ರಾಜ್ಯ

ಸಿಎಂ ಸಿದ್ಧರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ಮತ್ತೊಂದು ಪ್ರಕರಣ ದಾಖಲು

ಬೆಂಗಳೂರು: ಅಧಿಕಾರ ದುರುಪಯೋಗ, ವಂಚನೆ ಮತ್ತು ಭ್ರಷ್ಟಾಚಾರ ಅಡಿಯಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ಮತ್ತೊಂದು ಪ್ರಕರಣ ದಾಖಲಾಗಿದೆ.

ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಪತ್ನಿ ಬಿ. ಎಂ ಪಾರ್ವತಿ, ಬಾವಮೈದುನ ಬಿ. ಎಂ. ಮಲ್ಲಿಕಾರ್ಜುನ ಸ್ವಾಮಿ, ಮುಡಾ ಮಾಜಿ ಅಧ್ಯಕ್ಷರುಗಳಾದ ಬಸವೇಗೌಡ, ಎಚ್.ವಿ, ರಾಜೀವ್ ಮತ್ತು ಆಯುಕ್ತರಾಗಿದ್ದ ಡಿ.ಬಿ ನಟೇಶ್ ಅವರ ವಿರುದ್ಧವೂ ಸಹ ದೂರು ದಾಖಲಾಗಿದೆ.ಎನ್‌.ಆರ್‌ ರಮೇಶ್ ಎಂಬುವವರು ಈ ಬಗ್ಗೆ ದೂರು ದಾಖಲಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಈ ಬೃಹತ್ ಹಗರಣಕ್ಕೆ ಸಂಬಂಧಿಸಿದ 383 ಪುಟಗಳ ಸಂಪೂರ್ಣ ದಾಖಲೆಗಳನ್ನು ರಮೇಶ್‌ ಬಿಡುಗಡೆ ಮಾಡಿದ್ದಾರೆ.

ಮೈಸೂರು ನಗರ ಅಭಿವೃದ್ಧಿ ಪ್ರಾಧಿಕಾರ (MUDA) ದಲ್ಲಿ ಬದಲಿ ನಿವೇಶನಗಳ ಹೆಸರಿನಲ್ಲಿ ನಡೆದಿರುವ ಬೃಹತ್ ಹಗರಣದ ಬಗ್ಗೆ ಪ್ರಸ್ತಾಪಿಸಿರುವ ಅವರು ಸಿಎಂ ಸಿದ್ದರಾಮಯ್ಯ ತಮ್ಮ ರಾಜಕೀಯ ಪ್ರಭಾವದಿಂದ ತಮ್ಮ ಪತ್ನಿಯ ಹೆಸರಿಗೆ ಕಾನೂನು ಬಾಹಿರವಾದ ಬದಲಿ ನಿವೇಶನಗಳ ಹಂಚಿಕೆಯ ಕಾರ್ಯದಲ್ಲಿ 40 ಕೋಟಿ ರೂ.ಗಳಿಗೂ ಹೆಚ್ಚು ಮೊತ್ತ ಸರ್ಕಾರಕ್ಕೆ ನಷ್ಟ ಉಂಟು ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

50:50 ರ ಅನುಪಾತದಲ್ಲಿ ಪಾರ್ವತಿ ಕೋಂ ಸಿದ್ಧರಾಮಯ್ಯನವರಿಗೆ “ದೇವನೂರು 3ನೇ ಹಂತದ ಬಡಾವಣೆ”ಯ ಬದಲಾಗಿ ಮುಡಾ ಮಾಲೀಕತ್ವದ ಬೇರೊಂದು ಬಡಾವಣೆಯಲ್ಲಿ ಒಟ್ಟು 38,284 ಚ. ಅಡಿ ವಿಸ್ತೀರ್ಣದ ಸ್ವತ್ತನ್ನು “ಬದಲಿ ನಿವೇಶನ”ದ ಹೆಸರಿನಲ್ಲಿ ಮಂಜೂರು ಮಾಡುವ ಬಗ್ಗೆ ಮುಡಾದ ಅಧಿಕಾರಿಗಳು ನಿರ್ಣಯವನ್ನು ಅನುಮೋದಿಸಿದ್ದರು.

“ದೇವನೂರು 3ನೇ ಹಂತದ ಬಡಾವಣೆ” ಯಲ್ಲಿನ ನಿವೇಶನಗಳ ಬದಲಾಗಿ ಪ್ರತಿ ಚ. ಅಡಿಗೆ 12,000 ಗಳಿಗಿಂತಲೂ ಹೆಚ್ಚಿರುವ ಮೈಸೂರಿನ ಅತ್ಯಂತ ಪ್ರತಿಷ್ಠಿತ ಬಡಾವಣೆಗಳಲ್ಲಿ ಒಂದಾಗಿರುವ “ವಿಜಯನಗರ 03 ಮತ್ತು 04ನೇ ಹಂತದ ಬಡಾವಣೆ”ಗಳಲ್ಲಿ ಒಟ್ಟು 38,284 ಚ. ಅಡಿ ವಿಸ್ತೀರ್ಣದ 14 ನಿವೇಶನಗಳನ್ನು “ಬದಲಿ ನಿವೇಶನ”ದ ಹೆಸರಿನಲ್ಲಿ ಶ್ರೀಮತಿ. ಬಿಎಂ ಪಾರ್ವತಿಯವರ ಹೆಸರಿಗೆ 2021-2022 ರಲ್ಲಿ ಕಾನೂನಿನ ಎಲ್ಲಾ ನಿಯಮಗಳನ್ನು ಮೀರಿ ಹಂಚಿಕೆ ಮಾಡಲಾಗಿದೆ.

ಅಂದಿನ ಮುಡಾ ಅಧ್ಯಕ್ಷರಾಗಿದ್ದ ಎಚ್‌ವಿ ರಾಜೀವ್ ಮತ್ತು ಆಯುಕ್ತರಾಗಿದ್ದ ಡಿಬಿ ನಟೇಶ್ ಸಿದ್ಧರಾಮಯ್ಯನವರ ಧರ್ಮಪತ್ನಿ ಪಾರ್ವತಿ ಅವರ ಹೆಸರಿಗೆ ಮೈಸೂರಿನ ವಿಜಯನಗರ ಬಡಾವಣೆ 03ನೇ ಹಂತ ಮತ್ತು 04ನೇ ಹಂತದ ಪ್ರದೇಶಗಳಲ್ಲಿ ಒಟ್ಟು 14 ನಿವೇಶನಗಳನ್ನು ಹಂಚಿಕೆ ಮಾಡಿ ನೋಂದಣಿ ಮಾಡಿಕೊಂಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 26, ಶುಕ್ರವಾರ  

30 mins ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಕನ್ನಡಕ್ಕೊಂದು ಒಟಿಟಿ, ʼಗರುಡ ಪುರಾಣʼ ಇತ್ಯಾದಿ

‘ವೆನ್ ಯು ವಾಂಟ್ ಟು ಡು ಸಮ್‌ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್‌ಇಟ್’ ಇದು ಅತ್ಯಂತ ಪ್ರಚಲಿತವಿರುವ…

36 mins ago

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

17 hours ago

ಕೆಎಸ್‌ಓಯುಗೆ ನೂತನ ಕುಲಪತಿಯಾಗಿ ಡಾ.ಜ್ಞಾನ ಪ್ರಕಾಶ್ ನೇಮಕ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…

17 hours ago

ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಮಹಿಳೆ

ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…

19 hours ago

ಮಾಜಿ ಸಿಎಂ ದೇವರಾಜ ಅರಸು ನೂತನ ಪ್ರತಿಮೆ ಅನಾವರಣ

ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…

19 hours ago