mahesh shetty timrodi
ಮಂಗಳೂರು: ಎಸ್ಐಟಿ ಶೋಧದ ವೇಳೆ ಮನೆಯಲ್ಲಿ ಅಕ್ರಮ ಶಸ್ತ್ರಾಸ್ತ್ರ ಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹೇಶ್ ಶೆಟ್ಟಿ ತಿಮರೋಡಿಗೆ ಮೂರನೇ ಹಾಗೂ ಅಂತಿಮ ನೋಟಿಸ್ ಅನ್ನು ಜಾರಿ ಮಾಡಲಾಗಿದೆ.
ಮನೆ ಶೋಧದ ಸಂದರ್ಭದಲ್ಲಿ ತಿಮರೋಡಿ ಮನೆಯಲ್ಲಿ ಎಸ್ಐಟಿ ಅಧಿಕಾರಿಗಳು 2 ತಲ್ವಾರ್, ಒಂದು ಬಂದೂಕನ್ನು ವಶಕ್ಕೆ ಪಡೆದಿದ್ದರು. ಈ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಎಸ್ಐಟಿ ಅಧಿಕಾರಿಗಳು ಎರಡು ನೋಟಿಸ್ ಜಾರಿ ಮಾಡಿದ್ದರು.
ಇದನ್ನು ಓದಿ : ದಕ್ಷಿಣ ಕನ್ನಡ ಜಿಲ್ಲೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡೀಪಾರು
ಆದರೆ ಮಹೇಶ್ ಶೆಟ್ಟಿ ತಿಮರೋಡಿ ಎರಡು ಬಾರಿಯೂ ವಿಚಾರಣೆಗೆ ಹಾಜರಾಗಿಲ್ಲ. ಈ ಹಿನ್ನೆಲೆಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಲೇಬೇಕೆಂದು ಸೂಚನೆ ನೀಡಿ ಅಂತಿಮ ನೋಟಿಸ್ ಅನ್ನು ಜಾರಿ ಮಾಡಲಾಗಿದೆ.
ಇಂದು ಬೆಳ್ತಂಗಡಿ ಠಾಣೆಯ ಪೊಲೀಸರು ಮಹೇಶ್ ಶೆಟ್ಟಿ ತಿಮರೋಡಿ ಮನೆಗೆ ತೆರಳಿ ನೋಟಿಸ್ ಅಂಟಿಸಿದ್ದಾರೆ. ಸೆಪ್ಟೆಂಬರ್.29ಕ್ಕೆ ವಿಚಾರಣೆಗೆ ಹಾಜರಾಗಬೇಕು. ಒಂದು ವೇಳೆ ವಿಚಾರಣೆಗೆ ಹಾಜರಾಗದೇ ಇದ್ದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಬಂಧನಕ್ಕೆ ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ.
ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್ನ ಕಾನ್ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…
ಎಚ್.ಎಸ್.ದಿನೇಶ್ ಕುಮಾರ್ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…
ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…
ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…
ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ…