ಬೆಂಗಳೂರು: ನಿನ್ನೆ ಬೆಳ್ಳಂಬೆಳಗ್ಗೆ ಶಾಲೆಗಳ ಮೇಲೆ ಹುಸಿ ಬಾಂಬ್ ಕರೆಗಳು ಉದ್ಯಾನನಗರಿ ಬೆಂಗಳೂರನ್ನು ಬೆಚ್ಚಿ ಬೀಳಿಸಿತ್ತು. ಈ ಕುರಿತು ಪೊಲೀಸರು ಕಾರ್ಯಾಚರಣೆಯನ್ನು ಚುರುಕುಗೊಳಿಸಿದ್ದಾರೆ.
ಬೆಳಗ್ಗೆ 15 ಶಾಲೆಗಳಿಂದ ಪ್ರಾರಂಭವಾಗಿ ಬಳಿಕ ಏಕಾಏಕಿ 42 ಶಾಲೆಗಳಿಗೆ ಹುಸಿ ಬಾಂಬ್ ಸಂದೇಶಗಳು ಬಂದಿದ್ದವು.
ಕೂಡಲೇ ಎಚ್ಚೆತ್ತುಕೊಂಡ ಶಾಲಾ ಆಡಳಿತ ಮಂಡಳಿ ಮತ್ತು ಬೆಂಗಳೂರು ಪೊಲೀಸ್ ಅಧಿಕಾರಿಗಳು ಬಾಂಬ್ ಸಂದೇಶ ಬಂದ ಎಲ್ಲಾ ಶಾಲೆಗಳನ್ನು ಬಾಂಬಾ ಸ್ಕ್ವಾಡ್ ಕರೆಸಿ ತಪಾಸಣೆಗೆ ಒಳಪಡಿಸಿದರು. ಬಳಿಕ ಇದೊಂದು ಹುಸಿ ಬಾಂಬ್ ಸಂದೇಶ ಎಂದು ತಿಳಿದು ಬಂದಿತ್ತು.
ಇದನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ, ಇದರ ಹಿಂದೆ ಯಾರೆಲ್ಲಾ ಇದ್ದಾರೆ ಎಂದು ಆದಷ್ಟು ಬೇಗ ಪತ್ತೆ ಹಚ್ಚುವಂತೆ ಮತ್ತು ಅವರು ಯಾರೇ ಆಗಿರಲಿ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಬೆಂಗಳೂರು ಪೊಲೀಸರಿಗೆ ಸೂಚನೆ ನೀಡಿದೆ.
ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 48 ಎಫ್ಐಆರ್ಗಳನ್ನು ದಾಖಲಿಸಲಾಗಿದೆ ಎಂದು ತಿಳಿದು ಬಂದಿದ್ದು ಬೆಂಗಳೂರು ಪೊಲೀಸರು ತನಿಖೆಯನ್ನು ಇನ್ನಷ್ಟು ಚುರುಕುಗೊಳಿಸಿದ್ದಾರೆ.
ಬಜೆಟ್ ಪೂರ್ವ ಸಭೆಯಲ್ಲಿ ಪ್ರಸ್ತಾಪಗೊಂಡ ಹಸಿರು ಗೋಡೆ ಯೋಜನೆ ರಾಜ್ಯದ ಪರಿಸರ ರಕ್ಷಣೆಗೆ ಆಪದ್ಬಾಂಧವನಂತಿದೆ. ಉತ್ತರ ಕರ್ನಾಟಕದಲ್ಲಿ ಮರುಭೂಮೀಕರಣ ತಡೆಗಟ್ಟಲು…
ದೇಶಕ್ಕೇ ಮಾದರಿಯಾಗಿರುವ ಮೈಸೂರನ್ನು ನಿರ್ಮಿಸಿದ ಮೈಸೂರು ಸಂಸ್ಥಾನದ ಮಹಾರಾಜರುಗಳು ಅನುಸರಿಸಿದ ಯೋಜನೆಗಳ ಮಾದರಿಯಲ್ಲೇ, ಗ್ರೇಟರ್ ಮೈಸೂರನ್ನು ನಿರ್ಮಾಣ ಮಾಡಬೇಕು ಎಂದು…
ಪ್ರತಿನಿತ್ಯ ನಗರದ ವಿವಿಧ ವೃತ್ತಗಳ ಸಿಗ್ನಲ್ ಬಳಿ ಕಾಯುವ ವಾಹನ ಸವಾರರು ೧೦೦ ಸೆಕೆಂಡಿಗಿಂತಲೂ ಹೆಚ್ಚು ಕಾಲ ನಿಂತರೆ ನಮ್ಮ…
ಮೈಸೂರು ನಗರದ ಸುತ್ತಮುತ್ತ ಇರುವ ವಿವಿಧ ದೇವಾಲಯಗಳನ್ನು ನಿರ್ವಹಿಸುತ್ತಿರುವ ಟ್ರಸ್ಟ್ಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಹುಂಡಿಯ ಹಣ ಹಾಗೂ ಭಕ್ತರು ನೀಡುವ…
ಕೆಟ್ಟು ೨-೩ ತಿಂಗಳಾದರೂ ದುರಸ್ತಿ ಭಾಗ್ಯವಿಲ್ಲ; ಬೇಗ ರಿಪೇರಿ ಮಾಡಿಸಲು ನಾಗರಿಕರ ಆಗ್ರಹ ಚಾಮರಾಜನಗರ: ನಗರದಲ್ಲಿ ನೈರ್ಮಲ್ಯ ಕಾಪಾಡಲು ನಗರಸಭೆಯು…
ಚಿರಂಜೀವಿ ಸಿ. ಹುಲ್ಲಹಳ್ಳಿ ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ಪ್ರಸಾರಾಂಗವು ಆಯೋಜಿಸಿರುವ ವಿಶೇಷ ರಿಯಾಯಿತಿ ಪುಸ್ತಕ ಮಾರಾಟಕ್ಕೆ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…