನೀರು ಹರಿಸಿ – CWRC ಶಿಫಾರಸು ಎತ್ತಿಹಿಡಿದ CWMA

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…

8 hours ago

ಓದುಗರ ಪತ್ರ: ಭವಿಷ್ಯದ ಬೆಳಕಾಗಲಿ!

ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…

11 hours ago

ಓದುಗರ ಪತ್ರ: ಓದುಗರ ಪತ್ರ ಚಾಮುಂಡಿಬೆಟ್ಟ: ನೋ-ಫ್ಲೈಝೋನ್ ಆಗಲಿ

ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…

11 hours ago

ಓದುಗರ ಪತ್ರ: ಪ್ರೇಕ್ಷಕರ ಆಸಕ್ತಿಗೆ ತಕ್ಕಂತೆ ಕಾರ್ಯಕ್ರಮ ಆಯೋಜಿಸಿ

ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…

11 hours ago